ಅಂದು ಎಸ್.ಎಂ.ಕೃಷ್ಣ, ಇಂದು ಡಿಕೆಶಿ: ರಾಜಕೀಯ ಗುರು ಸಾಗಿದ ದಾರಿಯಲ್ಲೇ ಹೊರಟ ಕೆಪಿಸಿಸಿ ಅಧ್ಯಕ್ಷರು
ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್ ಪಣತೊಟ್ಟು ನಿಂತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇರೆ ಬೇರೆ ದಾರಿಯಲ್ಲಿ ಸಾಗುತ್ತಿರುವುದನ್ನು ಅರಿತ ಹೈಕಮಾಂಡ್ ಜಂಟಿ ಪ್ರವಾಸ ಕೈಗೊಳ್ಳುವಂತೆ ಸೂಚಿಸಿದೆ.
ಮೈಸೂರು ಮೇಯರ್ ವಿಚಾರ ಪಕ್ಷದಲ್ಲಿ ಇಷ್ಟರಮಟ್ಟಿಗೆ ಪ್ರತಿರೋಧ ವ್ಯಕ್ತವಾಗಬಹುದು ಎನ್ನುವ ಲೆಕ್ಕಾಚಾರವನ್ನು ಡಿಕೆಶಿ ಹೊಂದಿರಲಿಕ್ಕಿರಲಿಲ್ಲ. ಈ ವಿಚಾರ, ಹೈಕಮಾಂಡ್ ಅಂಗಣಕ್ಕೂ ಹೋಗಿದೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯನವರು ಕೆಪಿಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೆಹಲಿಯಲ್ಲಿ ನಡೆದ ಈ ಕಾರ್ಯಕ್ರಮದ ನಂತರ, ಹೈಕಮಾಂಡ್ ಆಪ್ತರಾಗಿರುವ ಕೆ.ಸಿ.ವೇಣುಗೋಪಾಲ್ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿ, ಮೈಸೂರು ವಿಚಾರ ಪ್ರಸ್ತಾವಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿದ್ದರಾಮಯ್ಯ ತಮ್ಮ ಮೈಸೂರು ಪ್ರವಾಸವನ್ನು ದಿಢೀರನೇ ರದ್ದುಗೊಳಿಸಿದ್ದಾರೆ. ಇನ್ನೊಂದೆಡೆ, ಡಿ.ಕೆ.ಶಿವಕುಮಾರ್ ಅವರು ಕೋಲಾರ ಜಿಲ್ಲೆಯ ಐತಿಹಾಸಿಕ ಕುರುಡುಮಲೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಚುನಾವಣೆಗೆ ಪೂರ್ವ ತಯಾರಿ ಆರಂಭಿಸಿದ್ದಾರೆ. ಇದು ತಮ್ಮ ರಾಜಕೀಯ ಗುರು, ಎಸ್.ಎಂ.ಕೃಷ್ಣ ಈ ಹಿಂದೆ ತಳೆದಿದ್ದ ನಿಲುವಿನಂತೆಯೇ ಆಗಿದೆ.

ವಿನಾಯಕನಿಗೆ ಡಿಕೆಶಿ ಪೂಜೆ
ಕೋಲಾರದ ಮುಳಬಾಗಿಲಿನಲ್ಲಿರುವ ಪುರಾಣ ಪ್ರಸಿದ್ದ ಕರಡುಮಲೆ ವಿನಾಯಕಸ್ವಾಮಿ ದೇವಾಲಯದಲ್ಲಿ ಡಿ.ಕೆ.ಶಿವಕುಮಾರ್ ಇಂದು (ಮಾ 1) ಪೂಜೆ ಸಲ್ಲಿಸಿದ್ದಾರೆ. ಬಹುತೇಕ ಎಲ್ಲಾ ರಾಜಕಾರಿಣಿಗಳು ಈ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಚುನಾವಣೆ ಪ್ರಚಾರವನ್ನು ಆರಂಭಿಸುವುದು ವಾಡಿಕೆಯಂತೆ ನಡೆದುಕೊಂಡು ಬರುತ್ತಿದೆ. ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದು ಡಿಕೆಶಿ ಪೂಜೆ ಸಲ್ಲಿಸಿದ್ದು, ಮಾರ್ಚ್ ಮೂರರಿಂದ ಪಾದಯಾತ್ರೆ ಆರಂಭವಾಗಲಿದೆ.

ಕಾಂಗ್ರೆಸ್
ಡಿ.ಕೆ.ಶಿವಕುಮಾರ್ ಈ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪ್ರಚಾರ ಆರಂಭಿಸುತ್ತಿರುವುದಕ್ಕೆ ವಿಶೇಷ ಮಹತ್ವವಿದೆ. ಅಂದಿನ ತಮ್ಮ ರಾಜಕೀಯ ಗುರು, ಈಗಿನ ನೆಂಟರಿಷ್ಟರೂ ಆಗಿರುವ ಎಸ್.ಎಂ.ಕೃಷ್ಣ ಅವರು ಈ ಹಿಂದೆ ಇದೇ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಕಾಂಗ್ರೆಸ್ ಪರವಾಗಿ ಪ್ರಚಾರ ಆರಂಭಿಸಿದ್ದರು. ಅಂದು ಅದು ವರ್ಕೌಟ್ ಆಗಿತ್ತು.

ಎಸ್.ಎಂ.ಕೃಷ್ಣ ಪಾಂಚಜನ್ಯ ಪ್ರಚಾರ
1999ರ ಚುನಾವಣೆಯ ವೇಳೆ ಎಸ್.ಎಂ.ಕೃಷ್ಣ ಕುರುಡುಮಲೆ ದೇವಾಲಯದಿಂದಲೇ ಪಾಂಚಜನ್ಯ ಎನ್ನುವ ಹೆಸರಿನ ಮೂಲಕ ಪ್ರಚಾರ ಆರಂಭಿಸಿದ್ದರು. ಇದು ಕಾಂಗ್ರೆಸ್ಸಿಗೆ ಭರ್ಜರಿ ವರ್ಕೌಟ್ ಆಗಿತ್ತು. ಕೃಷ್ಣ ಅವರ ಈ ಯಾತ್ರೆ, ಜೆ.ಎಚ್ ಪಟೇಲ್ ಅವರ ಸರಕಾರವನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾಗಿತ್ತು. 132 ಸ್ಥಾನವನ್ನು ಕಾಂಗ್ರೆಸ್ ಗೆಲ್ಲುವ ಮೂಲಕ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿತ್ತು.
Recommended Video

ಕಾರ್ಯತಂತ್ರ ಕಾಂಗ್ರೆಸ್ಸಿಗೆ ಯಾವ ರೀತಿ ಲಾಭ ತಂದು ಕೊಡಲಿದೆ
ಈಗ, ಕೆಪಿಸಿಸಿ ಅಧ್ಯಕ್ಷರು ಅದೇ ದಾರಿಯಲ್ಲಿ ಸಾಗಲು ಮುಂದಾಗಿದ್ದಾರೆ. ಅಪ್ರತಿಮ ದೈವಭಕ್ತರಾಗಿರುವ ಡಿಕೆಸಿ, ಕುರುಡುಮಲೆ ದೇವಾಲಯದಿಂದಲೇ ಪ್ರಚಾರ ಶುರು ಮಾಡಲು ಪೂಜೆ ಸಲ್ಲಿಸಿದ್ದಾರೆ. ಇವರ ಈ ಕಾರ್ಯತಂತ್ರ ಕಾಂಗ್ರೆಸ್ಸಿಗೆ ಯಾವ ರೀತಿ ಲಾಭ ತಂದು ಕೊಡಲಿದೆ, ಎಸ್.ಎಂ.ಕೃಷ್ಣ ಅವರ ರೀತಿಯಲ್ಲಿ ಜನರ ಮತ್ತು ವಿನಾಯಕನ ಆಶೀರ್ವಾದ ಕಾಂಗ್ರೆಸ್ ಮೇಲೆ ಇರಲಿದೆಯೇ ಎಂದು ಕಾದು ನೋಡಬೇಕಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications