ದೇಶದ ಮಹಾನ್ ವ್ಯಕ್ತಿಗಳಿಗೆ ಕಂಟಕ: ಕೋಡಿಮಠ ಶ್ರೀಗಳ ಭಯಾನಕ ಭವಿಷ್ಯ!
ಹಾಸನ: ತಮ್ಮ ಭವಿಷ್ಯವಾಣಿ ಮೂಲಕವೇ ಆಗಾಗ ಸಂಚಲನ ಸೃಷ್ಟಿಸುವ ಕೋಡಿಮಠದ ಶ್ರೀಗಳು ಈಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಕೋಡಿಮಠ ಶ್ರೀಗಳು ಹೇಳಿರುವ ಆ ಒಂದು ಮಾತು ವೈರಲ್ ಆಗುತ್ತಿದ್ದು, ಎಲ್ಲೆಡೆ ಚರ್ಚೆ ಶುರುವಾಗಿದೆ. ಹಾಗಾದರೆ ಶ್ರೀಗಳು ಹೇಳಿದ್ದು ಏನು? ಅದರ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.
ಅಂದಹಾಗೆ ಕೋಡಿಮಠ ಶ್ರೀಗಳು ಈಗ ನುಡಿದಿರುವ ಭವಿಷ್ಯದ ಪ್ರಕಾರ ದೇಶದ ಮಹಾನ್ ವ್ಯಕ್ತಿಗಳಿಗೆ ಕಂಟಕ ಎದುರಾಗಲಿದೆಯಂತೆ. ದೇಶದಲ್ಲಿ 2024ರ ಯುಗಾದಿ ವೇಳೆಗೆ ಮತ್ತೊಂದು ದುರ್ಘಟನೆ ಸಂಭವಿಸುತ್ತೆ. ದೇಶದ ಮಹಾನ್ ವ್ಯಕ್ತಿಗಳಿಗೆ ದೊಡ್ಡ ಕಂಟಕವಿದೆ. ಆಳುವವರು ಎಚ್ಚರ ವಹಿಸಿದರೆ ತಪ್ಪಿಸಬಹುದು ಎಂದು ಕೋಡಿಮಠದ ಪೀಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಭವಿಷ್ಯ ನುಡಿದಿದ್ದಾರೆ. ಅಲ್ಲದೆ ಇನ್ನೂ ಅನೇಕ ವಿಚಾರ ಹಂಚಿಕೊಂಡಿದ್ದಾರೆ ಶ್ರೀಗಳು, ಆ ಬಗ್ಗೆ ಮಾಹಿತಿ ತಿಳಿಯೋಣ.

ದೇಶದ ಮಹಾನ್ ವ್ಯಕ್ತಿಗಳಿಗೆ ಕಂಟಕ?
ಅಷ್ಟಕ್ಕೂ ಹಾಸನದ ಅರಸೀಕೆರೆ ತಾಲೂಕು ಹಾರನಹಳ್ಳಿಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯುತ್ತೆ. ಇದರ ಜತೆ ಜಗತ್ತಿನ ಸಾಮ್ರಾಟರು ತಲ್ಲಣವಾಗುವ ಕಾಲ ಬರುತ್ತದೆ. ದೊಡ್ಡ ಪಟ್ಟಣಗಳಿಗೆ ಅಪಾಯದ ಸೂಚನೆಯಿದ್ದು ದೊಡ್ಡ ದೊಡ್ಡ ಕಟ್ಟಡಗಳು ಕುಸಿಯುವ ಸಾಧ್ಯತೆಯಿದೆ. 2024ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ. ನಮ್ಮನ್ನ ಆಳುವವರು ಎಚ್ಚರ ವಹಿಸಿದರೆ ಈ ದುರ್ಘಟನೆ ತಪ್ಪಿಸಬಹುದು. ಕಾಲ ಬಂದಾಗ ನಾನೇ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಜೀವನವು ಆಡಂಬರ ರಹಿತವಾಗಿರಬೇಕು. ಆಧ್ಯಾತ್ಮಿಕ ಚಿಂತನೆ ನಮ್ಮಲ್ಲಿರಬೇಕು ಎಂದಿದ್ದಾರೆ ಶ್ರೀಗಳು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭವಿಷ್ಯ
ಹಾಗೇ ಇದೇ ವೇಳೆ ಕೋಡಿಮಠ ಶ್ರೀಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಪಾಯವಿಲ್ಲ. ಆದರೆ ಕೆಲವರು ಬಹುಬೇಗ ಹಣ ಮಾಡುವ ಆಸೆ ಹೊಂದಿದ್ದಾರೆ. ಅದೇ ಅವರಿಗೆ ಆಪತ್ತು ತಂದುಕೊಡುತ್ತದೆ. ಆಘಾತಗಳು ಸಂಭವಿಸಲಿದೆ, ಆದ್ರೆ ಯಾವುದೇ ತೊಂದರೆ ಇರಲ್ಲ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಂಭವವಿದೆ. ಹೀಗಾಗಿ, ಸರ್ಕಾರ ಜನರ ಹಿತಕ್ಕಾಗಿ ಬದಲಾಗಬೇಕಿದೆ ಎಂದು ಶ್ರೀಗಳು ಇದೇ ವೇಳೆ ಸಲಹೆ ನೀಡಿದ್ದಾರೆ.
ಮುಂದಿನ ಪ್ರಧಾನಿ ಬಗ್ಗೆ ಭವಿಷ್ಯ
ಇನ್ನೇನು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ಮುಂದಿನ ಪ್ರಧಾನಿ ಯಾರಾಗಬೇಕೆಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಶ್ನೆಗೆ ಉತ್ತರ ನೀಡುವುದು ಸಾಮಾನ್ಯ ಸಂಗತಿಯಲ್ಲ. ಅದನ್ನು ಸುಮ್ಮನೆ ಹೇಳುವುದಕ್ಕಾಗುವುದಿಲ್ಲ. ಅದರ ಬಗ್ಗೆ ಜಪ-ತಪಗಳನ್ನು ಮಾಡಬೇಕು. ಆಧ್ಯಾತ್ಮ ಚಿಂತನೆ ಮಾಡಬೇಕಿದೆ. ಪಂಚಾಗ್ನಿ, ಜಲಾಗ್ನಿ, ವಾಯಾಗ್ನಿ ಸೇರಿದಂತೆ 4 ಕಡೆ ಬೆಂಕಿಯನ್ನಿಟ್ಟು, ತಲೆಯ ಮೇಲೆ ಬೆಂಕಿಕುಂಡವಿಟ್ಟು ಧ್ಯಾನ ಮಾಡಬೇಕು ಎಂದರು.

ಹಾಗೇ ಮೊನ್ನೆ ಹಿಮಾಲಯ ಜೋಶಿಮಠ ಮುಳುಗುವ ಮುನ್ನ ನಾನು ಧ್ಯಾನ ಮಗ್ನನಾಗಿದ್ದೆ. ಏಕಾಏಕಿ ಬೆಂಕಿ ನನ್ನ ಉದರದ ಮೇಲೆ ಬಿದ್ದು, ಗಾಯವು ಆಗಿತ್ತು. ಆಗ ನನಗೆ ಗೌರಿಶಂಕರ ಶಿಖರಕ್ಕೆ, ಜೋಶಿಮಠಕ್ಕೆ ಕಂಟಕವಿದೆ ಎಂದು ಗೊತ್ತಾಯ್ತು. ಹೀಗಾಗಿ ಇಂತಹ ಪ್ರಶ್ನೆಗಳಿಗೆ ಸುಮ್ಮನೆ ಉತ್ತರ ನೀಡಲು ಸಾಧ್ಯವಿಲ್ಲ. ಸಮಯ ಬಂದಾಗ ನಾನೇ ಹೇಳುತ್ತೇನೆ ಎಂದು ಇದೇ ವೇಳೆ ಶ್ರೀಗಳು ಸ್ಪಷ್ಟನೆ ನೀಡಿದರು.
ಜುಲೈ ತಿಂಗಳಲ್ಲಿ ಜಲಪ್ರಳಯದ ಭವಿಷ್ಯ
ಈ ಮಧ್ಯೆ ಕಳೆದ ತಿಂಗಳು ಅಂದರೆ ಜುಲೈನಲ್ಲೂ ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ಭಾರಿ ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ. ಜಾಗತಿಕವಾಗಿ ಒಟ್ಟಾರೆ ಮೂರು ಗಂಡಾಂತರ ಕಾದಿದೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರು ಅಕಾಲಿಕ ಮೃತ್ಯುವಿಗೆ ಸಿಲುಕುವ ಸೂಚನೆ ಇದೆ. ವಿಜಯ ದಶಮಿಯಿಂದ ಸಂಕ್ರಾಂತಿಯವರೆಗೆ ಈ ದುರ್ಘಟನೆಗಳು ನಡೆಯುತ್ತವೆ ಎಂದು ಶ್ರೀಗಳು ಈ ಮೊದಲು ಭವಿಷ್ಯ ನುಡಿದಿದ್ದರು. ಈಗ ಮತ್ತೊಂದು ಭವಿಷ್ಯ ನುಡಿದಿದ್ದು, ದೇಶದ ಮಹಾನ್ ವ್ಯಕ್ತಿಗಳಿಗೆ ಕಂಟಕವಿದೆ ಎಂದು ಹೇಳಿದ್ದಾರೆ.
-
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ












Click it and Unblock the Notifications