ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಶ್ ಹೂಳೆತ್ತಿದ್ದ ಕೊಪ್ಪಳದ ತಲ್ಲೂರು ಕೆರೆಯಲ್ಲೀಗ ನೀರೋ ನೀರು

By ನಮ್ಮ ಪ್ರತಿನಿಧಿ
|
Google Oneindia Kannada News

ಕೊಪ್ಪಳ, ಅಕ್ಟೋಬರ್ 13: ಸ್ಯಾಂಡಲ್ ವುಡ್ ಸ್ಟಾರ್ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಯಶೋಮಾರ್ಗದ ಮೂಲಕ ಕಾಯಕಲ್ಪ ನೀಡಿದ್ದ ಕೊಪ್ಪಳದ ಕೆರೆಯೀಗ ಭರ್ತಿಯಾಗಿದೆ.

ಯಶ್ ಮತ್ತು ರಾಧಿಕಾ ಪಂಡಿತ್ ಉತ್ತರ ಕರ್ನಾಟಕದ ಕೆರೆಗಳ ಹೂಳೆತ್ತಿಸಿದ್ದರು. ಇವುಗಳಲ್ಲಿ ಕೊಪ್ಪಳದ ತಲ್ಲೂರು ಕೆರೆ ಭರ್ತಿಯಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ತಲ್ಲೂರ ಕೆರೆ ಸಂಪೂರ್ಣ ಭರ್ತಿಯಾಗಿದೆ.

Koppal's famous Tallur lake filled with water after rejuvenated by Yash and Radhika Pandit

ತಲ್ಲೂರು ಕೆರೆ ಭರ್ತಿಯಾಗಿರುವುದರಿಂದ ಈ ಭಾಗದ ರೈತರು ಸಂತಸಗೊಂಡಿದ್ದಾರೆ. ಹಿಂದೆಂದೂ ಇಷ್ಟೊಂದು ಪ್ರಮಾಣದಲ್ಲಿ ತಲ್ಲೂರು ಕೆರೆ ತುಂಬಿರಿರಲಿಲ್ಲ. ಅಲ್ಲದೆ ಹೂಳು ಬೇರೆ ತೆಗೆದಿರುವುದರಿಂದ ತಲ್ಲೂರು ಕೆರೆ ತುಂಬಾ ನೀರು ನಿಂತಿದೆ.

ಸುಮಾರು 90 ಎಕ್ರೆ ವಿಸ್ತೀರ್ಣವನ್ನು ಈ ಕೆರೆ ಹೊಂದಿದೆ. 'ಯಶೋಮಾರ್ಗ'ದ ಅಡಿಯಲ್ಲಿ 4 ಕೋಟಿ ವೆಚ್ಚದಲ್ಲಿ ಎರಡು ಮೂರು ತಿಂಗಳ ಕಾಲ ಈ ಕೆರೆಯ ಹೂಳೆತ್ತಲಾಗಿತ್ತು. ಇದರಿಂದ ಕೆರೆಯಲ್ಲಿ ಹೆಚ್ಚು ನೀರು ಸಂಗ್ರಹವಾಗಲು ಅನುಕೂಲವಾಗಿದೆ.

Koppal's famous Tallur lake filled with water after rejuvenated by Yash and Radhika Pandit

ತಲ್ಲೂರು ಕೆರೆ ತುಂಬಿರೋದ್ದರಿಂದ ಈ ಭಾಗದ ಹತ್ತಕ್ಕೂ ಹೆಚ್ಚು ಗ್ರಾಮದ ರೈತರಿಗೆ ಅನುಕೂಲವಾಗಿದೆ. ಕೆರೆ ಕಾಯಕಲ್ಪ ಕಲ್ಪಿಸಿದ ನಟ ಯಶ್ ಕಾರ್ಯವನ್ನು ರೈತರು ಸ್ಮರಿಸ್ತಿದ್ದಾರೆ.

English summary
Koppal's famous Tallur lake filled up with water after it was rejuvenated by Yashomarga foundation, founded by Yash and Radhika Pandit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X