ಸೋನಿಯಾ ವಿರುದ್ಧ ಎಫ್ಐಆರ್ ರದ್ದು ಮಾಡಲು ದುಂಬಾಲು ಬಿದ್ದ ಡಿಕೆಶಿ
ಬೆಂಗಳೂರು, ಮೇ 21: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದಾಖಲಿಸಿರುವ ಎಫ್ಐಆರ್ ವಾಪಸ್ ಪಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಗುರುವಾರ ಮನವಿ ಸಲ್ಲಿಸಿತು.
Recommended Video
ಜನರನ್ನು ತಪ್ಪು ದಾರಿಗೆ ಎಳೆಯುವ ಉದ್ದೇಶ ಹೊಂದಿರುವ ಸೋನಿಯಾ ಗಾಂಧಿ ವಿರುದ್ಧದ ಪ್ರಕರಣ ಕೈಬಿಡಬೇಕು. ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಡಿಕೆಶಿ ಸಿಎಂ ಬಳಿ ಮನವಿ ಮಾಡಿದ್ದಾರೆ.
''ಕೊರೊನಾ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಪಿಎಂ ಕೇರ್ ದುರಪಯೋಗ ಆಗುತ್ತಿದೆ ಎಂದು ಕಾಂಗ್ರೆಸ್ ಅಧಿಕೃತ ಟ್ವಿಟ್ಟರ್ ಪೇಜ್ನಲ್ಲಿ ಬರೆಯಲಾಗಿತ್ತು. ಇದಕ್ಕೆ ಸೋನಿಯಾ ಗಾಂಧಿ ಅವರೇ ಹೊಣೆ, ಸುಳ್ಳು ಮಾಹಿತಿ ಹರಡುತ್ತಿದ್ದಾರೆ'' ಎಂದು ಸಾಗರದಲ್ಲಿ ಪ್ರವೀಣ್ ಕುಮಾರ್ ಎಂಬ ವಕೀಲರು ದೂರು ದಾಖಲಿಸಿದ್ದಾರೆ. ಈ ಬಗ್ಗೆ ಡಿಕೆಶಿ ಗರಂ ಆಗಿದ್ದಾರೆ. ಮುಂದೆ ಓದಿ....

ದೇಶದಲ್ಲೇ ಸಂಚಲವನ್ನು ಉಂಟುಮಾಡುವ ವಿಚಾರ
ಸಿಎಂ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ''ಶಿವಮೊಗ್ಗದ ಪ್ರವೀಣ್ ಕುಮಾರ್ ಎಂಬ ವಕೀಲ, ಪೊಲೀಸ್ ಅಧಿಕಾರಿಯೊಬ್ಬರ ಜೊತೆ ಸೇರಿ ಒಂದು ದೂರು ಕೊಟ್ಟು ಸೋನಿಯಾಗಾಂಧಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ, ಇದು ಸೂಕ್ಷ್ಮ ವಿಚಾರ ಇಡೀ ದೇಶದಲ್ಲೇ ಸಂಚಲವನ್ನು ಉಂಟುಮಾಡುವ ವಿಚಾರ'' ಎಂದರು.

ಅಧಿಕಾರ ದುರುಪಯೋಗದ ವಿಚಾರ
''ದ್ವೇಷದ ಮನೋಭಾವ, ಅಧಿಕಾರ ದುರುಪಯೋಗದ ವಿಚಾರ ಇದು. ವಿರೋಧ ಪಕ್ಷಗಳು ಯಾವ ಮಟ್ಟಕ್ಕೆ ಕೆಲಸ ಮಾಡಬೇಕು ಎನ್ನುವ ದೊಡ್ಡ ಚರ್ಚೆ ಕೂಡ ನಾವು ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಾವು ಗೃಹ ಸಚಿವರ ಜತೆ ಮಾತನಾಡಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ'' ಎಂದರು.

ಸಿಎಂ ಭರವಸೆ ನೀಡಿದ್ದಾರೆ
''ಇದು ಸೂಕ್ಷ್ಮ ವಿಚಾರ ಹಾಗಾಗಿ ನಾವು ಹೋರಾಟ ಮಾಡುವ ಮೊದಲು ನಮ್ಮ ಪಕ್ಷದ ಪರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ಈ ಸಂಬಂಧ ಕ್ರಮಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಿಎಂಗೆ ಮನವಿ ಮಾಡಿದ್ದೇವೆ. ಇದಕ್ಕೆ 24ಗಂಟೆಯಲ್ಲಿ ಬಿ ರಿಪೋರ್ಟ್, ಸಲ್ಲಿಕೆ ಮಾಡಲಾಗುತ್ತದೆ, ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಒಂದು ನಿಮಿಷದ ಚರ್ಚೆಗೂ ಅವಕಾಶ ನೀಡದೆ ನಮಗೆ ಭರವಸೆ ನೀಡಿದ್ದಾರೆ'' ಎಂದು ಡಿಕೆಶಿ ಹೇಳಿದ್ದಾರೆ.

ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ
ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರು ಸಾಥ್ ನೀಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications