ಬಯಲುಸೀಮೆ ಗೌರಿಬಿದನೂರಲ್ಲಿ ಹಸಿರು ಕ್ರಾಂತಿ
ಗೌರಿಬಿದನೂರು, ಮೇ 24: ಹಸಿರು ಕ್ರಾಂತಿ ಎಂದರೇನು? ಮರ ಗಿಡಗಳನ್ನು ಬೆಳೆಸಿ ಪರಿಸರದಲ್ಲಿ ಸಮತೋಲನ ಕಾಪಾಡುವುದು ಎಂದು ಸರಳವಾಗಿ ಉತ್ತರಿಸಬಹುದು. ಬಿಸಿಲಿನಲ್ಲಿ ಬಳಲುವ, ಕುಡಿಯುವ ನೀರಿಗೆ ಸದಾ ಹಾಹಾಕಾರದಲ್ಲೇ ಇರುವ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಹಸಿರು ಕ್ರಾಂತಿ ಸಾಧ್ಯವೇ?
ಹೌದು, ಸಾಧ್ಯವಿದೆ ಎಂಬುದನ್ನು ಅಲ್ಲಿಯ ಜನತೆ ತೋರಿಸಿಕೊಟ್ಟಿದ್ದಾರೆ. ಗೌರಿಬಿದನೂರಿನಲ್ಲಿ ಸದ್ದಿಲ್ಲದೇ ಹಸಿರು ಕ್ರಾಂತಿಗೆ ವೇದಿಕೆ ಸಿದ್ಧವಾಗಿದೆ. ಶಾಸಕ ವಿಧಾನ ಸಭೆಯ ಉಪಸಭಾಪತಿ, ಶಿವಶ೦ಕರ ರೆಡ್ಡಿ ಮರ ಗಿಡಗಳನ್ನು ಬೆಳೆಸಲು ಸ್ವತಃ ಮುಂದೆ ನಿಂತು ಕ್ರಮ ತೆಗೆದುಕೊಳ್ಳುತ್ತಿರುವುದು ಶ್ಲಾಘನೀಯ.[ಶುದ್ಧ ಕುಡಿಯುವ ನೀರು ನೀಡಿದವರಿಗೆ ಅನಂತ ಧನ್ಯವಾದ]

ಈ ಬಾರಿ ಮಳೆಗಾಲಕ್ಕೆ ಮುನ್ನವೇ ಯುವಕರ ತಂಡವೊಂದು ಕಿಶೋರ್ ಎಂಬುವರ ನೇತೃತ್ವದಲ್ಲಿ ಸಾವಿರಾರು ಸಸಿಗಳನ್ನು ನೆಟ್ಟು ಪೋಷಿಸಲು ಸಿದ್ಧತೆ ಮಾಡಿಕೊಂಡಿದೆ. ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ. ಬಯಲು ಸೀಮೆಯನ್ನು ಹಸಿರು ಸೀಮೆ ಮಾಡಲು ಹೊರಟವರ ಯೋಜನೆ ಮೇಲೆ ಒಂದು ನೋಟ ಇಲ್ಲಿದೆ.

* ಗೌರಿಬಿದನೂರು ತಾಲೂಕಿನ ಎಲ್ಲಾ ಶಾಲಾ ಆವರಣಗಳಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರೊ೦ದಿಗೆ 40,000ಸಸಿ ನೆಟ್ಟು ಮರವಾಗಿಸುವ ಯೋಜನೆ["ನೀರು ಕೇಳಿದವರ ರಕ್ತ ಬಸಿದ ನಿಮಗೆ ನಾಚಿಕೆಯಾಗಲ್ವಾ"?]
* ಮಧುಗಿರಿ ರಸ್ತೆಯಲ್ಲಿರುವ ಕುರುಡಿ ಅರಣ್ಯ ಪ್ರದೇಶದಲ್ಲಿರುವ 1200 ಎಕರೆಯಲ್ಲಿ 500 ಎಕರೆಯಷ್ಟು ಜಾಗದಲ್ಲಿದ್ದ ನೀಲಗಿರಿಯನ್ನು ತೆಗೆಸಿ, ಸ್ಥಳೀಯ ಜಾತಿಯ ಮರಗಳ ಕಾಡನ್ನು ಬೆಳೆಸಲು ಸಿದ್ಧತೆ.
* ತಾಲೂಕಿನ ಮರಳೂರು ಬಳಿ ಐ.ಐ.ಎಸ್ಸಿ, ಇಸ್ರೋ ಮತ್ತಿತರ ಸ೦ಸ್ಥೆಗಳ ಸಹಯೋಗದಲ್ಲಿ "ಜೀವ ವೈವಿಧ್ಯ ಪಾರ್ಕ್"
* ಆ೦ಧ್ರಕ್ಕೆ ಹೊ೦ದಿಕೊ೦ಡಿರುವ ಕೈಗಾರಿಕಾ ಪ್ರದೇಶದಲ್ಲಿರುವ ವಿಶ್ವೇಶ್ವರಯ್ಯನವರ ಪ್ರತಿಮೆ ಬಳಿಯ 5 ಎಕರೆ ಜಮೀನಿನಲ್ಲಿ ಸಸಿ ನೆಡುವ ಯೋಜನೆ[ಬಿಸಿಲ ನಾಡಲ್ಲಿ ಅರಳುತ್ತಿರುವ ಜರ್ಬೆರಾ ಹೂಗಳು!]
* ತಾಲೂಕಿನ ನಗರ ಮತ್ತು ಗ್ರಾಮಾ೦ತರ ಪ್ರದೇಶದ ರಸ್ತೆಗಳ ಎರಡೂ ಕಡೆ ಹ೦ತಹ೦ತವಾಗಿ ಸಸಿ ನೆಟ್ಟು ಮರವಾಗಿಸುವ ಯೋಜನೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications