ತಡರಾತ್ರಿವರೆಗೂ ನಡೆದ ಒಕ್ಕಲಿಗ ನಾಯಕರ ಸಭೆಯಲ್ಲಿ ಕಣ್ಣೀರಿಟ್ಟ ಡಿಕೆಶಿ?
ಚುನಾವಣಾ ಹೊಸ್ತಿಲಲ್ಲಿ ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಇದೆ ಎನ್ನಲಾಗುತ್ತಿರುವ ಬಣ ರಾಜಕೀಯ ಹೈಕಮಾಂಡಿಗೆ ತಲೆನೋವಾಗಿ ಪರಿಣಮಿಸುತ್ತಿದೆ. ಇತ್ತೀಚೆಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರನ್ನು ಕರೆಸಿ ಮಾತನಾಡಿದ್ದರು.
ಇದರಿಂದಾಗಿ, ಬೇರೆಬೇರೆಯಾಗಿ ಸಾಗಬೇಕಿದ್ದ ಇಬ್ಬರ ಯಾತ್ರೆಗಳಿಗೆ ಬ್ರೇಕ್ ಹಾಕಿರುವ ಹೈಕಮಾಂಡ್ ಜೊತೆಯಾಗಿ ರಾಜ್ಯ ಪ್ರವಾಸ ಮಾಡಿ ಎಂದು ಫರ್ಮಾನು ಹೊರಡಿಸಿದ್ದು ಗೊತ್ತೇ ಇದೆ. ಆದರೂ, ಇಬ್ಬರೂ ತಮ್ಮ ಸಮುದಾಯದ ನಾಯಕರ ಪ್ರತ್ಯೇಕ ಸಭೆ ನಡೆಯುವುದು ಮಾತ್ರ ನಿಂತಿಲ್ಲ.
ಎರಡು ದಿನಗಳ ಕೆಳಗೆ ಅಂದರೆ ಗುರುವಾರ (ಡಿ 15) ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕೆಪಿಸಿಸಿ ಅಧ್ಯಕ್ಷರು ತಮ್ಮ ಸಮುದಾಯದ ಪ್ರಮುಖ ನಾಯಕರ ಜೊತೆಗೆ ತಡರಾತ್ರಿ ಸಭೆ ನಡೆಸಿದ್ದರು ಎನ್ನುವುದು ಗೌಪ್ಯವಾಗಿ ಏನೂ ಉಳಿದಿಲ್ಲ.
ಈ ವೇಳೆ, ಡಿಕೆಶಿ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟರು ಎಂದು ಕೆಲವೊಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಜೊತೆಗೆ, ತಮ್ಮ ಸಂಪೂರ್ಣ ಸಹಕಾರದ ಭರವಸೆಯನ್ನು ನಾಯಕರು ಈ ವೇಳೆ ಡಿಕೆಶಿಗೆ ನೀಡಿದರು ಎಂದು ವರದಿಯಾಗಿದೆ.

ದೇವೇಗೌಡ್ರನ್ನು ಎಂದಿನಂತೆ ಆತ್ಮೀಯತೆಯಿಂದ ಮಾತನಾಡಿಸಿದ ಮೋದಿ
ಎಚ್.ಡಿ.ಕುಮಾರಸ್ವಾಮಿಯವರ ಪಂಚರತ್ನ ಯಾತ್ರೆಗೆ ಸಿಗುತ್ತಿರುವ ಜನಬೆಂಬಲ, ಇತ್ತೀಚೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ್ರು, ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದು, ನಂತರ, ಪ್ರಧಾನಿ ಬಳಿ ಕುಂಚಟಿಗ ಒಕ್ಕಲಿಗ ಸಮುದಾಯಕ್ಕೆ ಒಬಿಸಿ ಮೀಸಲಾತಿ ವಿಚಾರದಲ್ಲಿ ಮನವಿ ಸಲ್ಲಿಸಿದ್ದು ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಎಂದು ಹೇಳಲಾಗುತ್ತಿದೆ. ದೇವೇಗೌಡ್ರನ್ನು ಎಂದಿನಂತೆ ಆತ್ಮೀಯತೆಯಿಂದ ಮೋದಿ ಮಾತನಾಡಿಸಿದ ಹಿಂದೆ ಏನಾದರೂ ರಾಜಕೀಯ ಅಡಗಿದೆಯೇ ಎನ್ನುವುದೂ ಕಾಂಗ್ರೆಸ್ ನಾಯಕರ ಗೊಂದಲಕ್ಕೆ ಕಾರಣವಾಗಿದೆ.

ಒಕ್ಕಲಿಗ ಸಮುದಾಯದ ಮತ ಕೈತಪ್ಪದಂತೆ ನೋಡಿಕೊಳ್ಳಬೇಕು
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಒಕ್ಕಲಿಗ ಸಮುದಾಯದ ಮತ ಕೈತಪ್ಪದಂತೆ ನೋಡಿಕೊಳ್ಳಲು ಡಿ.ಕೆ.ಶಿವಕುಮಾರ್ ಸಭೆ ಕರೆದಿದ್ದರು ಎಂದು ಹೇಳಲಾಗುತ್ತಿದೆ. ಆ ವೇಳೆ, ಸದ್ಯದಲ್ಲೇ ಎರಡು ತಂಡವಾಗಿ ಪ್ರವಾಸಕ್ಕೆ ಹೋಗಲು ಸಮುದಾಯದ ನಾಯಕರಿಗೆ ಡಿಕೆಶಿ ಫರ್ಮಾನು ಹೊರಡಿಸಿದ್ದಾರೆ. ಜೊತೆಗೆ, ತನಗಾಗುತ್ತಿರುವ ಕಿರುಕುಳದ ಬಗ್ಗೆ ಡಿಕೆಶಿ ಸಭೆಯಲ್ಲಿ ನೋವು ತೋಡಿಕೊಂಡರು ಎನ್ನುವ ಸುದ್ದಿ ಹರಿದಾಡುತ್ತಿದೆ.

ಕೇಂದ್ರೀಯ ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ, ಐಟಿ ಇಲಾಖೆ
ಕೇಂದ್ರೀಯ ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ, ಐಟಿ ಇಲಾಖೆಯಿಂದ ಆಗುತ್ತಿರುವ ವಿಚಾರಣೆಯ ಬಗ್ಗೆ ಡಿ.ಕೆ.ಶಿವಕುಮಾರ್ ಮಾತನಾಡುತ್ತಾ ಕಣ್ಣೀರಿಟ್ಟರು ಎಂದು ಹೇಳಲಾಗುತ್ತಿದೆ. ನಾನಾಗಿರುವುದರಿಂದ ಇದನ್ನೆಲ್ಲಾ ಸಹಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಬೇರೆ ಯಾರಿಗಾದರೂ ಈ ಕಿರುಕುಳವನ್ನು ತಡೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಡಿಕೆಶಿಯವರು, ಸಮುದಾಯದ ನಾಯಕರ ಜೊತೆ ನೋವನ್ನು ತೋಡಿಕೊಂಡಿದ್ದಾರೆ.

ಚುನಾವಣಾ ವರ್ಷವಾಗಿರುವುದರಿಂದ ಮಾನಸಿಕವಾಗಿ ಸಧೃಡರಾಗಿರಬೇಕು
ಧೈರ್ಯವಾಗಿ ಎಲ್ಲವನ್ನೂ ಎದುರಿಸಿದ್ದೀರಿ, ಈಗ ಚುನಾವಣಾ ವರ್ಷವಾಗಿರುವುದರಿಂದ ನೀವು ಇನ್ನಷ್ಟು ಮಾನಸಿಕವಾಗಿ ಸಧೃಡರಾಗಿರಬೇಕು. ನಿಮಗೆ ನಮ್ಮೆಲ್ಲರ ಬೆಂಬಲವಿದೆ, ನಿಮ್ಮ ಹಿಂದೆ ನಾವಿರುತ್ತೇವೆ ಎನ್ನುವ ಮಾತನ್ನು ಒಕ್ಕಲಿಗ ಸಮುದಾಯದ ನಾಯಕರು ಆಡಿದರು. ಜೊತೆಗೆ, ದೇವೇಗೌಡ್ರ ಕುಟುಂಬದ ಜೊತೆಗೆ ಹಿಂದೆ ಯಾವರೀತಿ ಆಕ್ರಮಣಕಾರಿಯಾಗಿ ಇದ್ದೀರೋ, ಅದೇ ರೀತಿ ಇರಿ ಎನ್ನುವ ಸಲಹೆಯೂ ಸಭೆಯಲ್ಲಿ ಒಕ್ಕಲಿಗ ಸಮುದಾಯದ ನಾಯಕರು ನೀಡಿದರು ಎಂದು ವರದಿಯಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications