ಎವರೆಸ್ಟ್ ಏರಿದ ಅನುಭವ ಬಿಚ್ಚಿಟ್ಟ ಕೊಪ್ಪಳದ ಪ್ರಭಾಕರನ್
ಕೊಪ್ಪಳ, ಮೇ 30 : ಮೌಂಟ್ ಎವರೆಸ್ಟ್ ಶಿಖರವೇರಿದ ದೇಶದ ಮೊದಲ ಐಎಫ್ಎಸ್ ಅಧಿಕಾರಿ ಎನ್ನುವ ಹೆಗ್ಗಳಿಗೆ ಪಾತ್ರವಾಗಿರುವ ಕೊಪ್ಪಳದ ಅರಣ್ಯ ಉಪ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್ ಅವರನ್ನು ದೆಹಲಿಯ ಕರ್ನಾಟಕ ಭವನದಲ್ಲಿ ಸನ್ಮಾನಿಸಲಾಯಿತು.
ಕೊಪ್ಪಳದಲ್ಲಿ ಕೆಲಸ ಮಾಡುತ್ತಿರುವ ತಮಿಳುನಾಡು ಮೂಲದ ಎಸ್.ಪ್ರಭಾಕರನ್ 2011ನೇ ಬ್ಯಾಚ್ ಐಎಫ್ಎಸ್ ಅಧಿಕಾರಿ. ಮೌಂಟ್ ಎವರೆಸ್ಟ್ ಶಿಖರವನ್ನು ಏರುವ ಮೂಲಕ ಅವರು ಕರ್ನಾಟಕ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ. [ಬೆಂಗಳೂರು ಎವರೆಸ್ಟ್ ಚಾಲೆಂಜ್ ಜಯಿಸಿದವರು]

ಕಳೆದ ವರ್ಷವೂ ಪ್ರಭಾಕರನ್ ಅವರು ಮೌಂಟ್ ಎವರೆಸ್ಟ್ ಏರಲು ಪ್ರಯತ್ನಿಸಿದ್ದರು. ಆದರೆ, ನೇಪಾಳದಲ್ಲಿ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ಸಾಧ್ಯವಾಗಿರಲಿಲ್ಲ. 2016ರ ಏಪ್ರಿಲ್ 8ರಂದು ಚೀನಾ ಭಾಗದ ಉತ್ತರ ದಿಕ್ಕಿನ ಎವರೆಸ್ಟ್ ಏರಲು ಆರಂಭಿಸಿದ ಅವರು, ಮೇ 19ರ ಮಧ್ಯರಾತ್ರಿ ತುತ್ತತುದಿ ತಲುಪಿದರು. ಮೇ 20 ರಂದು ಎವರೆಸ್ಟ್ ಏರಿದ ಸಾಹಸ ದಾಖಲೆ ಸೇರಿತು. [ಬೆಂಗಳೂರಿನಲ್ಲೇ ಮೌಂಟ್ ಎವರೆಸ್ಟ್ ಹತ್ತೋಣ ಬನ್ನಿ]
ಏವರೆಸ್ಟ್ ಏರಿದ ಅನುಭವ : ಎಸ್.ಪ್ರಭಾಕರನ್ ಅವರು ಮೌಂಟ್ ಎವರೆಸ್ಟ್ ಏರಿದ ಅನುಭವವನ್ನು ಹಂಚಿಕೊಂಡಿದ್ದಾರೆ. ಇನ್ನೊಮ್ಮೆ ಮೌಂಟ್ ಎವರೆಸ್ಟ್ ಏರುವ ಅವಕಾಶ ಸಿಕ್ಕರೆ ದಕ್ಷಿಣ ಭಾಗದಿಂದ ಏರುವ ಕನಸು ಹೊಂದಿದ್ದಾರೆ ಪ್ರಭಾಕರನ್. [ಹಿಮಾಲಯ ಹತ್ತಿಳಿದ ಹುಬ್ಬಳ್ಳಿ ಬೆಡಗಿ ನಂದಿತಾ]
'ಮೌಂಟ್ ಎವರೆಸ್ಟ್ ಉತ್ತರ ಭಾಗ ಬಹಳ ಆಳವಿತ್ತು. ಅತೀ ಎತ್ತರ ಪ್ರದೇಶವಾಗಿದ್ದರಿಂದ ಆಮ್ಲಜನಕದ ತೊಂದರೆಯೂ ಆಗುತ್ತಿತ್ತು. ಮೊದಲ ಬೇಸ್ ಕ್ಯಾಂಪ್ 5400 ಅಡಿ ಎತ್ತರದಲ್ಲಿದ್ದು, ಇಲ್ಲಿಗೆ ತಲುಪಲು ಆಮ್ಲ ಜನಕದ ಕೊರತೆ ಎದುರಾಗುವುದಿಲ್ಲ'

6,400 ಮೀಟರ್ ಎತ್ತರದಲ್ಲಿರುವ ಅಡ್ವಾನ್ಸ್ ಕ್ಯಾಂಪ್, ಕೃತಕ ಆಮ್ಲ ಜನಕದ ಸಹಾಯದಿಂದ 7,100 ಮೀಟರ್ ಎತ್ತರದಲ್ಲಿರುವ ನಾರ್ಥ್ ಕೊಲ್ ಕ್ಯಾಂಪ್, ಮೂರನೇ ಹಂತವಾಗಿ 8,300 ಮೀಟರ್ ಎತ್ತರದಲ್ಲಿರುವ ಕ್ಯಾಂಪ್ ಏರಿದ ನಂತರ ಕಡಿದಾಗಿರುವ ಶಿಖರದ ತುತ್ತ ತುದಿಯಾಗಿರುವ 8,850 ಮೀಟರ್ ಎತ್ತರದ ಶಿಖರವೇರಿ ದಾಖಲೆ ಮಾಡಲಾಯಿತು'.
'ಹೈದ್ರಾಬಾದ್ ಮೂಲದ ಟ್ರಾನ್ಸ್ ಅಡ್ವೆನ್ಚರ್ ಕಂಪನಿಯ ಪ್ರಾಯೋಜಕತ್ವ ನೀಡಿತ್ತು. ಕ್ಯಾಂಪ್ನಲ್ಲಿ ಊಟ ದೊರಕುತ್ತಿತ್ತು. ಗಾಳಿ ಹೆಚ್ಚಿನ ಪ್ರಮಾಣದಲ್ಲಿ ಬೀಸಿದಾಗ ಅಪಾಯವೂ ಇರುತ್ತಿತ್ತು, ಖಾಯಿಲೆ ಬೀಳುವ ಸಂಭಾವವೂ ಉಂಟಾಗುತ್ತಿತ್ತು. ಕಳೆದ 2 ವರ್ಷದಿಂದ ಶಿಖರವೇರಲು ಪ್ರಯತ್ನಿಸಲಾಗಿದ್ದು, ನಿರಂತರ ಅಭ್ಯಾಸದಿಂದ' ಇದು ಸಾಧ್ಯವಾಯಿತು ಎನ್ನುತ್ತಾರೆ ಪ್ರಭಾಕರನ್.
ಪ್ರಭಾಕರನ್ ಜೊತೆ ಇಬ್ಬರು ಐಎಎಸ್ ಅಧಿಕಾರಿಗಳು ಹಾಗು ಇಬ್ಬರು ಐಪಿಎಸ್ ಅಧಿಕಾರಿಗಳು ಶಿಖರವೇರಿದ್ದಾರೆ. ಮತ್ತೊಮ್ಮೆ ಅವಕಾಶ ಸಿಕ್ಕರೆ ದಕ್ಷಿಣ ಭಾಗದಿಂದ ಎವರೆಸ್ಟ್ ಏರುವ ಕನಸು ಹೊಂದಿದ್ದಾರೆ. [ಮಾಹಿತಿ : ಕೊಪ್ಪಳ ವಾರ್ತೆ]
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications