Kodi Sri On Chandrayaan 3: ಚಂದ್ರಯಾನ ಯಶಸ್ವಿಯಾಗುತ್ತಾ? ಕೋಡಿಮಠ ಶ್ರೀ ಹೇಳಿದ್ದೇನು ಗೊತ್ತಾ?
ಇಂದು ಇಡೀ ಜಗತ್ತಿನ ಎಲ್ಲಾ ರಾಷ್ಟ್ರಗಳು ಭಾರತದತ್ತ ನೋಡುತ್ತಿದ್ದರೆ, ಎಲ್ಲಾ ಭಾರತೀಯರು ಚಂದ್ರನತ್ತ ನೋಡುತ್ತಿದ್ದಾರೆ. ಚಂದ್ರಯಾನ -3 ನೌಕೆ ಚಂದ್ರನ ಅಂಗಳದಲ್ಲಿ ಇಳಿಯಲು ಕ್ಷಣಗಣನೆ ಆರಂಭವಾಗಿದ್ದು, ಆಗಸ್ಟ್ 23 ರಂದು ಸಂಜೆ ಸಾಫ್ಟ್ ಲ್ಯಾಂಡಿಂಗ್ಗೆ ಮುಹೂರ್ತ ನಿಗದಿ ಮಾಡಲಾಗಿದೆ.
ಚಂದ್ರಯಾನ -3 ಯಶಸ್ವಿಯಾಗಲಿ ಎಂದು ದೇಶದ ಮೂಲೆ ಮೂಲೆಗಳಿಂದ ಜನ ಪ್ರಾರ್ಥನೆ ಮಾಡುತ್ತಿದ್ದಾರೆ. ಮಂದಿರ, ಮಸೀದಿಗಳಲ್ಲೂ ಪೂಜೆ - ಪ್ರಾರ್ಥನೆ ಸಲ್ಲಿಸುವ ಮೂಲಕ ಇಸ್ರೋ ಜೊತೆ ಭಾರತೀಯರು ನಿಂತಿದ್ದಾರೆ. ಇತ್ತ ಇಸ್ರೋ ಕೂಡ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದೆ.

ರಾಜ್ಯ-ದೇಶ-ವಿದೇಶಗಳ ವಿದ್ಯಮಾನಗಳ ಬಗ್ಗೆ ಭವಿಷ್ಯ ನುಡಿಯುವಲ್ಲಿ ಭಾರಿ ಪ್ರಸಿದ್ಧವಾಗಿರುವ ಕೋಡಿಮಠ ಶ್ರೀಗಳು ಕೂಡ ಭಾರತದ ಚಂದ್ರಯಾನದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಭಾರತದ ಮಹತ್ವಪೂರ್ಣ ಚಂದ್ರಯಾನ -3 ಯಶಸ್ವಿಯಾಗಲಿದೆ ಎಂದು ಹೇಳುವ ಮೂಲಕ ಭಕ್ತರ ಆತಂಕ ದೂರವಾಗಿಸಿದ್ದಾರೆ.
ಕೋಡಿಮಠಶ್ರೀಗಳ ಭವಿಷ್ಯ ಬಹುತೇಕ ಸಂದರ್ಭಗಳಲ್ಲಿ ನಿಜವಾಗುವ ಕಾರಣ ಭಕ್ತರ ಆತ್ಮವಿಶ್ವಾಸ ಹೆಚ್ಚಾಗಿದೆ. ಕೋಡಿಮಠ ಶ್ರೀಗಳ ಭವಿಷ್ಯವಾಣಿ ಇಸ್ರೋ ವಿಜ್ಞಾನಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಲಿರುವ ಮೊದಲ ದೇಶ
ಈವರೆಗೂ ಚಂದ್ರನ ಅಂಗಳದಲ್ಲಿ ಮೂರು ದೇಶಗಳು ಮಾತ್ರ ಯಶಸ್ವಿಯಾಗಿ ನೌಕೆಯನ್ನು ಇಳಿಸಿವೆ. ಅಮೆರಿಕ, ಚೀನಾ, ರಷ್ಯಾ ನಂತರ ಚಂದ್ರನ ಮೇಲೆ ನೌಕೆ ಇಳಿಸುವ ನಾಲ್ಕನೇ ದೇಶವಾಗಲು ಭಾರತ ಕಾತರವಾಗಿದೆ. ಚಂದ್ರನ ದಕ್ಷಿಣ ಧೃವದಲ್ಲಿ ಚಂದ್ರಯಾನ 3 ನೌಕೆ ಇಳಿಯಲಿದ್ದು, ಸಾಫ್ಟ್ ಲ್ಯಾಂಡಿಂಗ್ ಮಾಡಿದರೆ, ಈ ಭಾಗದಲ್ಲಿ ನೌಕೆ ಇಳಿಸಿದ ಮೊದಲ ದೇಶವಾಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್












Click it and Unblock the Notifications