ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತೃಪ್ತರಿಗೆ ಮೂಗುದಾರ, ಶಾಸಕರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್‌

|
Google Oneindia Kannada News

ಬೆಂಗಳೂರು, ಫೆಬ್ರವರಿ 05: ಬಜೆಟ್ ಅಧಿವೇಶನಕ್ಕೆ ಆರು ಮಂದಿ ಕಾಂಗ್ರೆಸ್‌ ಶಾಸಕರು ಗೈರಾಗುವಂತೆ ಮಾಡಲು ಬಿಜೆಪಿ ಯತ್ನ ನಡೆಸುತ್ತಿದೆ ಎಂದು ಗೊತ್ತಾದ ಕೂಡಲೇ ಎದುರು ತಂತ್ರ ಹೂಡಿರುವ ಕಾಂಗ್ರೆಸ್‌ ತನ್ನ ಶಾಸಕರಿಗೆ ವಿಪ್ ಹೊರಡಿಸಿದೆ.

ಕಾಂಗ್ರೆಸ್‌ನ ಎಲ್ಲ ಶಾಸಕರು ಕಡ್ಡಾಯವಾಗಿ ಬಜೆಟ್ ಅಧಿವೇಶನಕ್ಕೆ ಹಾಜರಾಗಬೇಕು ಎಂದು ವಿಪ್‌ ನೀಡಲಾಗಿದೆ. ವಿಪ್ ಜಾರಿ ಆಗಿರುವ ಕಾರಣ ಶಾಸಕರು ಭಯದಿಂದಾದರೂ ಅಧಿವೇಶನಕ್ಕೆ ಹಾಜರಾಗುತ್ತಾರೆಂಬುದು ಕಾಂಗ್ರೆಸ್ ನಂಬಿಕೆ.

ಅಧಿವೇಶನಕ್ಕೆ ಆರು 'ಕೈ' ಶಾಸಕರು ಗೈರು? ಬಿಜೆಪಿಯ ಭಾರಿ ರಣತಂತ್ರ ಅಧಿವೇಶನಕ್ಕೆ ಆರು 'ಕೈ' ಶಾಸಕರು ಗೈರು? ಬಿಜೆಪಿಯ ಭಾರಿ ರಣತಂತ್ರ

ಫೆಬ್ರವರಿ 6 ರಂದು ಅಧಿವೇಶನ ಆರಂಭದಿಂದ ಅಧಿವೇಶನ ಅಂತ್ಯವಾಗುವವರೆಗೂ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕೆಪಿಸಿಸಿಯ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ಅವರು ಕಾಂಗ್ರೆಸ್‌ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದ್ದಾರೆ.

KPCC issued whip to its MLAs to attend budget session

ಫೆಬ್ರವರಿ 8ಕ್ಕೆ ರಾಜ್ಯ ಬಜೆಟ್‌: ನಿರೀಕ್ಷೆಗಳೇನೇನು?ಫೆಬ್ರವರಿ 8ಕ್ಕೆ ರಾಜ್ಯ ಬಜೆಟ್‌: ನಿರೀಕ್ಷೆಗಳೇನೇನು?

ಬಿಜೆಪಿಯು ಕಾಂಗ್ರೆಸ್ ಶಾಸಕರನ್ನು ಗೈರಾಗಿಸಿ ಬಜೆಟ್‌ಗೆ ಅನುಮೋದನೆ ದೊರಕದಂತೆ ಮಾಡಿ, ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಜ್ಜಾಗಿದೆ ಹಾಗಾಗಿಯೇ ಕಾಂಗ್ರೆಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿ ಪ್ರತಿತಂತ್ರವನ್ನು ಪ್ರಯೋಗಿಸಿದೆ.

ರೈತರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಕೊಡಲಿದೆ ಕುಮಾರಸ್ವಾಮಿ ಬಜೆಟ್ರೈತರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಕೊಡಲಿದೆ ಕುಮಾರಸ್ವಾಮಿ ಬಜೆಟ್

ವಿಪ್ ಉಲ್ಲಂಘಿಸಿದರೆ ಪಕ್ಷದಿಂದ ಉಚ್ಛಾಟನೆ ಜೊತೆಗೆ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಭೀತಿಯಿರುವ ಕಾರಣದಿಂದಾದರೂ ಅತೃಪ್ತ ಶಾಸಕರು ಕಾಂಗ್ರೆಸ್‌ ನ ಹಿಡಿತಕ್ಕೆ ಬರುತ್ತಾರೆಂದು ಕೆಪಿಸಿಸಿ ಯೋಚಿಸಿದೆ.

English summary
KPCC issued whip to all its MLAs including dissidents to attend the budget session. BJP trying to rise no-confidence motion against the coalition government so Congress uses whip plan to prevent its MLAs to join hands with BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X