ಹಂಗಾಮಿ ರಾಜ್ಯಪಾಲರಾಗಿ ರೋಸಯ್ಯ ಪ್ರಮಾಣ ವಚನ
ಬೆಂಗಳೂರು, ಜೂ.29: ತಮಿಳುನಾಡಿನ ರಾಜ್ಯಪಾಲ ಕೆ.ರೋಸಯ್ಯ ಅವರು ಕರ್ನಾಟಕದ ಹಂಗಾಮಿ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾನುವಾರ ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ಎಚ್ ವಘೇಲ ಅವರು ಪ್ರಮಾಣ ವಿಧಿ ಬೋಧಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲ ಕ್ಯಾಬಿನೆಟ್ ಸಚಿವರು ಉಪಸ್ಥಿತರಿದ್ದರು.
ಹಂಸರಾಜ್ ಭಾರದ್ವಾಜ್ ಅವರ ಅಧಿಕಾರ ಅವಧಿ ಮುಕ್ತಾಯ(ಜೂ.28ಕ್ಕೆ)ವಾದ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಮಿಳುನಾಡಿನ ಹಾಲಿ ರಾಜ್ಯಪಾಲ ಕೆ ರೋಸಯ್ಯ ಅವರಿಗೆ ಕರ್ನಾಟಕದ ರಾಜ್ಯಪಾಲರಾಗಿ ಹೆಚ್ಚುವರಿ ಅಧಿಕಾರ ಸ್ವೀಕರಿಸುವಂತೆ ಸೂಚಿಸಿದ್ದರು. ಕರ್ನಾಟಕದಲ್ಲಿ ಹೊಸ ರಾಜ್ಯಪಾಲರು ನೇಮಕಗೊಳ್ಳುವ ತನಕ ರೋಸಯ್ಯ ಅವರು ಹಂಗಾಮಿ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಜೂ.28ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ ರೋಸಯ್ಯ ಅವರು ಭಾನುವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದು ಮಧ್ಯಾಹ್ನ 12 ಗಂಟೆ ನಂತರ ಚೆನ್ನೈಗೆ ತೆರಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಚೆನ್ನೈಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರೋಸಯ್ಯ ಅವರು ತಮಿಳುನಾಡಿಗೆ ವಾಪಸ್ ಹೋಗಲಿದ್ದಾರೆ ಎಂದು ರಾಜಭವನ ಮೂಲಗಳು ಹೇಳಿವೆ.[ಭಾರದ್ವಾಜ್ ಮತ್ತು ವಿವಾದಗಳ ಹಿನ್ನೋಟ]
ಎಚ್.ಆರ್.ಭಾರದ್ವಾಜ್ ಅವರಿಂದ ತೆರವಾಗುವ ಕರ್ನಾಟಕದ ರಾಜ್ಯಪಾಲರ ಹುದ್ದೆಗೆ ಯಾರು ನೇಮಕವಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ ಜೋಷಿ, ಯಶವಂತ ಸಿನ್ಹಾ, ವಿ.ಕೆ.ಮಲ್ಹೋತ್ರಾ ಮತ್ತು ಕಲ್ಯಾಣ್ ಸಿಂಗ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ












Click it and Unblock the Notifications