ಕೊಡಗಿನಲ್ಲಿ 2,621 ಎಚ್ಐವಿ ಸೋಂಕಿತರು!
ಮಡಿಕೇರಿ, ಡಿಸೆಂಬರ್ 1: ಕೊಡಗು ಜಿಲ್ಲೆಯಲ್ಲಿ ಒಟ್ಟು 2,31,333 ಜನರನ್ನು ಪರೀಕ್ಷಿಸಲಾಗಿದ್ದು, 2,621 ಎಚ್ ಐವಿ ಸೋಂಕಿತರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ ಸಾಮಾನ್ಯ ವರ್ಗದವರಲ್ಲಿ 2,405 ಹಾಗೂ ಗರ್ಭಿಣಿಯರಲ್ಲಿ 216 ಎಚ್ ಐವಿ ಸೋಂಕಿತರು ಇದ್ದಾರೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ್ ತಿಳಿಸಿದ್ದಾರೆ.
"ಎಚ್ ಐವಿ ತಡೆಗೆ ಕೈಜೋಡಿಸಿ" ಘೋಷಣೆಯಡಿ ಡಿಸೆಂಬರ್ 1 ರಂದು "ವಿಶ್ವ ಏಡ್ಸ್ ದಿನ-2016" ಕಾರ್ಯಕ್ರಮವನ್ನು ಮಡಿಕೇರಿಯಲ್ಲಿ ಆಯೋಜಿಸಿದ್ದೇವೆ. 1988ರಿಂದ "ವಿಶ್ವ ಏಡ್ಸ್" ದಿನಾಚರಣೆಯನ್ನು ಪ್ರಾರಂಭಿಸಲಾಯಿತು. ವರ್ಷಂಪ್ರತಿ ರಾಷ್ಟ್ರದಾದ್ಯಂತ ವಿಶ್ವ ಏಡ್ಸ್ ದಿನವನ್ನು ಡಿಸೆಂಬರ್ 1ರಂದು ಆಚರಿಸಲಾಗುತ್ತದೆ ಎಂದರು.[ಏಡ್ಸ್ ಮನೋರೋಗಕಾರಿ, ಅರಿತರೆ ಸಹಕಾರಿ]

ಪ್ರಮುಖವಾಗಿ ಎಚ್ ಐವಿ ಹರಡುವುದನ್ನು ಹೇಗೆ ತಡೆಯಬಹುದು, ಏಡ್ಸ್ ನಿರ್ದಿಷ್ಟ ಲಕ್ಷಣಗಳು, ಎಚ್ ಐವಿಗೆ ಚಿಕಿತ್ಸೆ ಇನ್ನಿತರ ಮಾರ್ಗೋಪಾಯಗಳನ್ನು ಮಡಿಕೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಿಳಿಸಲಾಗುವುದು. ಕೊಡಗು ಜಿಲ್ಲೆಯಲ್ಲಿ 2002ರಿಂದ 2016 ಅಕ್ಟೋಬರ್ ವರೆಗೆ ಒಟ್ಟು 2,31,333 ಜನರನ್ನು ಪರೀಕ್ಷಿಸಲಾಗಿತ್ತು. ಕ್ಷಯ ರೋಗವು ಎಚ್ ಐವಿ ಸೋಂಕಿತರಲ್ಲಿ ಸಾಮಾನ್ಯ ಸಂಭವನೀಯ ಸೋಂಕು.[ಡಿಸೆಂಬರ್ 1 ಏಡ್ಸ್ ದಿನಾಚರಣೆ : ಒಂದಿಷ್ಟು ಉಪಯುಕ್ತ ಮಾಹಿತಿ]
2009ರಲ್ಲಿ ಶೇ 25ರಷ್ಟು ಇತ್ತು. 2015ರಲ್ಲಿ ಶೇ 5ಕ್ಕೆ ಇಳಿಮುಖಗೊಂಡು ಒಟ್ಟು 108 ಕ್ಷಯ ರೋಗಿಗಳಲ್ಲಿ ಎಚ್ ಐವಿ ಸೋಂಕನ್ನು ಪತ್ತೆ ಹಚ್ಚಲಾಗಿದೆ. ಕೊಡಗು ಜಿಲ್ಲೆಯಲ್ಲಿ 685 ಮಹಿಳಾ ಲೈಂಗಿಕ ಕಾರ್ಯಕರ್ತೆಯರಿದ್ದಾರೆ. ಸುಮಾರು 123 ಎಂಎಸ್ಎಂ (ಪುರುಷ-ಪುರುಷರೊಂದಿಗೆ ಲೈಂಗಿಕ ಸಂಪರ್ಕವಿರುವವರು) ಇದ್ದಾರೆ ಎಂದು ಡಾ.ಶಿವಕುಮಾರ್ ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications