ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು ಪ್ರವಾಹದಿಂದ 3 ಸಾವಿರ ಕೋಟಿ ನಷ್ಟ: ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಆಗಸ್ಟ್ 24: ಕೊಡಗಿನಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತ ಮುಂತಾದವುಗಳಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂಬುದಾಗಿ ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

ಕೊಡಗಿಗೆ 1 ಕೋಟಿ ನೀಡಿದ ಕೇಂದ್ರ ಸಚಿವೆ, ಹೆಚ್ಚಿನ ನೆರವಿಗೆ ಮನವಿ ಮಾಡುವುದಾಗಿ ಭರವಸೆಕೊಡಗಿಗೆ 1 ಕೋಟಿ ನೀಡಿದ ಕೇಂದ್ರ ಸಚಿವೆ, ಹೆಚ್ಚಿನ ನೆರವಿಗೆ ಮನವಿ ಮಾಡುವುದಾಗಿ ಭರವಸೆ

ಕೊಡಗಿನಲ್ಲಿ ಪ್ರವಾಹ ದುರಂತದಿಂದ ಮೂರು ಸಾವಿರ ಕೋಟಿ ರೂ ನಷ್ಟ ಸಂಭವಿಸಿದೆ. ಸಂತ್ರಸ್ತರಿಗೆ ನೆರವಾಗಲು 2 ಸಾವಿರ ಕೋಟಿ ರೂ. ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರು ಮತ್ತು ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.

kodagu floods Rs 3000 crores loss hd kumaraswamy

ಮುಖ್ಯಮಂತ್ರಿಗಳ ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಇದುವರೆಗೂ 25.16 ಕೋಟಿ ರೂಪಾಯಿ ದೇಣಿಗೆ ಬಂದಿದೆ. ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನದಿಂದ 102 ಕೋಟಿ ರೂ. ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

ಇದಕ್ಕೂ ಮೊದಲು ಕೊಡಗಿಗೆ ಭೇಟಿ ನೀಡಿದ್ದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಲ್ಲಿ ಉಂಟಾದ ಹಾನಿಯನ್ನು ಪರಿಶೀಲಿಸಿದ್ದರು. ಬಳಿಕ ತಮ್ಮ ಸಂಸದರ ನಿಧಿಯಿಂದ ಒಂದು ಕೋಟಿ ರೂಪಾಯಿ ನೀಡುವುದಾಗಿ ಪ್ರಕಟಿಸಿದ್ದರು.

ರಕ್ಷಣಾ ಕಾರ್ಯತಂಡಕ್ಕೆ ಏಳು ಕೋಟಿ ರೂ. ಬಿಡುಗಡೆ ಮಾಡಲಾಗುವುದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಕೊಡಗಿಗೆ ಭೇಟಿ ನೀಡಲಿದ್ದು, ಅಧ್ಯಯನ ನಡೆದಿ ವರದಿ ಸಲ್ಲಿಸಲಿದೆ ಎಂದು ಹೇಳಿದ್ದರು.

English summary
Chief Minister HD Kumaraswamy on Friday estimated loss over Rs. 3,000 crores in the Kodagu floods and he asked the Centre to provide Rs. 2000 crores for relief
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X