DK Shivakumar: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ವಿರೋಧಿಗಳಿಗೆ ಖಡಕ್ ಉತ್ತರ ನೀಡಿದ ಡಿ. ಕೆ. ಶಿವಕುಮಾರ್
ಬೆಂಗಳೂರು, ಜನವರಿ 16: ರಾಜ್ಯ ರಾಜಕೀಯದಲ್ಲಿ ಕೆಪಿಸಿಸಿ ಹುದ್ದೆ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದು, ಹೊಸ ಅಧ್ಯಕ್ಷರ ನೇಮಕ ಮಾಡಿ ಎಂದು ಕೈ ನಾಯಕರು ಹೈಕಮಾಂಡ್ ಗೆ ಬೇಡಿಕೆ ಇಟ್ಟ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರೋಧಿಗಳಿಗೆ ಖಡಕ್ ಉತ್ತರವನ್ನ ನೀಡಿದ್ದಾರೆ.
ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಕೆಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ ಎಂದರು.

ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.
ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕು ಎಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ" ಎಂದು ಕೇಳಿದರು.
ಈ ಪಕ್ಷವನ್ನು ಕೇವಲ ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ.
ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಸಧ್ಯಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯಲ್ಲಿದ್ದು, ಇದರ ಪರಿಶೀಲನೆಗೆ ಸುರ್ಜೆವಾಲ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ ಎಂದು ತಿಳಿಸಿದರು.
ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿ ಡಿ ಕೆ ಶಿವಕುಮಾರ್, ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು. ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು ಎಂದು ತಿಳಿಸಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications