ಚುನಾವಣೆ ಭವಿಷ್ಯ ನಿಜವಾಯ್ತು: ಕೋಡಿಮಠ ಸ್ವಾಮೀಜಿ
ಗದಗ, ಮೇ 21: ಅತ್ತ ನರೆಂದ್ರ ಮೋದಿ ಅವರನ್ನು ಮುಂದಿನ ಪ್ರಧಾನಿಯಾಗಿ ನೇಮಕ ಮಾಡಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿನ್ನೆ ಆದೇಶದ ಪ್ರತಿಯನ್ನು ಹಸ್ತಾಂತರಿಸುತ್ತಿದ್ದಂತೆ ಇತ್ತ ಗದಗದಲ್ಲಿ ಕೋಡಿಮಠ ಶ್ರೀಗಳು 'ತಾವು ಹೇಳಿದ್ದ ಭವಿಷ್ಯ ನೂರಕ್ಕೆ ನೂರರಷ್ಟು ನಿಜವಾಗಿದೆ' ಎಂದು ಭವಿಷ್ಯದ ಸಾರವನ್ನು ಬಿಡಿಸಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಂದ್ರದಲ್ಲಿ ಯಾರು ಅಧಿಕಾರಕ್ಕೆ ಬರಲಿದ್ದಾರೆ ಎಂಬುದರ ಕುರಿತು ಮೂರು ಸಾಧ್ಯತೆಗಳ ಬಗ್ಗೆ ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದರು. ಗಮನಾರ್ಹವೆಂದರೆ ಅರಸೀಕೆರೆಯ ಕೋಡಿಮಠ ಶ್ರೀಗಳಾದ ಶಿವಾನಂದ ರಾಜೇಂದ್ರ ಸ್ವಾಮೀಜಿ ಅವರು ನುಡಿದಿರುವ ಭವಿಷ್ಯದ ಸಾರವನ್ನು ಯಥಾವತ್ತಾಗಿ ತೆಗೆದುಕೊಂಡರೆ ಅವರು ಹೇಳಿದ್ದು ನಿಜವಾಗಿದೆ. (ಈ ಬಾರಿ ವಿಚಿತ್ರ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ)
ಆದರೆ ಅವರು ಚುನಾವಣೆ ಬಳಿಕ ಏನಾಗಲಿದೆ ಎಂದೂ ಭವಿಷ್ಯ ನುಡಿದಿದ್ದಾರೆ. ಅದೂ ಸಹ ನಿಜವೇ ಆದರೆ ಅದು ದೇಶಕ್ಕೆ ಕರಾಳವಾಗಲಿದೆ. ಇದನ್ನೆಲ್ಲಾ ನೋಡಿದರೆ ಕೋಡಿಮಠ ಶ್ರೀಗಳು ನುಡಿಯುವ ಭವಿಷ್ಯದ ಬಗ್ಗೆ ವಿಶ್ವಾಸ ಹೊಂದಬಹುದೇ? ಎಂದು ನೀವು ಪ್ರಶ್ನಿಸಿದರೆ ಅದು ನಿಮ್ಮ ವಿವೇಚನೆಗೆ ಬಿಟ್ಟ ವಿಚಾರ ಅನ್ನಬಹುದು.
ಈ ಬಾರಿ ಅವರು 'ನಡೆಯುವ ಹಾದಿ ಮೂರು ಕವಲಾಯಿತು. ಮುತ್ತಿನ ಗಿಣಿ ಮುಪ್ಪಾಗದೇ ಮುತ್ತಾಯಿತೋ, ಮುದುಕನ ಕೋಲ ಮೇಲೆ ಕಾಗಿ ಕುಳಿತಿತೋ' ಎಂದು ನಿಗೂಢವಾಗಿ/ಮಾರ್ಮಿಕವಾಗಿ ಕಳೆದ ತಿಂಗಳೂ ಧಾರವಾಡದಲ್ಲಿ ಭವಿಷ್ಯ ಹೇಳಿದ್ದರು. ಆದರೆ ಈ ಭವಿಷ್ಯದೊಳಿಗಿನ ಮರ್ಮ ಅರಿಯದೆ ರಾಜ್ಯದ ಜನತೆ ಕೋಡಿಮಠ ಶ್ರೀಗಳು ಹೇಳಿದ ಭವಿಷ್ಯ ಸುಳ್ಳಾಗಿದೆ ಎಂದು ಕಿಡಿಕಾರಿದ್ದರು. ರಾಜ್ಯಾದ್ಯಂತ ಟೀಕೆಗಳ ಮಹಾಪೂರವೇ ಹರಿದುಬಂದಿತ್ತು. (ಅದೇನೂಂತ ಭವಿಷ್ಯ ಹೇಳ್ಬಿಟ್ರಿ ಕೋಡಿ ಶ್ರೀಗಳೇ)
ಆದರೆ ಕೋಡಿಮಠ ಶ್ರೀಗಳೇ ನಿನ್ನೆ ಮಾತನಾಡಿದ್ದು, ತಮ್ಮ ಭವಿಷ್ಯದ ಅರ್ಥವನ್ನು ಉದ್ಯಮಿ ಮೃತ್ಯುಂಜಯ ಸಂಕೇಶ್ವರ ಅವರ ಮನೆಯಲ್ಲಿ ಹೀಗೆ ಬಿಡಿಸಿ ಹೇಳಿದ್ದಾರೆ.

ನಡೆಯುವ ಹಾದಿ ಮೂರು ಕವಲಾಯಿತು
ಲೋಕಸಭೆ ಚುನಾವಣೆ ಸಂಬಂಧ ಕೋಡಿಮಠ ಶ್ರೀಗಳು ಹೇಳಿದ್ದ ಮೊದಲನೆಯ ಭವಿಷ್ಯವಿದು. ಇದರರ್ಥ ಹೀಗಿದೆ: ಈಗಾಗಲೇ ಕೇಂದ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಸಂಯುಕ್ತರಂಗ ಎಂದು ಮೂರು ಭಾಗಗಳಾಗಿ ಹೋಗಿವೆ.

ಮುದುಕನ ಕೋಲ ಮೇಲೆ ಕಾಗಿ ಕುಳಿತಿತೋ
'ಮುದುಕನ ಕೋಲ ಮೇಲೆ ಕಾಗಿ ಕುಳಿತಿತೋ' ಎಂದು ತಾವು ನುಡಿದಿದ್ದ ಭವಿಷ್ಯವನ್ನು ಬಿಡಿಸಿ ಹೇಳಿರುವ ಕೋಡಿಮಠ ಶ್ರೀಗಳು 'ನೂರಾರು ವರ್ಷಗಳ ಹಳೆಯ ಕಾಂಗ್ರೆಸ್ ಪಕ್ಷದ ಬದಲು ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಂತಾಗಿದೆ' ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮುತ್ತಿನ ಗಿಣಿ ಮುಪ್ಪಾಗದೇ ಮುತ್ತಾಯಿತೋ
ಮೂರನೆಯ ಭವಿಷ್ಯವೂ ಹೀಗಿದೆ: ಮುತ್ತಿನ ಗಿಣಿ ಮುಪ್ಪಾಗಿ ಮುತ್ತಾಯಿತೋ. ಇದರರ್ಥ ಸರಳ ಸುಂದರವಾಗಿದೆ. ಎಂದೂ ಕೇಂದ್ರದಲ್ಲಿ ಯಾವುದೇ ಅಧಿಕಾರ ಹೊಂದಿರದ ಮೋದಿ ಎಂಬ ಮುತ್ತಿನ ಗಿಣಿ ನೇರವಾಗಿ ದೇಶದಲ್ಲಿ ಹೊಳೆಯುವ ಮುತ್ತಾಯಿತೋ ತಮ್ಮಾ ಎಂದು ಕೋಡಿಮಠ ಶ್ರೀಗಳು ತಿಳಿಸಿದ್ದಾರೆ.

ಜೀವ ಜಂತುಗಳಿಂದ ಮಾನವರಿಗೆ ಅಪಾಯವಿದೆ
ಈ ಬಾರಿ ಚುನಾವಣೆ ಮುಗಿಯುತ್ತಿದ್ದಂತೆ ಅಚ್ಚರಿಯ ಘಟನೆಯೊಂದು ಸಂಭವಿಸಲಿದೆ. ಅಲ್ಲದೇ ಜೀವ ಜಂತುಗಳಿಂದ ಮಾನವರಿಗೆ ಅಪಾಯವಿದೆ ಎಂದು ಸ್ವಾಮೀಜಿಗಳು ಆತಂಕ ಮಿಶ್ರಿತ ಎಚ್ಚರಿಕೆಯ ಭವಿಷ್ಯ ನುಡಿದಿದ್ದಾರೆ.

ಶ್ರೀಮಂತರು- ಮಧ್ಯ ವಯಸ್ಕರು ಭಾರಿ ಸಂಖ್ಯೆಯಲ್ಲಿ ಸಾವು
ದೇಶದಲ್ಲಿ ದೊಡ್ಡ ಘಟನೆಯೊಂದು ಸಂಭವಿಸಲಿದ್ದು ಶ್ರೀಮಂತರು ಮತ್ತು ಮಧ್ಯ ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಲಿದ್ದಾರೆ. ಅಲ್ಲದೇ ಬೆಂಕಿಯ ಅವಘಡಗಳೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ನಡೆಯಲಿವೆ. ಈ ವರ್ಷ ಮಳೆ ಬೆಳೆ ಚೆನ್ನಾಗಿ ಆಗಲಿದ್ದು, ರೈತರಿಗೆ ಸುಖ ಸಮೃದ್ಧಿ ಪ್ರಾಪ್ತಿಯಾಗಲಿದೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications