Get Updates
Get notified of breaking news, exclusive insights, and must-see stories!

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬದಲಾವಣೆಗೆ ದಿನಾಂಕ ಫಿಕ್ಸ್: ಖರ್ಗೆ ಹೇಳಿದ್ದೇನು ?

ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೊನೆಗೂ ದಿನಾಂಕ ಹಾಗೂ ಮುಹೂರ್ತ ಕೂಡಿ ಬಂದಿದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸುಳಿವು ನೀಡಿದ್ದಾರೆ. ಕರ್ನಾಟಕದಲ್ಲಿ ಕಳೆದ ಹಲವು ತಿಂಗಳುಗಳಿಂದ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗಬೇಕು ಎನ್ನುವ ಬಗ್ಗೆ ಚರ್ಚೆಗಳು ಜೋರಾಗಿ ನಡೆದಿವೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ ಅಧ್ಯಕ್ಷರ ಬದಲಾವಣೆ ಆಗಬೇಕು ಎನ್ನುವ ಬಗ್ಗೆ ಕಾಂಗ್ರೆಸ್‌ನಲ್ಲೂ ಜೋರು ಚರ್ಚೆಗಳು ನಡೆದಿವೆ. ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಇದೀಗ ಬಿಗ್‌ ಅಪ್ಡೇಟ್‌ ಕೊಟ್ಟಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಆಗಿರುವ ಡಿ.ಕೆ ಶಿವಕುಮಾರ್‌ ಅವರಿಗೆ ಭಾರೀ ಪ್ರಭಾವಿ ಇಲಾಖೆ ಹಾಗೂ ರಾಜ್ಯಾಧ್ಯಕ್ಷರ ಹುದ್ದೆಯೂ ಇದೆ ಎಂದು ಕಾಂಗ್ರೆಸ್‌ನ ಕೆಲವು ಸಚಿವರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು.

ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಕಳೆದ ಒಂದು ವರ್ಷದಿಂದಲೂ ಚರ್ಚೆ ನಡೆಯುತ್ತಿದೆ. ಬಿಜೆಪಿಯಲ್ಲಿ ಈ ಬಗ್ಗೆ ಜೋರು ಚರ್ಚೆ ನಡೆದಿದ್ದರೆ. ಕಾಂಗ್ರೆಸ್‌ನಲ್ಲೂ ಈ ಬಗ್ಗೆ ಜೋರು ಚರ್ಚೆಗಳು ನಡೆದಿದ್ದು, ಬಹಿರಂಗವಾಗಿಯೇ ಕೆಲವರು ಹೇಳಿಕೆ ನೀಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್‌ ಕೊನೆಗೂ ಒಂದು ನಿರ್ಧಾರಕ್ಕೆ ಬಂದಂತಿದೆ. ಇದೀಗ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯ ವಿಷಯ ಕ್ಲೈಮ್ಯಾಕ್ಸ್‌ ತಲುಪಿದೆ.

KPCC President DK Shivakumars Time for Change What Did Kharge Say

ಈ ಹಿಂದೆ ಎಂದೂ ರಾಜ್ಯಾಧ್ಯಕ್ಷರ ಬದಲಾವಣೆ ವಿಷಯ ಎರಡೂ ರಾಜಕೀಯ ಪಕ್ಷಗಳಲ್ಲಿ ಏಕಕಾಲಕ್ಕೆ ಹಾಗೂ ಈ ಮಟ್ಟಕ್ಕೆ ಚರ್ಚೆಯಾಗಿರಲಿಲ್ಲ. ಈ ಬಾರಿ ಬಿಜೆಪಿಯಲ್ಲಿ ಅಸಮಾಧಾನ ತೀವ್ರವಾಗಿದೆ. ಕಾಂಗ್ರೆಸ್‌ ಸಹ ಈ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಅವರು ಈ ವಿಷಯದ ಬಗ್ಗೆ ಬಹಿರಂಗವಾಗಿಯೇ ಪ್ರಸ್ತಾಪಿಸಿದ್ದರು. ಇದಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸಹ ದನಿ ಗೂಡಿಸಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ.

ವಿವಿಧ ರಾಜ್ಯಗಳ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಚರ್ಚೆ ನಡೆದಿದ್ದು. 8 ದಿನದಲ್ಲಿ ಎಲ್ಲವೂ ಬದಲಾಗಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒಲವು ತೋರಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ನಲ್ಲಿ ಒಬ್ಬರಿಗೆ ಒಂದು ಹುದ್ದೆ ಎನ್ನುವ ಕಾನ್ಸೆಪ್ಟ್‌ ಫಾಲೋ ಮಾಡಲಾಗುತ್ತಿದೆ. ಅಲ್ಲದೆ ಬೇರೆಯವರಿಗೆ ಅವಕಾಶ ಕೊಡುವ ಉದ್ದೇಶ ಹಾಗೂ ವಿವಿಧ ಕಾರಣಕ್ಕೆ ಡಿ.ಕೆ ಶಿವಕುಮಾರ್‌ ಅವರನ್ನು ಬದಲಾವಣೆ ಮಾಡಲು ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧರಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ನಾವು ಬದಲಾವಣೆ ಮಾಡುತ್ತಿದ್ದೇವೆ. ಎಲ್ಲಾ ರಾಜ್ಯದಲ್ಲೂ 8 ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಕರ್ನಾಟಕ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್‌ ಅವರು ಇದ್ದಾರೆ. ಇನ್ನು ಈಚೆಗೆ ಈ ಹುದ್ದೆಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರ ಹೆಸರು ಕೇಳಿ ಬರುತ್ತಿದೆ. ಈಚೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಜಿ. ಪರಮೇಶ್ವರ್ ಅವರು ಭೇಟಿ ಮಾಡಿರುವುದು ಭಾರೀ ಚರ್ಚೆಗೂ ಕಾರಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+