ತಂದೆಯ ಜೊತೆ ಕೂಲಿ ಮಾಡುತ್ತಿದ್ದ ಬಾಲಕ ಶಾಲೆ ಸೇರಿದ
ಕೊಪ್ಪಳ, ಜುಲೈ 20 : ಕೈಯಲ್ಲಿ ಪುಸ್ತಕ ಹಿಡಿದು ಓದಿ ತನ್ನ ಭವಿಷ್ಯ ರೂಪಿಸಿಕೊಳ್ಳಬೇಕಾದ ಬಾಲಕ ಗಿಡಗಳಿಗೆ ನೀರು ಹಾಕುತ್ತಾ ತಂದೆಯ ಜೊತೆ ಕೂಲಿ ಕೆಲಸ ಮಾಡುತ್ತಿದ್ದ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಬಾಲಕನನ್ನು ಪುನಃ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ಬಳಿಯ ಅರಣ್ಯ ಇಲಾಖೆ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ ಮೌಲಾಹುಸೇನ್ (15) ಈಗ ಪುನಃ ಶಾಲೆಗೆ ಹೋಗುವಂತಾಗಿದೆ. ಬಾಲಕನ ತಂದೆಯ ಮನವೊಲಿಸಿದ ಜಿಲ್ಲಾ ಪಂಚಾಯಿತಿ ಸಿಇಓ ಆರ್. ರಾಮಚಂದ್ರನ್ ಅವರು, ಬಾಲಕನನ್ನು ಶಾಲೆಗೆ ಸೇರಿಸಿದ್ದಾರೆ. [ಶೌಚಾಲಯಕ್ಕಾಗಿ ಉಪವಾಸ ಕುಳಿತ ವಿದ್ಯಾರ್ಥಿನಿ ಮಲ್ಲಮ್ಮ!]

ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ : ಜುಲೈ 15ರಂದು ಆರ್. ರಾಮಚಂದ್ರನ್ ಅವರು, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರ ಜೊತೆ ಉದ್ಯೋಗಖಾತ್ರಿ ಯೋಜನೆಯ ಅನುಷ್ಠಾನದ ಪರಿಶೀಲನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ವಡ್ಡರಹಟ್ಟಿ ಕ್ಯಾಂಪ್ ಬಳಿಯ ಅರಣ್ಯ ಇಲಾಖೆ ನರ್ಸರಿಯಲ್ಲಿ ಗಿಡಗಳಿಗೆ ನೀರು ಹಾಕುತ್ತಿದ್ದ ಮೌಲಾಹುಸೇನ್ನನ್ನು ಗುರುತಿಸಿದ್ದರು.[ಫಾತಿಮಾ ಎಂಬ ಮುಗ್ಧ ಬಾಲಕಿಯ ಹೃದಯ ಹಿಂಡುವ ಕಥೆ!]
ಹುಸೇನ್ ಜೊತೆ ಮಾತನಾಡಿದಾಗ 5ನೇ ತರಗತಿ ನಂತರ ಶಾಲೆ ಬಿಟ್ಟು, ತಂದೆಯೊಂದಿಗೆ ಕೂಲಿ ಕೆಲಸ ಮಾಡುತ್ತಿರುವ ವಿಷಯ ತಿಳಿಯಿತು. ಮೌಲಾಹುಸೇನ್ 1 ಮತ್ತು 2ನೇ ತರಗತಿಯನ್ನು ಮುನಿರಾಬಾದಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ, 3 ರಿಂದ 5 ನೇ ತರಗತಿ ವರೆಗಿನ ಶಿಕ್ಷಣವನ್ನು ಗಂಗಾವತಿ ತಾಲೂಕಿನ ಬಂಡ್ರಾಳ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ.[ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಏನು ಮಾಡಬಹುದು?]

ನಂತರ ಆತನನ್ನು ಗಂಗಾವತಿಯ ಮದರಸಾಕ್ಕೆ ಸೇರಿಸಲಾಗಿತ್ತು. ಮದರಸಾದಲ್ಲಿನ ವಿದ್ಯಾರ್ಥಿಗಳೂ ಕೂಡ ಶಾಲಾ ಶಿಕ್ಷಣಕ್ಕೆ ದಾಖಲಿಸುವುದು ವಾಡಿಕೆ. ಆದರೆ, ಹುಸೇನ್ ಶಾಲಾ ದಾಖಲಾತಿಯಿಂದ ವಂಚಿತನಾಗಿ, ಸುಮಾರು 4 ವರ್ಷಗಳಿಂದ ಶಾಲೆಯಿಂದ ದೂರವಾಗಿದ್ದ.
ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ರಾಮಚಂದ್ರನ್ ಅವರು, ಶಿಕ್ಷಣದ ಮಹತ್ವ ಹಾಗೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಮುಂದುವರಿಸುವುದು ಸೂಕ್ತ ಎಂಬುದರ ಬಗ್ಗೆ ಅದೇ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ ಆತನ ತಂದೆಯ ಮನವೊಲಿಸಿದ್ದಾರೆ.
ಮೌಲಾಹುಸೇನ್ಗೆ ಕೆಲವು ಸಲಹೆಗಳನ್ನು ನೀಡಿ ಶಾಲೆಗೆ ಹೋಗಲು ಪ್ರೇರೆಪಿಸಿದ್ದಾರೆ. ಆತನೂ ಶಾಲೆಗೆ ಹೋಗಲು ಒಪ್ಪಿದ್ದಾನೆ. ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ಜೊತೆ ಮಾತನಾಡಿ, ಖುದ್ದಾಗಿ ಗಂಗಾವತಿಯ ಇಸ್ಲಾಂಪುರದ ಉರ್ದು ಶಾಲೆಗೆ ಕರೆದುಕೊಂಡು ಹೋಗಿ ದಾಖಲಾತಿ ಮಾಡಿಸಿದ್ದಾರೆ.
4 ವರ್ಷದಿಂದ ಶಾಲೆಯಿಂದ ದೂರವಾಗಿದ್ದ ಹುಸೇನ್ಗೆ ಒಂದು ವರ್ಷ ಅವಧಿಯ ಬ್ರಿಡ್ಜ್ ಕೋರ್ಸ್ ಸೇತುಬಂಧದ ಮೂಲಕ ಸಾಮಾನ್ಯ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟಕ್ಕೆ ತಕ್ಕಂತೆ, ಆ ಬಾಲಕನನ್ನು ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ಕೊಟ್ಟಿದ್ದಾರೆ.
ಕೂಲಿ ಕೆಲಸದಲ್ಲಿ ತನ್ನ ಭವಿಷ್ಯವನ್ನು ಕಂಡುಕೊಳ್ಳಲು ಹೊರಟಿದ್ದ ಬಾಲಕನನ್ನು ಮರಳಿ ಶಾಲೆಗೆ ದಾಖಲಿಸುವ ಮೂಲಕ ಬಾಲಕ ತನ್ನ ಭವ್ಯ ಭವಿಷ್ಯವನ್ನು ಶಿಕ್ಷಣದ ಮೂಲಕ ರೂಪಿಸಿಕೊಳ್ಳಲು ಸಿಇಓ ರಾಮಚಂದ್ರನ್ ಅವರು ನೆರವು ನೀಡಿದ್ದಾರೆ. [ಮಾಹಿತಿ : ಕೊಪ್ಪಳ ವಾರ್ತೆ]
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications