Kogilu Eviction Row | ಕೇರಳ ಚುಣಾವಣೆಗಾಗಿ ರಾಜ್ಯದ ಹಿತಾಸಕ್ತಿ ಬಲಿ ಕೊಡುತ್ತಿರುವ ಕಾಂಗ್ರೆಸ್: ವಿಜಯೇಂದ್ರ
ಬೆಂಗಳೂರು: ಯಲಹಂಕ ವಲಯದ ಕೋಗಿಲು ಬಡಾವಣೆಯ ಅಕ್ರಮ ನಿವಾಸಿಗಳ ತೆರವುಗೊಳಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಕ್ರಮವು ಅಂತಾರಾಜ್ಯ ಮಟ್ಟದಲ್ಲಿ ಚರ್ಚೆಯಾಗಿದೆ. ಈ ನಡೆಯನ್ನು ರಾಜ್ಯದ ಸಿಎಂ, ಡಿಸಿಎಂ ನಾಯಕರು ಸಮರ್ಥಿಸಿಕೊಂಡರು. ಅದರ ಬೆನ್ನಲ್ಲೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ. ಈ ಮೂಲಕ ಕೇರಳ ಚುನಾವಣೆ ಪೂರ್ವದಲ್ಲಿ ಓಲೈಕೆ ರಾಜಕಾರಣಕ್ಕೆ ಮುಂದಾಗಿದೆ. ರಾಜ್ಯ ರಾಜಕೀಯ ಹಿತಾಸಕ್ತಿಯನ್ನು ಬಲಿ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಈ ಬೆಳವಣಿಗೆ ಸಂಬಂಧ ಭಾನುವಾರ ಎಕ್ಸ್ ಪೋಸ್ಟ್ ಮಾಡಿರುವ ಅವರು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಮರ್ಥಿಸಿಕೊಂಡು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆಯನ್ನು ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದಾಗುತ್ತಿದ್ದಂತೆ ಕೆ.ಸಿ ವೇಣುಗೋಪಾಲ್ ಅವರ ಹೇಳಿಕೆಗೆ ಡಿಸಿಎಂ ಮಣಿದಂತೆ ಪ್ರತಿಕ್ರಿಯಿಸಿದ್ದಾರೆ. ಊಸರವಳ್ಳಿಯಂತೆ ಬಣ್ಣದ ಮಾತುಗಳನ್ನಾಡಿದ್ದು, ಇದು ಕರ್ನಾಟಕದ ಸ್ವಾಭಿಮಾನದ ಘನತೆಯನ್ನು ಕುಗ್ಗಿಸಿದೆ ಎಂದರು.

ಮುಂದೆ ಬರುವ ಕೇರಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇರಳ ಮೂಲದ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕ ಸರ್ಕಾರದ ಮೇಲೆ ತಾವು ನಿಯಂತ್ರಣ ಸಾಧಿಸಿದ್ದೇವೆ ಎಂಬುದನ್ನು ಸಾಕ್ಷೀಕರಿಸುವ ನಿಟ್ಟಿನಲ್ಲಿ ಕೋಗಿಲು ಬಡಾವಣೆಯ ಪ್ರಕರಣವನ್ನು ಎ.ಐ.ಸಿ.ಸಿ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಕೇರಳ ದರ್ಬಾರ್ಗೆ ಅವಕಾಶ
ರಾಜ್ಯ ಸರ್ಕಾರ ಮಾನವೀಯ ದೃಷ್ಠಿಕೋನ ಹರಿಸಿಲ್ಲ ಎಂದು ಅಸಮಾಧಾನಿಸಿ ಸಂತ್ರಸ್ತರಿಗೆ ಸೂಕ್ತ ಪುನರ್ವಸತಿ ಕಲ್ಪಿಸಿಕೊಡುವ ಭರವಸೆ ನೀಡುವ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದೆಲ್ಲ ನೋಡಿದರೆ ಕೇರಳ ಚುನಾವಣಾ ರಾಜಕೀಯಕ್ಕೆ ಕರ್ನಾಟಕದ ಹಿತಾಸಕ್ತಿ ಬಲಿಕೊಡಲು ಕಾಂಗ್ರೆಸ್ ಹೈ ಕಮಾಂಡ್ ಸಿದ್ದವಾದಂತೆ ಕಾಣುತ್ತಿದೆ. ಈ ಹಿಂದೆ ಅಂದಿನ ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಖುಷಿ ಪಡಿಸಲು ಕೇರಳದಲ್ಲಿ ಆನೆ ದಾಳಿಗೊಳಗಾದವರು ಹಾಗೂ ನೆರೆ ಹಾವಳಿಯಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಮನೆ ಕಟ್ಟಿಕೊಡುವ ಕಾರ್ಯದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿಶೇಷ ಆಸಕ್ತಿ ವಹಿಸಿತ್ತು. ಪ್ರತೀ ಹಂತದಲ್ಲೂ ಕರ್ನಾಟಕದಲ್ಲಿ ಕೇರಳ ದರ್ಬಾರ್ ನಡೆಯಲು ಅವಕಾಶ ಮಾಡಿಕೊಡುತ್ತಿರುವುದು ಕನ್ನಡಿಗರ ಸ್ವಾಭಿಮಾನವನ್ನು ಅಡವಿಟ್ಟಂತಾಗಿದೆ ಎಂದು ದೂರಿದರು.
ಕನ್ನಡ ನಾಡು ಪುಣ್ಯಕೋಟಿಯ ಪುಣ್ಯಭೂಮಿ. ಮಾನವೀಯತೆ ತೋರಿಸುವುದರಲ್ಲಿ ನಾವು ಜಗತ್ತಿಗೆ ಮಾದರಿ. ಆದರೆ ವಲಸಿಗರ ಅಕ್ರಮ ಕಾನೂನು ಉಲ್ಲಂಘನೆಗಳನ್ನು ಸಹಿಸಿಕೊಳ್ಳಬೇಕೆಂದು ನಿರೀಕ್ಷಿಸುವುದು ಮಾನವೀಯತೆ ಎಂದು ಎನಿಸಿಕೊಳ್ಳದು. ಇಂತಹಾ ಚಟುವಟಿಕೆಗಳನ್ನು ಪುನರ್ವಸತಿ ಹೆಸರಿನಲ್ಲಿ ಉತ್ತೇಜಿಸಿದರೆ ಸರ್ಕಾರದ ಖಾಲಿ ಭೂಮಿ, ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಇನ್ನು ಮುಂದೆ ಯಾವುದೇ ರಕ್ಷಣೆ ಸಿಗಲಾರದು.
ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ಹೈ ಕಮಾಂಡ್ ನ ಒತ್ತಡಗಳಿಗೆ ಮಣಿದು ಕರ್ನಾಟಕದ ಹಿತಾಶಕ್ತಿಯನ್ನು ಬಲಿಕೊಟ್ಟರೆ ಅಲ್ಪಸಂಖ್ಯಾತರ ಹೆಸರಿನಲ್ಲಿ ಕೋಗಿಲು ಬಡಾವಣೆಯಲ್ಲಿ ರಾಜಕೀಯ ಓಲೈಕೆಯ ಚಟುವಟಿಕೆ ಮುಂದುವರೆದರೆ ಅದು ಕರ್ನಾಟಕದ ಸ್ವಾಭಿಮಾನ ಹಾಗೂ ಈ ನೆಲದ ಕಾನೂನನ್ನು ಬಲಿಕೊಟ್ಟಂತಾಗುತ್ತದೆ ಎಂದರು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ವ್ಯತಿರಿಕ್ತವಾಗಿ ನಡೆದುಕೊಂಡರೆ ಕನ್ನಡಿಗರ ಪ್ರತಿಭಟನೆ ಎದುರಿಸಲು ಸಿದ್ದವಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಬೆಳವಣಿಗೆ ಹಿನ್ನೆಲೆ
ಈ ಬೆಳವಣಿಗೆ ಹಿನ್ನೆಲೆ ನೋಡುವುದಾದರೆ, ಜಿಬಿಎ ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೇರಳ ಸಿಎಂ, ಕರ್ನಾಟಕದಲ್ಲಿ ಕಾಂಗ್ರೆಸ್ ಬುಲ್ಯೋಜರ್ ನ್ಯಾಯ ಕ್ರಮ ಜಾರಿಗೆ ತಂದಂತಿದೆ ಎಂದು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಸಿದ್ದ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಅಕ್ರಮ, ವಾಸಕ್ಕೆ ಯೋಗ್ಯವಲ್ಲದ ಸ್ಥಳದಲ್ಲಿದ್ದವರನ್ನು ತೆರವುಗೊಳಿಸಲಾಗಿದೆ. ಮಾನವೀಯತೆ ದೃಷ್ಟಿಯಿಂದ ಅವರಿಗೆ ಮೂಲಸೌಕರ್ಯ ಕಲ್ಪಿಸಿಕೊಡಲಾಗುವುದು ಎಂದು ಹೇಳಿ ತಿರುಗೇಟು ನೀಡಿದ್ದರು. ನಂತರ ಕೆಸಿ ವೇಣುಗೋಪಾಲ್ ಅವರು ಪ್ರತಿಕ್ರಿಯಿಸಿದರು. ಇದರ ಹಿಂದೆ ಕೇರಳ ಚುನಾವಣಾ ರಾಜಕೀಯದ ಲೆಕ್ಕಾಚಾರ ಇದೆ ಎಂದು ಬಿಜೆಪಿ ದೂರಿತು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications