ಅಬ್ಬಾ! ಕೊನೆಗೂ ಕೋಲಾರ -ಸಿಬಿ ಪುರ ರೈಲು ಬಿಡ್ತಾರಂತೆ
ಶಿಡ್ಲಘಟ್ಟ, ನ.5: ಕೋಲಾರದ ಸಂಸದ ಕೆಎಚ್ ಮುನಿಯಪ್ಪ ಅವರು ರೈಲ್ವೆ ಸಚಿವರಾಗಿದ್ದ ಕಾಲದಲ್ಲೂ ಜಾರಿಯಾಗದ ಕೋಲಾರ -ಚಿಕ್ಕಬಳ್ಳಾಪುರ ರೈಲು ಯಾನಕ್ಕೆ ಹಾಲಿ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಇದೇ ಶುಕ್ರವಾರ ಹಸಿರು ಬಾವುಟ ತೋರಲಿದ್ದಾರೆ. ತನ್ಮೂಲಕ ಅಖಂಡ ಕೋಲಾರದ ಜನತೆ ಮೂರ್ನಾಲ್ಕು ದಶಕಗಳಿಂದ ಕಾಣುತ್ತಿದ್ದ ಕನಸು ನನಸಾಗುತ್ತಿದೆ. ಬಹುಶಃ ಈ ಎರಡೂ ವಾಕ್ಯಗಳೇ ಸಾಕಾದೀತು ಕೋಲಾರ -ಸಿಬಿ ಪುರ ರೈಲು ಕಥೆಯನ್ನು ಹೇಳಲು.

ನವೀಕೃತ ಬ್ರಾಡ್ ಗೇಜ್ ರೈಲು ಮಾರ್ಗ ಕಾಮಗಾರಿ ಮುಗಿದಿದ್ದು ಪ್ರಯೋಗಾರ್ಥ ಸಂಚಾರ ಇದೇ ನವೆಂಬರ್ 8ರಂದು ನಡೆಯಲಿದೆ. ಕೋಲಾರ- ಶ್ರೀನಿವಾಸಪುರ- ಚಿಂತಾಮಣಿ- ಶಿಡ್ಲಘಟ್ಟ ಮಾರ್ಗವಾಗಿ ಚಿಕ್ಕಬಳ್ಳಾಪುರವನ್ನು ಸಂಪರ್ಕಿಸುವ ರೈಲು ಮಾರ್ಗ ಇದಾಗಿದೆ. South-Western Railway ಈ ಬ್ರಾಡ್ ಗೇಜ್ ರೈಲು ಮಾರ್ಗವನ್ನು ಪೂರ್ಣಗೊಳಿಸಿದೆ.
ರಾಜ್ಯೋತ್ಸವದ ಕೊಡುಗೆಯಾಗಿ ನ. 8ರಂದು ಕೇಂದ್ರ ರೈಲ್ವೆ ಸಚಿವ ಖರ್ಗೆ ಅವರು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಚಿಕ್ಕಬಳ್ಳಾಪುರದಲ್ಲಿ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ತೋರಿಸಿ, ಅದೇ ರೈಲಿನಲ್ಲಿ ಕೋಲಾರಕ್ಕೆ ಪ್ರಯಾಣ ಮಾಡಿ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಕೋಲಾರ -ಸಿಬಿ ಪುರ ನಡುವಣ 87 ಕಿಮೀ ದೂರದ ನ್ಯಾರೋಗೇಜ್ ರೈಲು ಮಾರ್ಗವನ್ನು 99 ಕೋಟಿ ರೂ ವೆಚ್ಚದಲ್ಲಿ ಬ್ರಾಡ್ ಗೇಜ್ ಗೆ ಪರಿವರ್ತಿಸಲು 2006-07ರಲ್ಲಿ ರೈಲ್ವೆ ಮಂಡಳಿ ಒಪ್ಪಿಗೆ ಸೂಚಿಸಿತ್ತು. 2 ಬಾರಿ ಯೋಜನಾ ವೆಚ್ಚ ಪರಿಷ್ಕೃತಗೊಂಡು ಈಗ 440 ಕೋಟಿ ರೂ. ಗೆ ವೆಚ್ಚವಾಗಿದೆ. ಮಾರ್ಗಮಧ್ಯೆ ಇನ್ನೂ ಕೆಲವೆಡೆ ಸ್ಟೇಷನ್ ನಿರ್ಮಾಣ, ಸೌಲಭ್ಯಗಳ ಬೇಡಿಕೆ ಈಡೇರಿಕೆಗೆ ಇನ್ನೂ 50 ಕೋಟಿ ರೂ. ವೆಚ್ಚ ಮಾಡಬೇಕಾದ ಅಗತ್ಯವಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications