ಪರಿಷತ್ ವಿಪಕ್ಷ ನಾಯಕರಾಗಿ ಶ್ರೀನಿವಾಸ ಪೂಜಾರಿ ಆಯ್ಕೆ
ಬೆಂಗಳೂರು, ಜುಲೈ 02 : ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಆಯ್ಕೆಯಾದರು. ಕೆ.ಎಸ್.ಈಶ್ವರಪ್ಪ ಅವರು ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಪರಿಷತ್ ವಿಪಕ್ಷ ನಾಯಕರ ಸ್ಥಾನ ತೆರವಾಗಿತ್ತು.
ಸೋಮವಾರ ರಾಜ್ಯಪಾಲರ ಭಾಷಣದ ಬಳಿಕ ವಿಧಾನಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೋಟಾ ಶ್ರೀನಿವಾಸ ಪೂಜಾರಿ ಅವರು ಪರಿಷತ್ ವಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಚಿವರಾಗಿದ್ದರು. ಆಯನೂರು ಮಂಜುನಾಥ್ ಸೇರಿದಂತೆ ಹಲವು ನಾಯಕರ ಹೆಸರು ಪ್ರತಿಪಕ್ಷ ನಾಯಕರ ಸ್ಥಾನಕ್ಕೆ ಕೇಳಿಬಂದಿತ್ತು.
ಜೂನ್ 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪರಿಷತ್ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲು ಒಪ್ಪಿಗೆ ನೀಡಲಾಗಿತ್ತು.

ಹಲವು ನಾಯಕರ ಹೆಸರು ಕೇಳಿಬಂದಿತ್ತು
ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಲು ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆದಿತ್ತು. ಆಯನೂರು ಮಂಜುನಾಥ್, ವೈ.ಎ.ನಾರಾಯಣಸ್ವಾಮಿ, ಕೋಟಾ ಶ್ರೀನಿವಾಸ ಪೂಜಾರಿ, ರಘುನಾಥ ಮಲ್ಕಾಪುರೆ ಅವರ ಹೆಸರು ಕೇಳಿ ಬಂದಿತ್ತು.
ಜೂನ್ 29ರಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆ, ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಇಂದು ಪರಿಷತ್ತಿನಲ್ಲಿ ಅಧಿಕೃತವಾಗಿ ಶ್ರೀನಿವಾಸ ಪೂಜಾರಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಕೆಲಸ ನಿರ್ವಹಿಸುವೆ
ಜೂನ್ 29ರಂದು ಕೋಟಾ ಶ್ರೀನಿವಾಸ ಪೂಜಾರಿ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಪ್ರತಿಪಕ್ಷ ನಾಯಕನ ಸ್ಥಾನ ನೀಡಿದರೆ ಸಮರ್ಥವಾಗಿ ನಿರ್ವಹಿಸುವೆ ಎಂದು ಹೇಳಿದ್ದರು.
ಸೋಮವಾರ ವಿಧಾನಮಂಡಲ ಜಂಟಿ ಅಧಿವೇಶನದ ಬಳಿಕ ಪರಿಷತ್ ಕಲಾಪ ಆರಂಭವಾಯಿತು. ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಪ್ರತಿಪಕ್ಷ ನಾಯಕನಾಗಿ ಘೋಷಣೆ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಸ್ಥಾನ
ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಮೂರನೇ ಬಾರಿಗೆ ಆಯ್ಕೆಯಾಗಿ ಬಂದಿದ್ದಾರೆ. ಪೂಜಾರಿ ಸಮುದಾಯಕ್ಕೆ ಸೇರಿದ ಅವರನ್ನು ಪ್ರತಿಪಕ್ಷ ನಾಯಕರಾಗಿ ಆಯ್ಕೆ ಮಾಡಲಾಗಿದೆ.
ದಕ್ಷಿಣ ಕನ್ನಡ ಬಿಜೆಪಿಯ ಭದ್ರಕೋಟೆ. ವಿಧಾನಪರಿಷತ್ ಪ್ರತಿಪಕ್ಷ ನಾಯಕರ ಸ್ಥಾನವನ್ನು ಜಿಲ್ಲೆಗೆ ನೀಡುವ ಮೂಲಕ ಬಿಜೆಪಿ ಜಿಲ್ಲೆಯಲ್ಲಿ ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

ಕೆ.ಎಸ್.ಈಶ್ವರಪ್ಪ ನಾಯಕರಾಗಿದ್ದರು
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ವಿಧಾನಪರಿಷತ್ತಿನಲ್ಲಿ ಪ್ರತಿಪಕ್ಷ ನಾಯಕರಾಗಿದ್ದರು. ಆದರೆ, ಅವರು ಕರ್ನಾಟಕ ವಿಧಾನಸಭೆ ಚುನಾವಣೆ 2018ರಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ ಬಳಿಕ ಅವರ ಪರಿಷತ್ ಸದಸ್ಯತ್ವ ಸ್ಥಾನ ರದ್ದಾಗಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications