ಪಕ್ಷದ ನಾಯಕರ ಸಂಚಿಗೆ ಬಲಿಯಾದೆ : ಕೊಂಡಯ್ಯ
ಬೆಂಗಳೂರು, ನ. 28 : ಬಳ್ಳಾರಿಯಲ್ಲಿ ಪಕ್ಷದ ಕಚೇರಿ ನಿರ್ಮಾಣಕ್ಕೆಂದು ಮೀಸಲಾಗಿದ್ದ ನಿವೇಶನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪವನ್ನು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ಕೊಂಡಯ್ಯ ನಿರಾಸಕರಿಸಿದ್ದಾರೆ. ನನ್ನ ರಾಜಕೀಯ ವಿರೋಧಿಗಳ ಷಡ್ಯಂತ್ರವಿದು ಅವರು ಅವರು ಆರೋಪಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಿಗೆ ಎಲ್ಲಾ ದಾಖಲೆಗಳ ಸಮೇತ ಉತ್ತರ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಕೆ.ಸಿ.ಕೊಂಡಯ್ಯ, ಪಕ್ಷದ ಕಚೇರಿಗಾಗಿ ಮಂಜೂರಾಗಿದ್ದ ನಿವೇಶನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಸುಳ್ಳು. ರಾಜೀವ್ ಗಾಂಧಿ ಟ್ರಸ್ಟ್ ಗೆ ಜಾಗ ಮಂಜೂರಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು. ಜಿಲ್ಲೆಯ ರಾಜಕೀಯ ವಿರೋಧಿಗಳು ಇಂತಹ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು. (ಕೆಸಿ ಕೊಂಡಯ್ಯ ಅಮಾನತಿಗೆ ರಾಹುಲ್ ಸೂಚನೆ!)

ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ, ರಾಜೀವ್ ಗಾಂಧಿ ಟ್ರಸ್ಟ್ ಗಾಗಿ ನಿವೇಶನ ನೀಡಿದ್ದರು. 2001ರಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ 30 ವರ್ಷಗಳ ಅವಧಿಗೆ ನಿವೇಶನವನ್ನು ಟ್ರಸ್ಟ್ ಗೆ ಗುತ್ತಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಮೊದಲು ಟ್ರಸ್ಟ್ ಗೆ ಎಂ.ವೈ.ಗೋರ್ಪಡೆ, ಅಲ್ಲಂ ವೀರಭದ್ರಪ್ಪ, ಎಂ.ದಿವಾಕರ ಬಾಬು ಮುಂತಾದವರನ್ನು ಟ್ರಸ್ಟ್ ಸದಸ್ಯರಾಗಿ ನೇಮಕ ಮಾಡಲಾಗಿತ್ತು. (ಕೆ.ಸಿ.ಕೊಂಡಯ್ಯಗೆ ಕೆಪಿಸಿಸಿಯಿಂದ ನೋಟಿಸ್)
ಆದರೆ, ಟ್ರಸ್ಟ್ ಸದಸ್ಯರು ಸಾಮಾಜಿಕ ಚಟುವಟಿಕೆಗಳ ಬಗ್ಗೆ ಆಸಕ್ತಿ ತೋರಿಸಲಿಲ್ಲ. ಆದ್ದರಿಂದ ಟ್ರಸ್ಟ್ ಗೆ ನನ್ನ ಪತ್ನಿ ಮೀನಾಕ್ಷಿ ಮತ್ತು ಪುತ್ರ ಪ್ರಸಾದ್ ಅವರನ್ನು ಸದಸ್ಯರಾಗಿ ನೇಮಕ ಮಾಡಿಕೊಂಡೆ ಎಂದು ಕೊಂಡಯ್ಯ ಸ್ಪಷ್ಟಪಡಿಸಿದರು. ಟ್ರಸ್ಟ್ ಸರ್ಕಾರದಿಂದ ಯಾವುದೇ ಅನುದಾನವನ್ನು ಪಡೆದಿಲ್ಲ ಎಂದು ಅವರು ತಿಳಿಸಿದರು.
ಟ್ರಸ್ಟ್ ಗೆ ಸಂಬಂಧಿಸಿದ ದಾಖಲೆ ಪತ್ರಗಳ ಸಮೇತ ಪಕ್ಷದ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ಉತ್ತರ ನೀಡುತ್ತೇನೆ. ಬಳ್ಳಾರಿಯ ಜಿಲ್ಲಾ ಕಾಂಗ್ರೆಸ್ ನಾಯಕರು ನನ್ನ ರಾಜಕೀಯ ಏಳಿಗೆಯನ್ನು ಸಹಿಸದೆ ಸಂಚು ರೂಪಿಸಿದರ. ಆದ್ದರಿಂದ, ಇಂತಹ ಆರೋಪ ನನ್ನ ಮೇಲೆ ಬಂದಿದೆ. ಸೂಕ್ತ ಸಮಯದಲ್ಲಿ ಅವರಿಗೆ ಉತ್ತರ ಕೊಡುತ್ತೇನೆ ಎಂದು ಕೊಂಡಯ್ಯ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications