Get Updates
Get notified of breaking news, exclusive insights, and must-see stories!

BPL card: ಬಿಪಿಎಲ್‌ ಕಾರ್ಡ್‌ಗಳಿಗೆ ಕತ್ತರಿ?, ಕಾರ್ಡ್‌ ಪಡೆಯಲು ಅರ್ಹತೆಗಳು

ಬೆಂಗಳೂರು, ಜುಲೈ 10: ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಎರಡು ದಿನಗಳ ಕಾಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿದರು. ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. ಪ್ರಮುಖವಾಗಿ ಬಿಪಿಎಲ್‌ ಕಾರ್ಡ್‌ಗಳ ಕುರಿತು ಮಹತ್ವದ ಚರ್ಚೆ ನಡೆದಿದೆ.

ಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅನರ್ಹರು ಬಿಪಿಎಲ್ ಕಾರ್ಡ್‌ ಪಡೆದಿರುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ. ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಅವರ ಕಾರ್ಡ್‌ ಅನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲು ಸೂಚನೆ ನೀಡಿದ್ದಾರೆ.

Know Rule To Get BPL Card In Karnataka

ಅಧಿಕಾರಿಗಳು ಸಭೆಯಲ್ಲಿ ನೀಡಿರುವ ಮಾಹಿತಿ ಅನ್ವಯ ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಆದರೆ 4.37 ಕೋಟಿ ಬಿಪಿಎಲ್‌ ಕಾರ್ಡ್‌ಗಳಿವೆ. ಅಲ್ಲದೇ ಹೊಸದಾಗಿ ಬಿಪಿಎಲ್ ಕಾರ್ಡ್‌ಗಳಿಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ವಿಲೇವಾರಿಯಾಗಬೇಕಿದೆ.

ನೀತಿ ಆಯೋಗದ ವರದಿ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ ಕಡಿಮೆಯಾಗಿಲ್ಲ. ಇದಕ್ಕೆ ಕಾರಣವೇನು? ಎಂದು ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ಅನರ್ಹರನ್ನು ಗುರುತಿಸಿ ಅವರ ಕಾರ್ಡ್‌ ಅನ್ನು ಎಪಿಎಲ್ ಕಾರ್ಡ್‌ ಆಗಿ ಪರಿವರ್ತನೆ ಮಾಡಿ ಎಂದು ಸೂಚನೆ ನೀಡಿದ್ದಾರೆ.

ಕಾರ್ಡ್ ಪಡೆಯಲು ಅರ್ಹತೆಗಳು: ಸದ್ಯದ ಮಾರ್ಗಸೂಚಿಗಳ ಅನ್ವಯ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ ಪಡೆಯಲು ಹಲವಾರು ನಿಯಮಗಳಿವೆ. ಕಾರ್ಡ್‌ ಪಡೆಯುವವರ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತಲೂ ಕಡಿಮೆ ಇರಬೇಕು.

ಬಿಳಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ನಾಲ್ಕು ಚಕ್ರದ ವಾಹನವನ್ನು ಹೊಂದಿರುವಂತಿಲ್ಲ. ಆದಾಯ ತೆರಿಗೆ ರಿಟರ್ನ್‌ ಪಾವತಿ ಮಾಡುವವರು ಬಿಪಿಎಲ್ ಕಾರ್ಡ್‌ ಪಡೆಯುವಂತಿಲ್ಲ.

ಹಳ್ಳಿಯಲ್ಲಿ 3 ಹೆಕ್ಟೇರ್ ಒಣಭೂಮಿ/ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು. ನಗರ ಪ್ರದೇಶದಲ್ಲಿ 1000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ.

ಸರ್ಕಾರಿ ಮತ್ತು ಅರೆ ಸರ್ಕಾರಿ ಉದ್ಯೋಗದಲ್ಲಿರುವವರು ಬಿಪಿಎಲ್ ಕಾರ್ಡ್‌ ಪಡೆಯುವಂತಿಲ್ಲ. ಆದರೆ ಈಗ ಒಂದು ಮನೆಯಲ್ಲಿ ಮೂರು, ನಾಲ್ಕು ಬಿಪಿಎಲ್ ಕಾರ್ಡ್‌ಗಳಿವೆ. ಅವುಗಳನ್ನು ಪತ್ತೆ ಹಚ್ಚಿ, ಅನರ್ಹ ಕಾರ್ಡ್‌ಗಳನ್ನು ಎಪಿಲ್ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಏಕೆ ಇಷ್ಟು ಬೇಡಿಕೆ?; ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ ಹೆಚ್ಚಾಗಲು ಕಾರಣವೇನು? ಎಂದು ನೋಡುತ್ತಾ ಹೋದರೆ ಅಚ್ಚರಿಯ ಅಂಶಗಳು ಬಯಲಾಗುತ್ತವೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಯೋಜನ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಾಗಿ ಹೆಚ್ಚು ಜನರು ಬಿಪಿಎಲ್ ಕಾರ್ಡ್ ಮಾಡಿಸಿಲ್ಲ.

ಆರೋಗ್ಯ ಸೇವೆಗಾಗಿಯೇ ಹೆಚ್ಚು ಜನರು ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಬಿಪಿಎಲ್ ಕಾರ್ಡ್‌ ಇದ್ದರೆ ಕ್ಯಾನ್ಸರ್, ಕಿಡ್ನಿ, ಹೃದಯ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ರಿಯಾಯಿತಿ ದರದಲ್ಲಿ/ ಉಚಿತವಾಗಿ ಚಿಕಿತ್ಸೆ ಸಿಗುತ್ತದೆ. ಆದ್ದರಿಂದ ಜನರು ಕಾರ್ಡ್ ಪಡೆಯಲು ಹೆಚ್ಚು ಹೆಚ್ಚು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಕಲು ಬಿಪಿಎಲ್ ಕಾರ್ಡ್ ಪತ್ತೆಗಾಗಿ ವಿವಿಧ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಅದರಂತೆ ಆಹಾರ ಇಲಾಖೆ, ಸಾರಿಗೆ ಇಲಾಖೆ, ಕಂದಾಯ ಇಲಾಖೆಗಳು ಒಂದಾಗಿ ಕೆಲಸ ಮಾಡಲಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಗಳ ವಿವರಗಳನ್ನು ಹೊಸದಾಗಿ ಸಂಗ್ರಹ ಮಾಡಲಾಗುತ್ತದೆ. ನಕಲಿ ದಾಖಲೆ ನೀಡಿ ಕಾರ್ಡ್ ಪಡೆದಿದ್ದರೆ ಅವರ ಕಾರ್ಡ್‌ ರದ್ದುಗೊಳಿಸಿ, ಎಪಿಎಲ್ ಕಾರ್ಡ್‌ ಆಗಿ ಪರಿವರ್ತಿಸಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+