Kodi Mutt Swamiji Prediction: ಶ್ರಾವಣ ಮಾಸದ ಬಗ್ಗೆ ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು

Kodi Mutt Seer Prediction: ಕೋಡಿ ಮಠದ ಶ್ರೀಗಳು ಆಗಾಗ ಭಯಾನಕ ಭವಿಷ್ಯಗಳನ್ನು ನುಡಿಯುತ್ತಲೇ ಇರುತ್ತಾರೆ. ಈಗಾಗಲೇ ಅವರು ನುಡಿದಿರುವ ಮಾತುಗಳು ನಿಜವಾಗಿವೆ. ಹಾಗೆಯೇ ಇದೀಗ ಮತ್ತೊಂದು ಯಾರು ಕಂಡು ಕೇಳರಿಯದಂತಹ ಭಯಾನಕ ಭವಿಷ್ಯವೊಂದನ್ನು ನುಡಿದಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಕ್ರೋಧಿನಾಮ ಸಂವತ್ಸರದಲ್ಲಿ ಅವಾಂತರಗಳೇ ಹೆಚ್ಚು ಎಂದು ಹೇಳಿದ್ದ 20 ದಿನಗಳಲ್ಲೇ ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿ 400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. ಬಳಿಕ ಈ ಬಗ್ಗೆ ನಾನು ಮೊದಲೇ ಭವಿಷ್ಯ ನುಡಿದಿದ್ದೆ ಎಂದು ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದರು. ಈಗ ಶ್ರಾವಣ ಮಾಸ ಶುರುವಾಗಿದೆ. ಇಡೀ ಕರ್ನಾಟಕದಲ್ಲಿ ಹಬ್ಬದ ಋತುವನ್ನು ಸಂಭ್ರಮದಿಂದಲೇ ಆಚರಣೆ ಮಾಡಿದ್ದಾರೆ.

Kodi Mutt Swamiji terrible prediction about Shravan Maas 2024 Know details

ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಶುಕ್ರವಾರ (ಆಗಸ್ಟ್‌ 09) ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಣೆ ಮಾಡಿದ್ದು, ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ ಹಾಗೂ ವಾಯು ಕಂಟಕಗಳು ಮತ್ತಷ್ಟು ಹೆಚ್ಚಾಗಲಿವೆ. ಈ ಕುರಿತು ಎಚ್ಚರಿಕೆಯಿಂದ ಇರಬೇಕೆಂದು ಹೇಳಿದ್ದಾರೆ. ಇದು ಶ್ರಾವಣ ಮಾಸ, ಹಬ್ಬದ ಋತು ಅಗಿದ್ದು, ಎಚ್ಚರಿಕೆಯಿಂದ ಇರಬೇಕು. ಈ ಮಾಸದಲ್ಲಿ ಅವಘಡಗಳು ಸಂಭವಿಸಲಿದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

ಈ ಮಾಸದಲ್ಲಿ ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಅತಿವೃಷ್ಟಿ ಆಗುವ ಸಾಧ್ಯತೆ ಹೆಚ್ಚಾಗಿ ಕಾಣುತ್ತಿದೆ. ಕ್ರೋಧಿನಾಮ ಸಂವತ್ಸರ ಇದಾಗಿರುವ ಕಾರಣ ದೇಶದಲ್ಲಿ ಜಲ, ಅಗ್ನಿ ಹಾಗೂ ವಾಯು ಕಂಟಕಗಳ ಸಂಖ್ಯೆ ಹೆಚ್ಚಾಗಹುದು ಎಂದು ಹೇಳಿದ್ದಾರೆ.

ಮಳೆ ಬಗ್ಗೆ ಭವಿಷ್ಯ: ಕಳೆದ ಕೆಲವು ತಿಂಗಳುಗಳ ಹಿಂದೆಯಷ್ಟೇ ಕೋಲಾರ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, "ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ," ಎಂದು ಹೇಳುವ ಮೂಲಕ ಕುತೂಹಲ ಹುಟ್ಟುಹಾಕಿದ್ದರು.

ಇನ್ನು ಗ್ಯಾರೆಂಟ್‌ಗಳಿಂದ‌ ಕಾಂಗ್ರೆಸ್‌ ಸರ್ಕಾರ ನಡೆಯುತ್ತದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ‌ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ,ನೀರಿನ ಹಾವಳಿ, ಯುದ್ದ‌ ಆಗುತ್ತದೆ. ಅನೇಕ‌ ಸಾವು, ನೋವುಗಳು ಆಗುತ್ತವೆ. ಮತಾಂದತೆ‌ ಹೆಚ್ಚಳ ಆಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತದೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಹೊಸ ವರ್ಷದ ಆರಂಭದಲ್ಲಿ ಗದಗನಲ್ಲಿ ಮಾತನಾಡಿದ್ದ ಅವರು, 2024ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಬಾಂಬ್ ಸಿಡಿಯುವ ಸಂಭವವಿದ್ದು, ಯುದ್ಧ ಭೀತಿ ಆವರಿಸಲಿದೆ. ಭೂಕಂಪ, ಜಲ ಕಂಟಕವೂ ಇದೆ. ಜನರು ತಲ್ಲಣವಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು.

ಅಲ್ಲದೆ ಜಗತ್ತಿನ ದೊಡ್ಡ ಸಂತರು ಕೊಲೆಯಾಗುತ್ತಾರೆ. ಅಣು ಬಾಂಬ್ ಸ್ಫೋಟವಾಗುವ ಸಾಧ್ಯತೆಗಳಿವೆ. ಜಗತ್ತಿಗೆ ವಿನಾಶ ಕಾದಿದೆ. ರೋಗ, ಸುನಾಮಿ ಸಂಭವಿಸಲಿದೆ. ಮತೀಯ ಸಮಸ್ಯೆಯಿಂದ ಜನರು ದುಃಖ ಅನುಭವಿಸುತ್ತಾರೆ. ದೈವ ನಂಬುವುದೊಂದೇ ಪರಿಹಾರ. ದೈವ ಮೊರೆ ಹೋಗಬೇಕೆಂದು ಭವಿಷ್ಯ ನುಡಿದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+