ಚಂದ್ರಯಾನ-3: ನಿಜವಾಯ್ತು ಕೋಡಿಶ್ರೀ ಭವಿಷ್ಯ
ಬೆಂಗಳೂರು, ಆಗಸ್ಟ್ 23: ಜಗತ್ತು, ರಾಜಕಾರಣ, ಪರಿಸರ ಕುರಿತು ಕೋಡಿಮಠದ ಶ್ರಿ ಶಿವಾನಂದ ಸ್ವಾಮೀಜಿಗಳು ಭವಿಷ್ಯ ಹೇಳುತ್ತಾರೆ. ಅದರಲ್ಲಿ ಒಂದಷ್ಟು ವಿಚಾರಗಳು ನಿಜವಾಗಿವೆ. ಇದೀಗ ಭಾರತೀಯ ಬಾಹ್ಯಾಕಾಶ ಸಂಶೋಧಾನ ಸಂಸ್ಥೆ (ISRO) ಮತ್ತು ಚಂದ್ರಯಾನ 3 ಕುರಿತು ಕೋಡಿಮಠದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದ ಭವಿಷ್ಯ ನಿಜವಾಗಿದೆ.
ಚಂದ್ರನ ಮೇಲೆ ಕಾಲಿಡುತ್ತಿರುವ ಮೂರು ದೇಶಗಳ ನಂತರ 4ನೇ ದೇಶ ಹಾಗೂ ಚಂದ್ರನ ದಕ್ಷಿಣ ಭಾಗದ ಮೇಲ್ಮೈನಲ್ಲಿ ಕಾಲಿಟ್ಟ ಮೊದಲ ದೇಶ ಭಾರತ. ಚಂದ್ರಯಾನ 3 ಯಶಸ್ವಿಯಾಗಿದೆ. ಇಸ್ರೋ ವಿಜ್ಞಾನಿಗಳು ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ಇದಕ್ಕು ಮೊದಲೇ ಕೋಡಿಶ್ರೀಗಳು ಭವಿಷ್ಯ ನುಡಿದಿದ್ದರು.

ಇಸ್ರೋ ಉಡಾವಣೆ ಮಾಡಿರುವ ಚಂದ್ರಯಾನ 3 ಯಶಸ್ವಿ ಆಗಲಿದೆ ಎಂದು ಭವಿಷ್ಯ ನುಡಿದಿದ್ದರು. ಇದು ಇಸ್ರೋ ವಿಜ್ಞಾನಿಗಳು ಸೇರಿದಂತೆ ಭವಿಷ್ಯವಾಣಿ ನಂಬುವ ಅನೇಕ ನಾಗರಿಕರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿತ್ತು. ಅದರ ಬೆನ್ನಲ್ಲೆ ಶ್ರೀಗಳ ಭವಿಷ್ಯವಾಣಿಯಂತೆ ಇಸ್ರೋ ವಿಜ್ಞಾನಿಗಳು ಚಂದ್ರನ ಮೇಲೆ ಉಪಗ್ರಹ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಂದ್ರಯಾನ 3 ಕುರಿತು ಭವಿಷ್ಯ ನುಡಿದ ಜೊತೆ ಜೊತೆಗೆ ಪ್ರಕೃತಿ, ಭೂಕಂಪ ಕುರಿತು ಶ್ರೀಗಳು ಮಾತನಾಡಿದ್ದರು. ಜಾಗತಿಕವಾಗಿ ಕೆಲವು ತಲ್ಲಣಗಳು ನಡೆಯಲಿವೆ. ಮಾನವ ಭಗವಂತನನ್ನು ಮರೆಯುತ್ತಿದ್ದಾನೆ. ದೇವರು ಮರೆತವರಿಗೆ ತೊಂದರೆ ಕಾದಿದೆ ಎಂದರು.

ಸಾವು ನೋವು ಏರಿಕೆ, ವಿಶಾನಿಲ ಬೀಸುವ ಸಾಧ್ಯತೆ
ಶ್ರಾವಣ ಮಧ್ಯಭಾಗದಲ್ಲಿ ವ್ಯಾಪಕ ಮಳೆ ಸುರಿಯಲಿದೆ. ಭೂಕಂಪನದಂತಹ ಅನಾಹುತಗಳು ಸಂಭವಿಸಲಿವೆ. ಸಾವು ನೋವುಗಳ ಸಂಖ್ಯೆ ಹೆಚ್ಚಾಗಲಿದೆ. ಜಗತ್ತಿನಲ್ಲಿ ಯುದ್ಧದ ಪರಿಸ್ಥಿತಿ ಉಂಟಾಗುವ ಸಾಧ್ಯತೆಗಳು ಇವೆ.
ಜಗತ್ತಿನಲ್ಲಿ ವಿಶಾನಿಲ ಬೀಸುವ ಪ್ರಸಂಗ ನಡೆಯಲಿದ್ದು, ವಿಶ್ವದಾದ್ಯಂತ ಇದು ವ್ಯಾಪಿಸಲಿದೆ. ಈ ವಿಶಾನಿಲದ ದುಷ್ಪರಿಣಾಮ ನಮ್ಮ ದೇಶ ಭಾರತದ ಮೇಲೂ ಉಂಟಾಗಲಿದೆ. ಎಂದು ಕೋಡಿಶ್ರೀಗಳು ಹೇಳಿದ್ದರು. ಇದರಿಂದ ಮಾರಕ ವೈರಸ್ ಕಾಯಿಲೆಗಳು ಮತ್ತ ವಕ್ಕರಿಸಲಿವೆಯೇ ಎಂಬ ಆತಂಕ ಜಗತ್ತನ್ನು ಕಾಡುತ್ತಿದೆ.
ಇನ್ನೂ ಅತ್ಯಧಿಕ ಮಳೆ ಸುರಿಯುವುದರಿಂದ ಕನಿಷ್ಠ ಎರಡು ದೇಶಗಳು ವಿಪರೀತ ತೊಂದರೆ ಅನುಭವಿಸಲಿವೆ. ಮುಂಗಾರು ಎಲ್ಲಡೆ ಮುಂದುವರಿಯಲಿದೆ ಎಂದಿದ್ದರು. ಮುಂದೆ ಕರ್ನಾಟಕ ಮಹಿಳಾ ಸಿಎಂ ಕಾಣಲಿದೆ ಎಂದು ಹೇಳಿದ್ದ ಶ್ರೀಗಳು ರಾಜಕರಣ ಬಗ್ಗೆ ಅಥವಾ ಮುಂಬರಲಿರುವ ಲೋಕಸಭಾ ಚುನಾವಣೆ ಕುರಿತು ಉತ್ತರಿಸಲಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications