Get Updates
Get notified of breaking news, exclusive insights, and must-see stories!

ದೇಶದ ಮಹಾನ್ ವ್ಯಕ್ತಿಗಳಿಗೆ ಕಂಟಕ: ಕೋಡಿಮಠ ಶ್ರೀಗಳ ಭಯಾನಕ ಭವಿಷ್ಯ!

ಹಾಸನ: ತಮ್ಮ ಭವಿಷ್ಯವಾಣಿ ಮೂಲಕವೇ ಆಗಾಗ ಸಂಚಲನ ಸೃಷ್ಟಿಸುವ ಕೋಡಿಮಠದ ಶ್ರೀಗಳು ಈಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಕೋಡಿಮಠ ಶ್ರೀಗಳು ಹೇಳಿರುವ ಆ ಒಂದು ಮಾತು ವೈರಲ್ ಆಗುತ್ತಿದ್ದು, ಎಲ್ಲೆಡೆ ಚರ್ಚೆ ಶುರುವಾಗಿದೆ. ಹಾಗಾದರೆ ಶ್ರೀಗಳು ಹೇಳಿದ್ದು ಏನು? ಅದರ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.

ಅಂದಹಾಗೆ ಕೋಡಿಮಠ ಶ್ರೀಗಳು ಈಗ ನುಡಿದಿರುವ ಭವಿಷ್ಯದ ಪ್ರಕಾರ ದೇಶದ ಮಹಾನ್ ವ್ಯಕ್ತಿಗಳಿಗೆ ಕಂಟಕ ಎದುರಾಗಲಿದೆಯಂತೆ. ದೇಶದಲ್ಲಿ 2024ರ ಯುಗಾದಿ ವೇಳೆಗೆ ಮತ್ತೊಂದು ದುರ್ಘಟನೆ ಸಂಭವಿಸುತ್ತೆ. ದೇಶದ ಮಹಾನ್ ವ್ಯಕ್ತಿಗಳಿಗೆ ದೊಡ್ಡ ಕಂಟಕವಿದೆ. ಆಳುವವರು ಎಚ್ಚರ ವಹಿಸಿದರೆ ತಪ್ಪಿಸಬಹುದು ಎಂದು ಕೋಡಿಮಠದ ಪೀಠಾಧ್ಯಕ್ಷರಾದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಭವಿಷ್ಯ ನುಡಿದಿದ್ದಾರೆ. ಅಲ್ಲದೆ ಇನ್ನೂ ಅನೇಕ ವಿಚಾರ ಹಂಚಿಕೊಂಡಿದ್ದಾರೆ ಶ್ರೀಗಳು, ಆ ಬಗ್ಗೆ ಮಾಹಿತಿ ತಿಳಿಯೋಣ.

Kodimatha Swamiji warning about future

ದೇಶದ ಮಹಾನ್ ವ್ಯಕ್ತಿಗಳಿಗೆ ಕಂಟಕ?

ಅಷ್ಟಕ್ಕೂ ಹಾಸನದ ಅರಸೀಕೆರೆ ತಾಲೂಕು ಹಾರನಹಳ್ಳಿಯ ಕೋಡಿಮಠದಲ್ಲಿ ಮಾತನಾಡಿದ ಶ್ರೀಗಳು, ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯುತ್ತೆ. ಇದರ ಜತೆ ಜಗತ್ತಿನ ಸಾಮ್ರಾಟರು ತಲ್ಲಣವಾಗುವ ಕಾಲ ಬರುತ್ತದೆ. ದೊಡ್ಡ ಪಟ್ಟಣಗಳಿಗೆ ಅಪಾಯದ ಸೂಚನೆಯಿದ್ದು ದೊಡ್ಡ ದೊಡ್ಡ ಕಟ್ಟಡಗಳು ಕುಸಿಯುವ ಸಾಧ್ಯತೆಯಿದೆ. 2024ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ. ನಮ್ಮನ್ನ ಆಳುವವರು ಎಚ್ಚರ ವಹಿಸಿದರೆ ಈ ದುರ್ಘಟನೆ ತಪ್ಪಿಸಬಹುದು. ಕಾಲ ಬಂದಾಗ ನಾನೇ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಜೀವನವು ಆಡಂಬರ ರಹಿತವಾಗಿರಬೇಕು. ಆಧ್ಯಾತ್ಮಿಕ ಚಿಂತನೆ ನಮ್ಮಲ್ಲಿರಬೇಕು ಎಂದಿದ್ದಾರೆ ಶ್ರೀಗಳು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭವಿಷ್ಯ

ಹಾಗೇ ಇದೇ ವೇಳೆ ಕೋಡಿಮಠ ಶ್ರೀಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಪಾಯವಿಲ್ಲ. ಆದರೆ ಕೆಲವರು ಬಹುಬೇಗ ಹಣ ಮಾಡುವ ಆಸೆ ಹೊಂದಿದ್ದಾರೆ. ಅದೇ ಅವರಿಗೆ ಆಪತ್ತು ತಂದುಕೊಡುತ್ತದೆ. ಆಘಾತಗಳು ಸಂಭವಿಸಲಿದೆ, ಆದ್ರೆ ಯಾವುದೇ ತೊಂದರೆ ಇರಲ್ಲ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗುವ ಸಂಭವವಿದೆ. ಹೀಗಾಗಿ, ಸರ್ಕಾರ ಜನರ ಹಿತಕ್ಕಾಗಿ ಬದಲಾಗಬೇಕಿದೆ ಎಂದು ಶ್ರೀಗಳು ಇದೇ ವೇಳೆ ಸಲಹೆ ನೀಡಿದ್ದಾರೆ.

ಮುಂದಿನ ಪ್ರಧಾನಿ ಬಗ್ಗೆ ಭವಿಷ್ಯ

ಇನ್ನೇನು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ಮುಂದಿನ ಪ್ರಧಾನಿ ಯಾರಾಗಬೇಕೆಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಶ್ನೆಗೆ ಉತ್ತರ ನೀಡುವುದು ಸಾಮಾನ್ಯ ಸಂಗತಿಯಲ್ಲ. ಅದನ್ನು ಸುಮ್ಮನೆ ಹೇಳುವುದಕ್ಕಾಗುವುದಿಲ್ಲ. ಅದರ ಬಗ್ಗೆ ಜಪ-ತಪಗಳನ್ನು ಮಾಡಬೇಕು. ಆಧ್ಯಾತ್ಮ ಚಿಂತನೆ ಮಾಡಬೇಕಿದೆ. ಪಂಚಾಗ್ನಿ, ಜಲಾಗ್ನಿ, ವಾಯಾಗ್ನಿ ಸೇರಿದಂತೆ 4 ಕಡೆ ಬೆಂಕಿಯನ್ನಿಟ್ಟು, ತಲೆಯ ಮೇಲೆ ಬೆಂಕಿಕುಂಡವಿಟ್ಟು ಧ್ಯಾನ ಮಾಡಬೇಕು ಎಂದರು.

Kodimatha Swamiji warning about future

ಹಾಗೇ ಮೊನ್ನೆ ಹಿಮಾಲಯ ಜೋಶಿಮಠ ಮುಳುಗುವ ಮುನ್ನ ನಾನು ಧ್ಯಾನ ಮಗ್ನನಾಗಿದ್ದೆ. ಏಕಾಏಕಿ ಬೆಂಕಿ ನನ್ನ ಉದರದ ಮೇಲೆ ಬಿದ್ದು, ಗಾಯವು ಆಗಿತ್ತು. ಆಗ ನನಗೆ ಗೌರಿಶಂಕರ ಶಿಖರಕ್ಕೆ, ಜೋಶಿಮಠಕ್ಕೆ ಕಂಟಕವಿದೆ ಎಂದು ಗೊತ್ತಾಯ್ತು. ಹೀಗಾಗಿ ಇಂತಹ ಪ್ರಶ್ನೆಗಳಿಗೆ ಸುಮ್ಮನೆ ಉತ್ತರ ನೀಡಲು ಸಾಧ್ಯವಿಲ್ಲ. ಸಮಯ ಬಂದಾಗ ನಾನೇ ಹೇಳುತ್ತೇನೆ ಎಂದು ಇದೇ ವೇಳೆ ಶ್ರೀಗಳು ಸ್ಪಷ್ಟನೆ ನೀಡಿದರು.

ಜುಲೈ ತಿಂಗಳಲ್ಲಿ ಜಲಪ್ರಳಯದ ಭವಿಷ್ಯ

ಈ ಮಧ್ಯೆ ಕಳೆದ ತಿಂಗಳು ಅಂದರೆ ಜುಲೈನಲ್ಲೂ ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದರು. ರಾಜ್ಯದಲ್ಲಿ ಭಾರಿ ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ. ಜಾಗತಿಕವಾಗಿ ಒಟ್ಟಾರೆ ಮೂರು ಗಂಡಾಂತರ ಕಾದಿದೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರು ಅಕಾಲಿಕ ಮೃತ್ಯುವಿಗೆ ಸಿಲುಕುವ ಸೂಚನೆ ಇದೆ. ವಿಜಯ ದಶಮಿಯಿಂದ ಸಂಕ್ರಾಂತಿಯವರೆಗೆ ಈ ದುರ್ಘಟನೆಗಳು ನಡೆಯುತ್ತವೆ ಎಂದು ಶ್ರೀಗಳು ಈ ಮೊದಲು ಭವಿಷ್ಯ ನುಡಿದಿದ್ದರು. ಈಗ ಮತ್ತೊಂದು ಭವಿಷ್ಯ ನುಡಿದಿದ್ದು, ದೇಶದ ಮಹಾನ್ ವ್ಯಕ್ತಿಗಳಿಗೆ ಕಂಟಕವಿದೆ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+