ಸೇಡಿಗೆ ಸೇಡು ಬಿಜೆಪಿಯಿಂದ ಪಾದಯಾತ್ರೆಗೆ ಸಿದ್ಧತೆ!
ಕೊಡಗು, ಜುಲೈ 13 : ಅವತ್ತು ಅಕ್ರಮ ಗಣಿಗಾರಿಕೆ ವಿರುದ್ಧ ತೊಡೆ ತಟ್ಟಿ ಬೆಂಗಳೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಸೇಡು ತೀರಿಸಿಕೊಳ್ಳುವ ಸಮಯ ಬಿಜೆಪಿಗೆ ಇದೀಗ ಬಂದಿದೆ.
ಏಟಿಗೆ
ಎದಿರೇಟು
ಎಂಬಂತೆ
ಬಿಜೆಪಿ
ಕೊಡಗಿನಿಂದ
ಬೆಂಗಳೂರು
ತನಕ
ಪಾದಯಾತ್ರೆ
ನಡೆಸಲು
ನಿರ್ಧರಿಸಿದೆ.
ಈ
ಕುರಿತಂತೆ
ಬಿಜೆಪಿ
ರಾಜ್ಯಾಧ್ಯಕ್ಷ
ಬಿ.ಎಸ್.ಯಡಿಯೂರಪ್ಪ
ಪಕ್ಷದ
ಶಾಸಕರ
ಜತೆ
ಚರ್ಚೆ
ನಡೆಸಿದ್ದು,
ಸದ್ಯದಲ್ಲೇ
ದಿನಾಂಕ
ಪ್ರಕಟಿಸುವ
ಸಾಧ್ಯತೆಯಿದೆ.
[ರೆಡ್ಡಿಗಳ
ಸವಾಲಿಗೆ
ಸಿದ್ದ
:
ಸಿದ್ದರಾಮಯ್ಯ]
ಈಗಾಗಲೇ ಕೊಡಗು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹಲವು ಕಾರಣಗಳಿಗೆ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನವಿದೆ. ಇದನ್ನು ಬಳಸಿಕೊಳ್ಳಲು ಯತ್ನಿಸಿರುವ ಬಿಜೆಪಿ ಅದನ್ನು ಮುಂದಿನ ಚುನಾವಣೆಯಲ್ಲಿ ಮತಗಳಾಗಿ ಪರಿವರ್ತಿಸಲು ಮುಂದಾಗಿದೆ. [ಸಿದ್ದರಾಮಯ್ಯ ಸರ್ಕಾರವನ್ನು ಕಾಡಿದ 10 ವಿವಾದಗಳು]
ಕೊಡಗಿನಿಂದ ಪಾದಯಾತ್ರೆ ಆರಂಭಿಸಿದ್ದೇ ಆದರೆ ಅದಕ್ಕೆ ಅಭೂತಪೂರ್ವ ಯಶಸ್ಸು ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಪಾದಯಾತ್ರೆಯನ್ನು ಕೊಡಗಿನಿಂದ ಆರಂಭಿಸಿ ಮೈಸೂರು, ಮಂಡ್ಯ ಮಾರ್ಗವಾಗಿ ಬೆಂಗಳೂರಿಗೆ ಬರಬೇಕೋ ಅಥವಾ ಮಂಗಳೂರಿಗೆ ಹೋಗಿ ಆ ಮೂಲಕ ಬೆಂಗಳೂರಿಗೆ ಬರಬೇಕೋ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. [ಮೈಸೂರಲ್ಲಿ ಎಗ್ಗಿಲ್ಲದೆ ಸಾಗಿರುವ ಮರಳು ದಂಧೆ]
420 ಕಿ.ಮೀ. ಪಾದಯಾತ್ರೆ ನಡೆಸಿ ಬಳ್ಳಾರಿ ತಲುಪಿದ್ದ ಸಿದ್ದರಾಮಯ್ಯ ಅವರು 2013ರ ಚುನಾವಣೆಯಲ್ಲಿ ಅಧಿಕಾರ ಹಿಡಿಯುವಲ್ಲಿ ಸಫಲರಾಗಿದ್ದರು. ಇದೀಗ ಬಿಜೆಪಿ ಅದನ್ನೇ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಈಗಾಗಲೇ ಬಯಲಾಗಿದ್ದು ಅಧಿಕಾರಿಗಳ ಆತ್ಮವಿಶ್ವಾಸ ಕುಂದಿಸುವ ಕೆಲಸ ನಡೆಯುತ್ತಿದೆ ಎಂಬುದು ಜಗಜ್ಜಹೀರಾಗಿದೆ. [ಕೆಆರ್ ಪೇಟೆ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆಗಿಲ್ಲ ಅಂಕುಶ]
ಇತ್ತೀಚೆಗೆ ಪೊಲೀಸರೇ ಬೀದಿಗೆ ಇಳಿಯುವಂತಹ ಸ್ಥಿತಿ ಬಂದಿದ್ದು, ಅಧಿಕಾರಿಗಳು, ರೈತರು ನೇಣಿಗೆ ಶರಣಾಗುತ್ತಿರುವುದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಯಡಿಯೂರಪ್ಪ ಅವರು ಪಾದಯಾತ್ರೆಗೆ ಮುಂದಾಗುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.