ಸಂವಿಧಾನದಲ್ಲಿ ಏನಿದೆ ಅಂತಾ ಮೊದಲು ಸಚಿವ ಕೆ.ಎಸ್. ಈಶ್ವರಪ್ಪ ಓದಲಿ !
ಬೆಂಗಳೂರು, ನ. 30: ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ನಾವು ಮುಸಲ್ಮಾನರಿಗೆ ಟಿಕೆಟ್ ನೀಡುವುದಿಲ್ಲ ಎಂದಿರುವ ಕೆ.ಎಸ್. ಈಶ್ವರಪ್ಪ ಅವರು, ಸಂವಿಧಾನ ಓದಬೇಕು. ಅದರಲ್ಲಿರುವ ಆಶಯ ಏನು ಎಂದು ತಿಳಿದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ.
ಬೆಂಗಳೂರು ಹೊರ ವಲಯದಲ್ಲಿ ನಡೆದ ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಸಿದ್ಧಾಂತವೇ ಅದು. ಅವರಿಗೆ ಸಂವಿಧಾನದ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ಗೌರವವೂ ಇಲ್ಲ. ಅವರು ಸಂವಿಧಾನ ಸುಡಬೇಕು ಅಂತಲೇ ಕಾಯುತ್ತಿದ್ದಾರೆ. ಈಶ್ವರಪ್ಪ ಅವರಿಂದ ಸಂವಿಧಾನವನ್ನು ಓದಿಸಿ. ಅವರಿಗೆ ಅದರ ಆಶಯಗಳು ಅರ್ಥವಾಗಲಿ. ಬಿಜೆಪಿಯವರು ತಮ್ಮ ಪಕ್ಷದಲ್ಲಿರುವ ಅಲ್ಪಸಂಖ್ಯಾತರ ಘಟಕವನ್ನು ವಿಸರ್ಜಿಸುವುದು ಉತ್ತಮ ಎಂದು ಟೀಕಿಸಿದರು.

ಜನರಿಗೆ ಅಧಿಕಾರ ಕೊಡಬೇಕು
ಗ್ರಾಮ ಪಂಚಾಯ್ತಿ ಚುನಾವಣೆ ನಡೆಯಬೇಕು ಎಂದು ನಾವು ನ್ಯಾಯಾಲಯದ ಮೆಟ್ಟಿಲೇರಿದ್ದೆವು. ನಮ್ಮ ನಿರೀಕ್ಷೆಯಂತೆ ಈಗ ಚುನಾವಣೆ ಘೋಷಣೆಯಾಗಿದೆ. ಜನರಿಗೆ ಅಧಿಕಾರ ಸಿಗಬೇಕು ಎಂಬುದು ನಮ್ಮ ಉದ್ದೇಶ. ಇದು ಪಕ್ಷಾತೀತವಾಗಿ ನಡೆಯುವ ಚುನಾವಣೆ ಇದು. ಈ ಚುನಾವಣೆ ನಡೆಯಬೇಕು ಎಂಬುದು ನಮ್ಮ ಚಿಂತನೆ. ಬೆಂಗಳೂರು ಪಾಲಿಕೆ ಚುನಾವಣೆಯೂ ನಡೆಯಬೇಕು ಎಂಬುದು ನಮ್ಮ ಬಯಕೆ.
ಈಗಾಗಲೇ ಅವರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆದಿವೆ. ಹೀಗಾಗಿ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸುವುದರಲ್ಲಿ ಅಭ್ಯಂತರವಿಲ್ಲ. ಕೋವಿಡ್ ನಿಯಮ ಪಾಲನೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸರ್ಕಾರ ಹಾಗೂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಸಮೂಹ ನಾಯಕತ್ವ
ರಾಜ್ಯದ ಸಮಸ್ಯೆ ಹಾಗೂ ಸರ್ಕಾರದ ಕೆಲವು ನಿರ್ಣಯಗಳನ್ನು ನಾವು ಗಮನಿಸಿದ್ದೇವೆ. ಈ ವಿಚಾರವಾಗಿ ನಾನೊಬ್ಬ ತೀರ್ಮಾನ ಮಾಡುವುದಿಲ್ಲ. ಎಲ್ಲ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳಲಾಗುವುದು. ನಾನು ಸಾಮೂಹಿಕ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದ್ದು, ಇಂದು ಹಿರಿಯ ನಾಯಕರೆಲ್ಲ ಸೇರಿ ಚರ್ಚಿಸಿ, ಅವರ ಸಲಹೆ ಪಡೆಯುತ್ತೇನೆ.

ತನಿಖೆ ಆದಲ್ಲಿ ಸತ್ಯಾಂಶ ಹೊರಗೆ
ಸಂತೋಷ್ ಅವರು ಈಗ ಯಾವ ಹೇಳಿಕೆ ಬೇಕಾದರೂ ನೀಡಲಿ. ತಮ್ಮ ಆಂತರಿಕ ವಿಚಾರ ಮುಚ್ಚಿಕೊಳ್ಳಲು ಏನಾದರೂ ಹೇಳಲಿ. ರಾಜಕೀಯ ಕಾರಣಕ್ಕಾಗಿ ಅವರಿಂದ ಈ ಹೇಳಿಕೆ ಕೊಡಿಸಲಾಗಿದೆ. ಸಂತೋಷ ಅವರು ಯಾಕೆ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂಬುದರ ಬಗ್ಗೆಯೇ ಅವರ ಧರ್ಮಪತ್ನಿ ಶಂಕೆ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕಾದರೂ ತನಿಖೆ ನಡೆಯಬೇಕೋ ಬೇಡವೋ? ಅವರು ಯಾವುದೋ ಸಾಮಾನ್ಯ ಹುದ್ದೆಯಲ್ಲಿ ಇರುವವರಲ್ಲ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲಿದ್ದಾರೆ. ಹೀಗಾಗಿ ಇವರ ಆತ್ಮಹತ್ಯೆ ಯತ್ನ ತನಿಖೆ ಆಗಬೇಕು.'

ಸಿದ್ಧಾಂತದಲ್ಲಿ ರಾಜಿ ಇಲ್ಲ
ಚುನಾವಣೆಗಳ ಗೆಲುವು, ಸೋಲಿನ ಫಲಿತಾಂಶದ ಬಗ್ಗೆ ನಾವು ಆತಂಕ ಪಡುವುದಿಲ್ಲ. ಉಪಚುನಾವಣೆಗಳೇ ಬೇರೆ, ಪ್ರಮುಖ ಚುನಾವಣೆಗಳೇ ಬೇರೆ. ನಾವು ಭವಿಷ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ಉಪ ಚುನಾವಣೆ ಫಲಿತಾಂಶದಿಂದ ನಾವು ನಮ್ಮ ಪಕ್ಷದ ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ನಮಗೆ ನಮ್ಮ ಸಿದ್ಧಾಂತಗಳೇ ಮುಖ್ಯ. ಬಿಜೆಪಿಯ ಆಂತರಿಕ ವಿಚಾರವಾಗಿ ನಾವು ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications