ಫಲಿತಾಂಶಕ್ಕೆ 24 ಗಂಟೆ ಮುನ್ನ ಕೋಡಿಶ್ರೀಗಳ ಭವಿಷ್ಯ
ಅರಸೀಕೆರೆ, ಮೇ 15: ತಮ್ಮ ಒಗಟಿನ ಮೂಲಕ ಮಾರ್ಮಿಕವಾಗಿ ಭವಿಷ್ಯ ನುಡಿಯುವ ಹಾರನಹಳ್ಳಿ ಕೋಡಿಮಠದ ಶ್ರೀಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಫಲಿತಾಂಶಕ್ಕೆ ಮುನ್ನ ಮತ್ತೊಂದು ಭವಿಷ್ಯ ನುಡಿದಿದ್ದಾರೆ.
ಕೇಂದ್ರದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ ಎಂದು ಭವಿಷ್ಯ ನುಡಿದು ರಾಜಕೀಯ ಪಕ್ಷಗಳ ಜೊತೆ ಮತದಾರನ ಮಂಡೆಯನ್ನೂ ಬಿಸಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ, ಯಾಕೆಂದರೆ ಮತಗಳು ವ್ಯಾಪಾರದ ವಸ್ತುವಾಗಿರುವುದೇ ಇದಕ್ಕೆ ಕಾರಣ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ.
ಏಪ್ರಿಲ್ ಮೊದಲ ವಾರ ಧಾರವಾಡದಲ್ಲಿ ನುಡಿದಿದ್ದ ಭವಿಷ್ಯವನ್ನು ಪುನರುಚ್ಚಿಸಿದ ಕೋಡಿಶ್ರೀಗಳು, ಕೇಂದ್ರದಲ್ಲಿ ಅಸ್ಥಿರ ಸರಕಾರ ಖಾಯಂ. ಯಾವಾಗ ಮತವನ್ನು ರಾಜಕೀಯ ಪಕ್ಷಗಳು ದುಡ್ಡು ಕೊಟ್ಟು ಖರೀದಿಸಲಾರಂಭಿಸಿದರೋ, ಅಂದೇ ಮತದಾನದ ಪಾವಿತ್ರ್ಯತೆ ಹೋಯಿತು ಎಂದಿದ್ದಾರೆ. (ಕೋಡಿಮಠಶ್ರೀ ಭವಿಷ್ಯದಲ್ಲಿ ಬದಲಾವಣೆ)
ಈ ವರ್ಷ ನಡೆಯುವ ಚುನಾವಣೆಯಲ್ಲಿ ದೇಶ ಬಯಸುತ್ತಿರುವ ಬ್ರಹ್ಮಚಾರಿಯೊಬ್ಬರು ದೇಶದ ಪ್ರಧಾನಿ ಆಗುತ್ತಾರೆಂದು ಕೊಪ್ಪಳದ ಟಣಕನಕಲ್ ಮಠದ ಶರಣಬಸವಸ್ವಾಮಿ ಶರಣರು ಭವಿಷ್ಯವಾಣಿ ನುಡಿದಿದ್ದರು. ಕಳೆದ ವರ್ಷವೇ ಇದನ್ನು ಹೇಳಿದ್ದೆ. ಈ ಬಾರಿ ಮತ್ತೆ ಅದೇ ಭವಿಷ್ಯವಾಣಿಯನ್ನು ನುಡಿಯುತ್ತಿದ್ದೇನೆಂದು ಶರಣರು ಸುರುಪುರದಲ್ಲಿ ನಡೆದ ಧಾರ್ಮಿಕ ಸಭೆಯೊಂದರಲ್ಲಿ ಭವಿಷ್ಯ ನುಡಿದ್ದರು. (ಬ್ರಹ್ಮಚಾರಿ ದೇಶದ ಮುಂದಿನ ಪ್ರಧಾನಿ)
ಕೋಡಿಶ್ರೀಗಳ ಭವಿಷ್ಯವಾಣಿಯ ಜೊತೆ ಹುಬ್ಬಳ್ಳಿಯ ಜ್ಯೋತಿರ್ವಿಜ್ಞಾನ ಸಂಸ್ಥೆಯ ಅಧ್ಯಕ್ಷರು ನುಡಿದ ಭವಿಷ್ಯ ಸ್ಲೈಡಿನಲ್ಲಿ...

ಕೋಡಿಶ್ರೀಗಳ ಮುಂದುವರಿದ ಭಾಗ
ನಡೆವ ಹಾದಿ ಮೂರು ಭಾಗವಾದೀತು. ಮುದುಕನ ಕೋಲ ಮೇಲೆ ಕಾಗೆ ಕುಂತೀತು, ಮುತ್ತಿನ ಗಿಣಿ ಮುದುಕಾಗಿ ಮುತ್ತಾದೀತು. ಹಂತಕನ ಸುದ್ದಿ ಹರಡೀತು. ಅಂತರದಲ್ಲಿಯೇ ಹಾರೀತು, ಅಸ್ಥಿರ ಸರಕಾರ ಖಾಯಂ ಆದೀತು ಎಂದು ಒಗಟಿನ ಮೂಲಕ ಭವಿಷ್ಯ ನುಡಿದ್ದಾರೆ.

ಏನಿದರ ಅರ್ಥ
ಒಗಟಿನ ಮೂಲಕ ಹೇಳಿದ ಭವಿಷ್ಯವನ್ನು ಸಂಪೂರ್ಣವಾಗಿ ವಿವರಿಸದ ಕೋಡಿಶ್ರೀಗಳು, ಕೇಂದ್ರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ. ಯಾವ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಮತದಾನ ತನ್ನ ನೈತಿಕತೆ ಕಳೆದುಕೊಂಡಿದೆ ಎಂದು ಶ್ರೀಗಳು ಭವಿಷ್ಯ ನುಡಿದ್ದಾರೆ.

ರಾಜ್ಯ ಸುಭಿಕ್ಷ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸಿಎಂ ಪಟ್ಟ ಎನ್ನುವುದು ಮರೀಚಿಕೆಯಾಗಲಿದೆ ಎಂದೂ ಹೇಳಿದ್ದೆ. ರಾಜ್ಯದಲ್ಲಿ ಈ ಬಾರಿ ಮಳೆ ಬೆಳೆ ಚೆನ್ನಾಗಿ ಆಗಲಿದೆ, ನಾಡು ಸುಭಿಕ್ಷವಾಗಲಿದೆ - ಕೋಡಿಶ್ರೀಗಳು.

NDA ಅಧಿಕಾರಕ್ಕೆ
ಇತರ ಪಕ್ಷಗಳ ಸಹಕಾರ ಪಡೆದು ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಖಂಡಿತ. 250ಕ್ಕೂ ಹೆಚ್ಚು ಸ್ಥಾನವನ್ನು ಪಡೆದು ಇತರ ಪಕ್ಷಗಳ ಸಹಕಾರದೊಂದಿಗೆ ಸರಕಾರ ರಚಿಸಿ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ - ಹುಬ್ಬಳ್ಳಿ ಅಖಿಲ ಕರ್ನಾಟಕ ಜ್ಯೋತಿರ್ವಿಜ್ಞಾನ ಸಂಸ್ಥೆಯ ಅಧ್ಯಕ್ಷ ವಿ ಗಣೇಶ ಹೆಗಡೆ.

ರಾಜ್ಯದಲ್ಲಿ ಯಾರಿಗೆ ಎಷ್ಟು?
ಗಣೇಶ ಹೆಗಡೆ ನುಡಿದ ಭವಿಷ್ಯ ಪ್ರಕಾರ ರಾಜ್ಯದಲ್ಲಿ ಪಕ್ಷಗಳು ಗಳಿಸುವ ಸೀಟು ಇಂತಿದೆ
ಬಿಜೆಪಿ : 16 - 18
ಕಾಂಗ್ರೆಸ್ : 8 - 10
ಜೆಡಿಎಸ್ : 3 - 4
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications