ಕೊಟ್ಟೂರು ಜಾತ್ರೆ: ಫೆ. 15 ರಿಂದ 20 ರ ವರೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು- ಮಾರ್ಗ, ನಿಲುಗಡೆ, ರೈಲು ಸಂಖ್ಯೆ, ಮಾಹಿತಿ
ಫೆ. 15ರಂದು (ನಾಳೆ) ನಡೆಯಲಿರುವ ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಕೊಟ್ಟೂರು ಗುರುಬಸವೇಶ್ವರ ರಥೋತ್ಸವ ಅಂಗವಾಗಿ ಹುಬ್ಬಳ್ಳಿಯಿಂದ ದಾವಣಗೆರೆ– ಹೊಸಪೇಟೆ ಮಾರ್ಗದಲ್ಲಿ ಫೆ. 15ರಿಂದ 20ರ ವರೆಗೆ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ. ಮಾಹಿತಿ
ಹುಬ್ಬಳ್ಳಿ, ಫೆಬ್ರವರಿ 14: ಫೆ. 15ರಂದು (ನಾಳೆ) ನಡೆಯಲಿರುವ ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಕೊಟ್ಟೂರು ಗುರುಬಸವೇಶ್ವರ ರಥೋತ್ಸವ ಅಂಗವಾಗಿ ಹುಬ್ಬಳ್ಳಿಯಿಂದ ದಾವಣಗೆರೆ- ಹೊಸಪೇಟೆ ಮಾರ್ಗದಲ್ಲಿ ಫೆ. 15ರಿಂದ 20ರ ವರೆಗೆ ವಿಶೇಷ ರೈಲು ಸೌಲಭ್ಯ ಕಲ್ಪಿಸಲಾಗಿದೆ. ಐತಿಹಾಸಿಕ ಕೊಟ್ಟೂರು ಜಾತ್ರೆ ಅಂಗವಾಗಿ ವಿಶೇಷ ರೈಲು ಸೌಲಭ್ಯ ಕಲ್ಪಿಸುವಂತೆ ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿರುವ ನೈರುತ್ಯ ರೈಲ್ವೆ ಇಲಾಖೆಯು ಹುಬ್ಬಳ್ಳಿಯಿಂದ ಹೊಸಪೇಟೆಗೆ ರೈಲು ಬಿಡುವುದಾಗಿ ಘೋಷಿಸಿದೆ. ಈ ಕುರಿತು ಟ್ವೀಟ್ ಮಾಡಿದೆ.
ವಿಶೇಷ ಪ್ಯಾಸೆಂಜರ್ ರೈಲು (ಸಂಖ್ಯೆ 07339/07340) ಹುಬ್ಬಳ್ಳಿ- ದಾವಣಗೆರೆ-ಹೊಸಪೇಟೆ-ಹುಬ್ಬಳ್ಳಿ ಮಾರ್ಗದಲ್ಲಿ ಸಂಚರಿಸಲಿವೆ. ರೈಲು ಸಂಖ್ಯೆ - 07339 ಹುಬ್ಬಳ್ಳಿಯಿಂದ ಬೆಳಿಗ್ಗೆ 6:15ಕ್ಕೆ ಹೊರಟು, ಹೊಸಪೇಟೆಗೆ ಮದ್ಯಾಹ್ನ 1:45ಕ್ಕೆ ತಲುಪಲಿದೆ. ರೈಲು ಸಂಖ್ಯೆ- 07340 ಹೊಸಪೇಟೆಯಿಂದ ಮದ್ಯಾಹ್ನ 3 ಗಂಟೆಗೆ ಹೊರಟು ಹುಬ್ಬಳ್ಳಿಯನ್ನು ರಾತ್ರಿ 10:50ಕ್ಕೆ ತಲುಪಲಿದೆ.
Running of Unreserved Express Special train between SSS #Hubballi & #Hosapete via #Davangere from 15th to 20th February for the convenience of devotees attending #Kotturu Jaatre: pic.twitter.com/IKyve6BejZ
— DRM Hubballi (@drmubl) February 13, 2023
ಯಳವಗಿ, ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ತೊಳಹುಣಸಿ, ಅಮರಾವತಿ ಕಾಲೋನಿ, ತೆಲಗಿ, ಹಾರಣಹಳ್ಳಿ, ಬೆನೆಹಳ್ಳಿ, ಕೊಟ್ಟುರು, ಮಾನವಿ, ಹಗರಿಬೊಮ್ಮನಹಳ್ಳಿ, ಹಂಪಾಪಟ್ಟಣಂ, ಮರಿಯಮ್ಮನಹಳ್ಳಿ, ವ್ಯಾಸ ಕಾಲೋನಿ, ತುಂಗಭದ್ರಾ ಡ್ಯಾಮ್ ರೈಲು ನಿಲ್ದಾಣಗಳಲ್ಲಿ ಈ ರೈಲು ನಿಲ್ಲಲಿದೆ. ಈ ರೈಲು ಒಂಬತ್ತು ಜನರಲ್ ಕ್ಲಾಸ್ ಕೋಚ್ಗಳು ಹಾಗೂ ಎರಡು ಸೆಕೆಂಡ್ ಕ್ಲಾಸ್ ಕೋಚ್ಗಳನ್ನು ಹೊಂದಿರುತ್ತದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕು ಕೇಂದ್ರವಾಗಿದೆ. ಇದು 15 ನೇ ಶತಮಾನದ ಶೈವ ಸಂತ ಗುರು ಕೊಟ್ಟೂರೇಶ್ವರ ಅವರ ವಾಸಸ್ಥಳವಾಗಿತ್ತು. ಪ್ರತಿ ವರ್ಷ, ಫೆಬ್ರವರಿಯಲ್ಲಿ ನಡೆಯುವ ರಥೋತ್ಸವಕ್ಕೆ 200,000 ಕ್ಕೂ ಹೆಚ್ಚು ಜನರು ಸೇರುತ್ತಾರೆ.

ಐತಿಹಾಸಿಕವಾಗಿ, ಕೊಟ್ಟೂರು ತನ್ನ ಹತ್ತಿ ಜಿನ್ ಉದ್ಯಮಕ್ಕೆ ಮತ್ತು ಹೊಸಪೇಟೆಯಿಂದ ರೈಲು ಮಾರ್ಗದ ಟರ್ಮಿನಸ್ಗೆ ಹೆಸರುವಾಸಿಯಾಗಿದೆ. 2019 ರಲ್ಲಿ, ಆ ರೈಲು ಮಾರ್ಗವನ್ನು ಹರಿಹರಕ್ಕೆ ವಿಸ್ತರಿಸಲಾಯಿತು ಮತ್ತು ಮೀಟರ್ ಗೇಜ್ಗೆ ನವೀಕರಿಸಲಾಯಿತು.

ಪ್ರಸ್ತುತ, ಕೊಟ್ಟೂರು ಮೂಲಕ ಒಂದೇ ಎಕ್ಸ್ಪ್ರೆಸ್ ರೈಲು ಇದೆ, ಇದು ಹೊಸಪೇಟೆಯಿಂದ ದಾವಣಗೆರೆಗೆ ಸಂಪರ್ಕ ಕಲ್ಪಿಸುತ್ತದೆ. ಈ ವರ್ಷದ ಸೆಪ್ಟೆಂಬರ್ನಿಂದ ಪ್ರತಿ ರಾತ್ರಿ ವಿಜಯಪುರದಿಂದ ಕೊಟ್ಟೂರು ಮಾರ್ಗವಾಗಿ ಯಶವಂತಪುರಕ್ಕೆ ಹೊಸ ರೈಲು ಆರಂಭವಾಗಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications