ನಗರ, ಪಟ್ಟಣ ವಾಸಿಗಳು ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆ: ಡಿ.ಕೆ. ಶಿವಕುಮಾರ್
ಬೆಂಗಳೂರು, ಡಿ, 30: ರಾಜ್ಯದ ನಗರವಾಸಿಗಳು, ಪಟ್ಟಣವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಪರ ವಾಲುತ್ತಿದೆ ಎಂಬುದಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವೇ ಸ್ಪಷ್ಟ ನಿದರ್ಶನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ನಾನು ಅಧ್ಯಕ್ಷನಾದ ಮೇಲೆ ಮಾತ್ರ ಕಾಂಗ್ರೆಸ್ ಚುನಾವಣೆಗಳನ್ನು ಗೆಲ್ಲುತ್ತಿಲ್ಲ. ಕಾಂಗ್ರೆಸ್ ಪಕ್ಷ ಗೆಲ್ಲುವುದರ ಹಿಂದೆ ರಾಜ್ಯದ ಜನರ ಅಭಿಪ್ರಾಯ ಅಡಗಿದೆ ಎಂದು ಗುರುವಾರ ಅವರು ಪ್ರತಿಕ್ರಿಯೆ ನೀಡಿದರು.
ಸಾಮಾನ್ಯವಾಗಿ ಶಾಸಕರಿರುವ ಕಡೆ ಆಡಳಿತ ಪಕ್ಷಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಇರುತ್ತದೆ. ಬಿಜೆಪಿ ಆಡಳಿತ ಪಕ್ಷವಾಗಿದ್ದರೂ, ಬಿಜೆಪಿ ಶಾಸಕರಿದ್ದರೂ ಜನರು ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಂತಿದ್ದಾರೆ. ಇದು ರಾಜ್ಯದ ಜನರ ಭಾವನೆ ಯಾವ ರೀತಿ ಇದೆ ಎಂಬುದಕ್ಕೆ ಸಾಕ್ಷಿ. ಇನ್ನೂ ಫಲಿತಾಂಶ ಬರುವುದು ಬಾಕಿ ಇದೆ. ಪೂರ್ಣ ಫಲಿತಾಂಶ ಬಂದ ನಂತರ ಅಂಕಿ-ಅಂಶಗಳ ಸಮೇತ ಮಾತನಾಡುತ್ತೇನೆ ಎಂದು ಹೇಳಿದರು.

ಇದು ಮುಂಬರುವ ವಿಧಾನಸಭೆ ಚುನಾವಣೆ ದಿಕ್ಸೂಚಿಯೇ ಎಂಬ ಪ್ರಶ್ನೆಗೆ, 'ಮಾಧ್ಯಮಗಳೇ ಇದನ್ನು ವಿಮರ್ಶೆ ಮಾಡಲಿ. ಆಡಳಿತ ಪಕ್ಷವಿದ್ದರೂ, ಶಾಸಕರು, ಮಂತ್ರಿಗಳ ಕ್ಷೇತ್ರದಲ್ಲಿ ಏನೇನಾಗಿದೆ, ಜನ ಯಾವ ರೀತಿ ತೀರ್ಪು ನೀಡುತ್ತಿದ್ದಾರೆ ಎಂಬುದನ್ನು ನೋಡಿ. ಜನರ ತೀರ್ಪನ್ನು ನಿರ್ಲಕ್ಷಿಸಿ ಸಬೂಬು ಹೇಳಲು ಬಿಜೆಪಿಗೆ ಸಾಧ್ಯವಿಲ್ಲ. ಜನ ನಮ್ಮ ಮೇಲೆ ವಿಶ್ವಾಸ ಇಡುತ್ತಿದ್ದು, ಅವರ ನಿರೀಕ್ಷೆಯಂತೆ ನಡೆಯಬೇಕಾಗುತ್ತದೆ' ಎಂದು ಹೇಳಿದರು.
Koo Appಮೇಕೆದಾಟು ಪಾದಯಾತ್ರೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅಭಿಯಾನಕ್ಕೆ ಅಪಾರ ಜನಬೆಂಬಲ ವ್ಯಕ್ತವಾಗುತ್ತಿದೆ. ಪಾದಯಾತ್ರೆ ಪ್ರಾರಂಭವಾಗಲಿರುವ ಸ್ಥಳಕ್ಕೆ ಇಂದು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತನಾಡಿದೆ. ಈ ಅಭಿಯಾನಕ್ಕೆ ಬೆಂಬಲ ಸೂಚಿಸುವಂತೆ ಅವರನ್ನು ಕೋರಿದೆ. ನಿಮ್ಮ ಸಹಕಾರವೇ ನಮ್ಮ ಶಕ್ತಿ. -ಧನ್ಯವಾದಗಳು #NammaNeeruNammaHakku - D K Shivakumar (@dkshivakumar_official) 30 Dec 2021
ಮೇಕೆದಾಟು ಪಾದಯಾತ್ರೆ:
ಮೇಕೆದಾಟು ಪಾದಯಾತ್ರೆಗೆ ತಯಾರಿ ಮಾಡುತ್ತಿದ್ದು, ನಿತ್ಯ 1 ಗಂಟೆ ನಡೆಯುತ್ತಿದ್ದೇನೆ. ಕೆಲವರು ಟೋಪಿ ಹಾಕಿದರೆ ಹಾಕಿಸಿಕೊಳ್ಳೋಣ. ಈಗ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡುತ್ತಿದ್ದು, ಅಲ್ಲಿನವರನ್ನು ಆಹ್ವಾನಿಸಿದ್ದೇನೆ. ಎಲ್ಲ ಸಂಘಟನೆಗಳು, ಕಲಾವಿದರು, ಧಾರ್ಮಿಕ ಮುಖಂಡರು ವಿದ್ಯಾರ್ಥಿಗಳು, ಅಪಾರ್ಟ್ ಮೆಂಟ್ ನಿವಾಸಿಗಳು, ಎಲ್ಲ ವರ್ಗದವರನ್ನೂ ಆಹ್ವಾನಿಸುತ್ತಿದ್ದೇನೆ ಎಂದು ಹೇಳಿದರು
ಯಾರು ಯಾವ ತಂತ್ರಗಾರಿಕೆ ಮಾಡುತ್ತಿದ್ದಾರೆ, ಯಾರು ದೆಹಲಿಗೆ ಹೋಗಿ ಏನೆಲ್ಲಾ ಮಾಡುತ್ತಿದ್ದಾರೆ, ಏನೆಲ್ಲಾ ಒತ್ತಡ ಹಾಕುತ್ತಿದ್ದಾರೆ, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದಲ್ಲಿ ಏನೇನಾಗುತ್ತಿದೆ ಎಂದೆಲ್ಲಾ ನನಗೆ ಗೊತ್ತಿದೆ. ನಾನು ಮುಂಚೆ ಒಬ್ಬರ ವಿರುದ್ಧ ಹೋರಾಡಬೇಕಿತ್ತು. ಈಗ ಎರಡೂ ರಾಜಕೀಯ ಪಕ್ಷಗಳ ವಿರುದ್ಧ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಇರಲಿ ಮಾಡೋಣ ಎಂದು ಮಾರ್ಮಿಕವಾಗಿ ಹೇಳಿದರು.
Koo Appಕಾವೇರಿ ನೀರು ಎಂದಾಗ ಹೋರಾಟ ಎನ್ನುವ ಪದ ತಂತಾನೇ ನೆನಪಾಗುತ್ತದೆ. ಮೇಕೆದಾಟು ಪಾದಯಾತ್ರೆ ಕನ್ನಡಿಗರಿಂದ, ಕನ್ನಡಿಗರಿಗಾಗಿ, ಕನ್ನಡಿಗರಿಗೋಸ್ಕರ ನಡೆಯುತ್ತಿರುವ ಹೋರಾಟ. ತಾಯಿ ತಲಕಾವೇರಿಯ ಆಶೀರ್ವಾದ ಪಡೆದಾಗಿದೆ. ಹೋರಾಟಕ್ಕೆ ಮುನ್ನುಡಿ ಬರೆದಾಗಿದೆ. ಬನ್ನಿ ನಾಡಿನ ನೆಮ್ಮದಿಗಾಗಿ ನಮ್ಮೊಂದಿಗೆ ಹೆಜ್ಜೆ ಇಡಿ. #NammaNeeruNammaHakku - D K Shivakumar (@dkshivakumar_official) 29 Dec 2021
ಬಿಜೆಪಿ, ದಳದವರು ತಮ್ಮ ಅನುಕೂಲಕ್ಕಾಗಿ ಟ್ವೀಟ್ ಮಾಡುತ್ತಿದ್ದಾರೆ. ಯೋಜನೆಯ ಡಿಪಿಆರ್ ನ ದಿನಾಂಕ ಸಮೇತ ದಾಖಲೆಗಳನ್ನು ನೀಡುತ್ತೇನೆ. ನಾನು ಅವರ ರೀತಿ ಮಾತನಾಡುವುದಿಲ್ಲ. ನಾನು ಮಾತನಾಡಿದರೆ ದಾಖಲೆ ಸಮೇತ ಮಾತನಾಡುತ್ತೇನೆ. ಈ ಹೋರಾಟಕ್ಕೆ ಎಲ್ಲರಿಗೂ ಆಹ್ವಾನ ನೀಡುತ್ತೇನೆ. ಪಾದಯಾತ್ರೆ ವಿಚಾರವಾಗಿ ಇಂದು ಹೆಚ್ಚಾಗಿ ಚರ್ಚೆ ಬೇಡ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ' ಎಂದರು.

ಹಿಂದೂ ದೇವಾಲಯಗಳನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಯಿಂದ ಹೊರಗಿಟ್ಟು, ಸ್ಥಳೀಯರ ನಿಯಂತ್ರಣಕ್ಕೆ ನೀಡುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, 'ರಾಜ್ಯ ಸರ್ಕಾರ ಅತಿದೊಡ್ಡ ತಪ್ಪು ಮಾಡುತ್ತಿದೆ. ದೇವಾಲಯಗಳು ರಾಜ್ಯದ ಸಂಪತ್ತು. ಈ ದೇವಾಲಯಗಳಿಂದ ಸರಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯ ಸಂಗ್ರಹವಾಗುತ್ತದೆ. ಸರಕಾರದ ನಿಲುವು ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಹಿರಿಯ ನಾಯಕರ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರಕ್ಕೆ ಬರುತ್ತೇವೆ' ಎಂದು ಪ್ರತಿಕ್ರಿಯಿಸಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications