ಲೋಕಸಭೆ ಚುನಾವಣೆಗೆ ಯುವ ಪಡೆ ಕಟ್ಟುತ್ತಿದ್ದಾರೆ ದಿನೇಶ್ ಗುಂಡೂರಾವ್
ಬೆಂಗಳೂರು, ಜುಲೈ 13: 'ಪಡೆಯ ಕಟ್ಟು ವೀರ ಸಮರ ಕಾದಿದೆ..' ಹಾಡಿನಂತೆ ನೂತನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕಾರ್ಯೋನ್ಮುಖರಾಗಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಬಲ ಎದಿರೇಟು ನೀಡಲು ಯುವಪಡೆಯನ್ನು ಕಟ್ಟಲು ದಿನೇಶ್ ಗುಂಡೂರವ್ ಅವರು ಯೋಜಿಸಿದ್ದಾರೆ. ಹೈಕಮಾಂಡ್ನಿಂದಲೂ ಯುವಕರಿಗೆ ಅವಕಾಶ ನೀಡುವಂತೆ ಸೂಚನೆ ಸಹ ಕೆಪಿಸಿಸಿಗೆ ಬಂದಿದೆ.
ತಾಲ್ಲೂಕು ಮಟ್ಟದಿಂದ ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆಗೆ ದಿನೇಶ್ ಗುಂಡೂರಾವ್ ಯೋಜಿಸಿದ್ದು, ಹೆಚ್ಚಿನ ಪಾಲು ಯುವಕರಿಗೆ ಆದ್ಯತೆ ನೀಡುವ ಉಮೇದು ಹೊಂದಿದ್ದಾರೆ. ಪದಾಧಿಕಾರಿಗಳ ಬದಲಾವಣೆ ಕಾರ್ಯ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ.

ಜಿ.ಪರಮೇಶ್ ಅವರು ಸತತ 8 ವರ್ಷಗಳ ಕಾಲ ಕೆಪಿಸಿಸಿ ಗದ್ದುಗೆಯಲ್ಲಿದ್ದರು ಹಾಗಾಗಿ ಪದಾಧಿಕಾರಿಗಳ ಬದಲಾವಣೆಗೆ ದೊಡ್ಡ ಮಟ್ಟದಲ್ಲಿ ಆಗಿಲ್ಲ. ಈಗ ಕೆಪಿಸಿಸಿ ಚುಕ್ಕಾಣಿ ದಿನೇಶ್ ಅವರ ಕೈಗೆ ಬಂದಿದ್ದು ಅವರು ಪದಾಧಿಕಾರಿಗಳ ಬದಲಾವಣೆಗೆ ಮುಂದಡಿ ಇಟ್ಟಿದ್ದಾರೆ.
ಕೆಪಿಸಿಸಿ ಚುಕ್ಕಾಣಿಯನ್ನೂ ನಡುವಯಸ್ಸಿನವರಿಗೇ ನೀಡಿರುವ ಹೈಕಮಾಂಡ್ ಸಹ ಯುವಕರಿಗೆ ಹೆಚ್ಚಿನ ಅವಕಾಶ ನೀಡುವಂತೆ ಸೂಚನೆ ನೀಡಿದೆ ಹಾಗಾಗಿ ಪದಾಧಿಕಾರಿಗಳ ಬದಲಾವಣೆ ಹಾಗೂ ಚುನಾವಣಾ ಸಮಿತಿಗಳಲ್ಲಿ ಬಿಳಿ ತಲೆಗಳ ಬದಲಾಗಿ ಕರಿ ತಲೆಗಳನ್ನೇ (ಯುಕವರನ್ನೇ) ಹೆಚ್ಚಾಗಿ ಕಾಣುವ ಸಾಧ್ಯತೆ ದಟ್ಟವಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವರು ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ್ದಾರೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications