Kodi Mutt Swamiji Prediction: ರಾಜ್ಯ ರಾಜಕೀಯ, ಮಳೆ, ಬೆಳೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ
Kodi Mutt Swamiji Prediction: ಕೋಡಿಮಠದ ಶ್ರೀಗಳು ರಾಜಕೀಯ, ಮಳೆ ಬಗ್ಗೆ ಆಗಾಗ ಸ್ಫೋಟಕ ಭವಿಷ್ಯಗಳನ್ನು ನುಡಿಯುತ್ತಲೇ ಇರುತ್ತಾರೆ. ಕೆಲವು ನಿಜವಾಗಿರುವ ಉದಾಹರಣೆಗಳಿವೆ ಎಂದು ಹಲವರು ಹೇಳುತ್ತಿದ್ದಾರೆ. ಈ ನಡುವೆಯೇ ಇದೀಗ ಇಂದು (ಮಾರ್ಚ್ 03) ಗದಗದಲ್ಲಿ ರಾಜ್ಯ ರಾಜಕೀಯ, ಮಳೆ, ಬೆಳೆ ಬಗ್ಗೆ ಭಯಾನಕ ಭವಿಷ್ಯವೊಂದನ್ನು ನುಡಿದಿದ್ದಾರೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಈಗಾಗಲೇ ಹಲವು ಸ್ವಾಮಿಗಳು ಕರ್ನಾಟಕ ರಾಜ್ಯದಲ್ಲಿ ಏನೆಲ್ಲಾ ಬದಲಾವಣೆಗಳಾಗಲಿವೆ ಎನ್ನುವ ಬಗ್ಗೆ ಭವಿಷ್ಯಗಳನ್ನು ನುಡಿದಿದ್ದಾರೆ. ಇವುಗಳಲ್ಲಿ ಹಲವು ನಿಜ ಕೂಡ ಆಗಿವೆ ಎಂದು ಹಲವರು ಹೇಳುತ್ತಿದ್ದಾರೆ. ಹಾಗೆಯೇ ಇದೀಗ ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಗದಗದಲ್ಲಿಂದು ರಾಜ್ಯದ ಬಗ್ಗೆ ಸ್ಫೋಟಕ ಭವಿಷ್ಯವಾಣಿ ನುಡಿದಿದ್ದಾರೆ.

ಈ ಬಾರಿ ಅಂದರೆ 2025ರಲ್ಲಿ ರಾಜ್ಯಕ್ಕೆ ಮಳೆ ಬೆಳೆ ಕೊರತೆಯಿಲ್ಲ. ಆದರೆ ರಾಷ್ಟ್ರದಲ್ಲಿ ಪ್ರಾಕೃತಿಕ ದೋಷಗಳು, ಹಿಮಪಾತ, ಭೂಕಂಪ, ಸುನಾಮಿಗಳಂತಹ ಘಟನೆಗಳು ನಡೆಯುತ್ತವೆ ಎಂದು ಗದಗದಲ್ಲಿ ಇಂದು ಭವಿಷ್ಯ ನುಡಿದಿದ್ದಾರೆ. ಅದರಲ್ಲೂ ಸಿಎಂ ಬದಲಾವಣೆ ವಿಷಯವಾಗಿ ನಾನು ವ್ಯಕ್ತಿಯೋಚಕ ಭವಿಷ್ಯವನ್ನು ನುಡಿಯುವುದಿಲ್ಲ. ವಿಜಯನಗರ ಸಾಮ್ರಾಜ್ಯ ಕಟ್ಟಿದ ಹಕ್ಕ-ಬುಕ್ಕರು ಹಾಲು ಮತದ ಸಮಾಜಕ್ಕೆ ಸೇರಿದವರಾಗಿದ್ದಾರೆ. ಹಾಲುಮತದ ಅಧಿಕಾರದಿಂದ ಮರಳಿ ಅಧಿಕಾರ ಪಡೆಯುವುದು ಕಷ್ಟ ಎಂದು ಹೇಳಿದರು.
ಇದೀಗ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಬಗ್ಗೆ ಮಾತನಾಡಿದ ಶ್ರೀಗಳು ಇಂದಿನ ರಾಜಕೀಯ ಚಿಂತನೆ ಭದ್ರವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರ ಕಿತ್ತುಕೊಳ್ಳುವುದು ಸುಲಭದ ಮಾತಲ್ಲ ಎಂದು ಹೇಳಿದರು. ಅಲ್ಲದೆ, ಡಿಸಿಎಂ ಡಿ.ಕೆ. ಶಿವಕುಮಾರ್ ಬಗ್ಗೆ ಮಾತನಾಡಿ, ಒಕ್ಕಲಿಗರು ಅನ್ನ ಕೊಡುವವರು. ಇಲ್ಲಿ ಜಾತಿ ಲೇಪನ ಮಾಡುವುದು ಬೇಡ. ಎಲ್ಲದಕ್ಕೂ ಯುಗಾದಿ ನಂತರ ಉತ್ತರ ಸಿಗಲಿದೆ ಎಂದು ಹೇಳಿದರು.
ಇದೀಗ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆ ಆಂಭಕ್ಕೂ ಮುನ್ನವೇ ರಣಬಿಸಿಲು ಮುಂದುವರೆದಿದೆ. ಇನ್ನೂ ಬೇಸಿಗೆ ಬಂದರೆ ಏನೆಲ್ಲಾ ಅನಾಹುತಗಳು ಸಂಭವಿಸಬಹುದು ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮತ್ತೊಂದೆಡೆ ಸ್ವಾಮೀಜಿಗಳು ನುಡಿಯುತ್ತಿರುವ ಭವಿಷ್ಯಗಳು ಕೂಡ ನಿಜವಾಗುತ್ತಿದೆ ಎಂದು ಹಲವರು ಹೇಳುತ್ತಿದ್ದಾರೆ. ಇದರಿಂದಲೂ ಕೂಡ ಜನರು ಭಯಭೀರತಾಗಿದ್ದಾರೆ.
ಸ್ವಾಮೀಜಿಗಳು ನುಡಿದಿರುವ ಪ್ರಕಾರ, ಮುಂದಿನ ದಿನಗಳಲ್ಲಿ ಏನೆಲ್ಲಾ ಘಟನೆಗಳು ಸಂಭವಿಸುತ್ತವೆಯೋ ಎನ್ನುವ ಭಯದ ನೆರಳಿನಲ್ಲಿದ್ದಾರೆ. ಹಾಗೆಯೇ ಈ ಬಾರಿಯೂ ಸಹ ರಣಭೀಕರ ಮಳೆಯಾಗಲಿದ ಎನ್ನುವ ಮುನ್ಸೂಚನೆಯೂ ಇದ್ದು, ಈ ಎಚ್ಚರಿಕೆ ಸಂದೇಶಗಳು ನದಿ ತೀರದ ಜನರಿಗೆ ಈಗಲೇ ನಡುಕ ಹುಟ್ಟಿಸಿವೆ.
ಮತ್ತೊಂದೆಡೆ ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಬಾಬಾ ವಂಗಾ ದಶಕಗಳ ಹಿಂದೆಯೇ ಅನೇಕ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. ಅವರು ನುಡಿದಿರುವ ಅನೇಕ ಭವಿಷ್ಯಗಳು ಇಲ್ಲಿಯವರೆಗೆ ನಿಜವಾಗಿವೆ ಎಂದು ತಿಳಿದುಬಂದಿದೆ. ಅವರು 2025ರ ವರ್ಷದಲ್ಲಿ ಕೆಲವು ಸ್ಫೋಟಕ ಭವಿಷ್ಯಗಳನ್ನು ನುಡಿದಿದ್ದರು.
2025ರಲ್ಲಿ ಪ್ರಪಂಚದ ವಿವಿಧ ಭಾಗಗಳಲ್ಲಿ ವಿನಾಶಕಾರಿ ಭೂಕಂಪಗಳು ಸಂಭವಿಸುತ್ತವೆ ಹಲವು ವರ್ಷಗಳ ಹಿಂದೆಯೇ ಹೇಳಿದ್ದರು. ಅಲ್ಲದೆ, ದೊಡ್ಡ ಪ್ರಮಾಣದಲ್ಲಿ ವಿನಾಶ ಸಂಭವಿಸುತ್ತದೆ ಮತ್ತು ಹೆಚ್ಚಿನ ಸಂಖ್ಯೆಯ ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಅಂತಲೂ ಹೇಳಿದ್ದರು. ಅ
ವರು ನುಡಿದ ಭವಿಷ್ಯದಂತೆ ಕಳೆದ ಕೆಲವು ದಿನಗಳಲ್ಲಿ ಅಮೆರಿಕದಿಂದ ಏಷ್ಯಾ ಖಂಡದವರೆಗೆ ಬಹಳಷ್ಟು ಭೂಕಂಪನದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ. ಇನ್ನು ಭಾರತದಲ್ಲಿಯೂ ದೆಹಲಿಯಿಂದ ಬಿಹಾರ ಮತ್ತು ಬಂಗಾಳದವರೆಗೆ ಭೂಮಿ ಕಂಪಿಸಿದೆ. ಇದೀಗ ಈ ಎಲ್ಲಾ ದುರಂತಗಳನ್ನು ಗಮನಿಸಿದಾಗ ಬಾಬಾ ವಂಗಾ ನುಡಿದ ಭವಿಷ್ಯಗಳು ನಿಜವಾಗಿದ್ದು, ಜನರಲ್ಲಿ ಆತಂಕ ಉಂಟಾಗಿದೆ.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications