ಮುಳಬಾಗಿಲು: ಕುರಾನ್ ಹರಿದ ಯುವಕನ ಹೊಡೆದು ಹತ್ಯೆ

ಕುಡಿದ ಅಮಲಿನಲ್ಲಿ ಇಮ್ರಾನ್ ಕುಕೃತ್ಯ:
ಸ್ಥಳೀಯ ನಿವಾಸಿ ಇಮ್ರಾನ್ ಎಂಬ 25 ವರ್ಷದ ಯುವಕ ಮಸೀದಿಯೊಳಕ್ಕೆ ನುಗ್ಗಿ ಕುರಾನ್ ಗ್ರಂಥವನ್ನು ಮಸೀದಿಯಿಂದ ಹೊರಗೆ ತಂದು ಅದನ್ನು ಹರಿದು ಬೆಂಕಿಯಿಂದ ಸುಡಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಇಷ್ಟಕ್ಕೂ ಇಮ್ರಾನ್ ಕುಡಿದ ಅಮಲಿನಲ್ಲಿ ಈ ಕುಕೃತ್ಯವೆಸಗಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.
(ಕುರಾನ್ ಪಠಿಸದ ಪುತ್ರನ ಕೊಂದುಸುಟ್ಟ ಮಹಾತಾಯಿ)
ಇಮ್ರಾನ್ ಕುಡಿದ ಅಮಲಿನಲ್ಲಿ ಭಾನುವಾರ ಸಂಜೆ ಪಟ್ಟಣದ ನೂಗಲಬಂಡೆಯಲ್ಲಿರುವ ಮಸೀದಿಗೆ ನುಗ್ಗಿದ್ದಾನೆ. ಅಲ್ಲಿ ಮುಸ್ಲಿಮರ ಪವಿತ್ರ ಗ್ರಂಥವಾದ ಕುರಾನ್ ಅನ್ನು ಹೊರಗಡೆ ತಂದು ಹರಿದು ಹಾಕಿದ್ದಾನೆ. ಬಳಿಕ ಬೆಂಕಿಯಿಂದ ಸುಡಲು ಪ್ರಯತ್ನಿದ್ದಾನೆ. ಇದನ್ನು ಸ್ಥಳದಲ್ಲಿದ್ದವರು ರೊಚ್ಚಿಗೆದ್ದು ಯುವಕನನ್ನು ಮನ ಬಂದಂತೆ ಥಳಿಸಿದ್ದಾರೆ. ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ಸಂಬಂಧ ಯಾರನ್ನೂ ಬಂಧಿಸಿಲ್ಲ. ಮುಳಬಾಗಿಲು ಪಿಎಸ್ಸೈ ಶಂಕರಪ್ಪ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಜಮೀಲ್ ಊರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications