'ಸಿದ್ದರಾಮಯ್ಯ ಕೆಣಕಿದ್ದಕ್ಕೆ ಉಪಚುನಾವಣೆಯಲ್ಲಿ ಜನರಿಂದ ತಕ್ಕ ಉತ್ತರ'
ಚಿತ್ರದುರ್ಗ, ನವೆಂಬರ್ 23: ಸಿದ್ದರಾಮಯ್ಯ ನಾಡು ಕಂಡ ಅಪರೂಪದ ನಾಯಕ, 40 ವರ್ಷ ನಿಷ್ಕಳಂಕ ರಾಜಕಾರಣ ಮಾಡಿದ ಮುತ್ಸದ್ಧಿ. ಆದರೆ, ಅವರ ಹೆಸರಿಗೆ ಕಳಂಕ ತರಲು ಅನಗತ್ಯವಾಗಿ ಮುಡಾ ವಿಷಯ ಮುನ್ನೆಲೆಗೆ ತಂದ ಪ್ರತಿಪಕ್ಷಗಳ ನಡೆಗೆ ಜನಾಕ್ರೋಶ ಮೂರು ಉಪ ಚುನಾವಣೆಯಲ್ಲಿ ಹೊರಬಿದ್ದಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗದ ಹಿತ ಸದಾ ಬಯಸುವ ಸಿದ್ದರಾಮಯ್ಯ, ಎಲ್ಲ ಸಮುದಾಯದ ಹಿತಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಯಶಸ್ಸು ಕಂಡಿದ್ದಾರೆ. ಆದರೆ, ಇದನ್ನು ಸಹಿಸದೆ, ಸಿದ್ದರಾಮಯ್ಯ ಅವರನ್ನು ಕೆಣಕುವ ಪ್ರಯತ್ನ ನಡೆಸಿ, ಮತದಾರರಿಂದ ಪ್ರತಿಪಕ್ಷಗಳು ಮಂಗಳಾರತಿ ಮಾಡಿಸಿಕೊಂಡಿವೆ ಎಂದಿದ್ದಾರೆ.

ರಾಜ್ಯದಲ್ಲಿನ ಮೂರು ಕ್ಷೇತ್ರಗಳಲ್ಲಿನ ಗೆಲುವು ಸಿದ್ದರಾಮಯ್ಯ ಅವರ ನಾಯಕತ್ವದ ಕಿರೀಟಕ್ಕೆ ಮತ್ತೊಂದು ಗರಿ ಆಗಿದ್ದು, ಈ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಅನಗತ್ಯ ಆರೋಪ, ಮಾಡುತ್ತಿದ್ದವರಿಗೆ ಜನರೇ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಮುಡಾ ಹೆಸರಲ್ಲಿ ಹಗರಣ ನಡೆದಿದೆ ಎಂದು ಸುಳ್ಳು ಸುದ್ದಿ ಹರಡಿ, ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಮಾನಸಿಕ ಹಿಂಸೆ ನೀಡುವ ಯತ್ನ ಹಾಗೂ ಅಹಿಂದ ನಾಯಕನೊಬ್ಬ ಎರಡನೇ ಬಾರಿ ಸಿಎಂ ಆಗಿ ಅವಧಿ ಪೂರ್ಣಗೊಳಿಸುವ ಪ್ರಯತ್ನಕ್ಕೆ ಅಡ್ಡಿಪಡಿಸುವ ಪ್ರತಿಪಕ್ಷಗಳ ಷಡ್ಯಂತ್ರವನ್ನು ಸಹಿಸಿಕೊಳ್ಳುವುದಿಲ್ಲವೆಂಬ ಸಂದೇಶವನ್ನು ಮತದಾರರೇ ರವಾನಿಸಿದ್ದಾರೆ.
ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಹಾಗೂ ಐದು ಗ್ಯಾರಂಟಿಗಳು ಜಾರಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸುವ ಆದೇಶ ಸೇರಿ ಅನೇಕ ಕ್ರಾಂತಿಕಾರಿ ನಡೆ ಕೈಗೊಂಡ ಸಿದ್ದರಾಮಯ್ಯ ನಾಯಕತ್ವ ಪ್ರಶ್ನಾತೀತ ಎಂಬ ಸಂದೇಶವನ್ನು ಜನರು ಫಲಿತಾಂಶದ ಮೂಲಕ ಸಾರಿದ್ದಾರೆ. ಸಿದ್ದರಾಮಯ್ಯ ಅವರನ್ನು ಷಡ್ಯಂತ್ರ ನಡೆಸಿ ಅಧಿಕಾರದಿಂದ ಕೆಳಗಿಸುವ ಕುತಂತ್ರಕ್ಕೆ ಅಹಿಂದ ವರ್ಗದ ಜನರು ಸಿಡಿದೆದ್ದು, ರಾಜ್ಯದಲ್ಲಿ ಮತ್ತಷ್ಟು ಗಟ್ಟಿಗೊಂಡಿದ್ದಾರೆ. ಅದರ ಫಲವೇ ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ಹೆಚ್ಚು ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದಿದ್ದಾರೆ.

ರಾಜ್ಯದಲ್ಲಿ ಅಹಿಂದ ಮತಗಳು ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಂತುಕೊಂಡಿದ್ದು, ಜತೆಗೆ ವೀರಶೈವ ಲಿಂಗಾಯಿತ, ಒಕ್ಕಲಿಗ ಮತಗಳನ್ನು ಕೂಡ ಕಾಂಗ್ರೆಸ್ ಪಕ್ಷ ಪಡೆದುಕೊಳ್ಳುವಲ್ಲಿ ಯಶಸ್ಸು ಕಂಡಿದೆ. ಜತೆಗೆ ಶಿಗ್ಗಾವಿ, ಸಂಡೂರಲ್ಲಿ ಹೆಚ್ಚು ಸಂಖ್ಯೆಯಲ್ಲಿರುವ ಮಾದಿಗ ಸಮುದಾಯವು ಕೂಡ ಕೈಹಿಡಿದಿರುವುದು ಪಕ್ಷದ ಗೆಲುವಿಗೆ ಸಹಕಾರಿ ಆಗಿದೆ ಎಂದರು.
ಈ ಗೆಲುವಿನ ಮೆರವಣಿಗೆ ಮುಂಬರುವ ಬಿಬಿಎಂಪಿ, ಜಿಲ್ಲಾ, ತಾಲೂಕು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮುಂದುವರಿಯಲಿದೆ. ಪ್ರತಿಪಕ್ಷಗಳು ಈಗಲಾದರೂ ಸೋಲು ಒಪ್ಪಿಕೊಂಡು, ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು. ಮುಖ್ಯವಾಗಿ ಎಲ್ಲ ವರ್ಗದ ಜನರ ಹಿತಕ್ಕಾಗಿ ಸ್ವಾತಂತ್ರ್ಯ ಭಾರತದಲ್ಲಿ ಪ್ರಥಮ ಬಾರಿಗೆ ರಾಜ್ಯದಲ್ಲಿ ನಡೆಸಿದ ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ವರದಿ ಅನುಷ್ಠಾನಕ್ಕೆ ಬೆಂಬಲ ವ್ಯಕ್ತಪಡಿಸಬೇಕು. ಜತೆಗೆ ಗ್ಯಾರಂಟಿ ಯೋಜನೆಗಳ ಕುರಿತು ಅಪಪ್ರಚಾರ ನಿಲ್ಲಿಸಿ, ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವತ್ತ ಗಮನಹರಿಸಬೇಕು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ವಕ್ಫ್ ಮಂಡಳಿ ಆದೇಶ, ಕೇಂದ್ರ ಸರ್ಕಾರದ ಸೂಚನೆ ಕಾರಣಕ್ಕೆ ರಾಜ್ಯದಲ್ಲಿ ಅನೇಕರ ಬಿಪಿಎಲ್ ಪಡಿತರ ಚೀಟಿ ರದ್ದು ವಿಷಯವನ್ನು ಕಾಂಗ್ರೆಸ್ ಪಕ್ಷವೇ ನಡೆಸಿದೆ ಎಂದು ಸುಳ್ಳು ಆರೋಪ ಮಾಡಿ, ಜನರನ್ನು ಎತ್ತಿಕಟ್ಟುವ ಯತ್ನಕ್ಕೆ ಮತದಾರ ಸೊಪ್ಪು ಹಾಕಿಲ್ಲ. ಸತ್ಯವನ್ನಷ್ಟೇ ನಾವು ಒಪ್ಪಿಕೊಳ್ಳುವುದು ಎಂಬ ಸಂದೇಶ ಮತದಾರರು ನೀಡಿದ್ದಾರೆ ಎಂದು ಹೇಳಿದರು.
ಆದ್ದರಿಂದ ಇನ್ಮುಂದೆ ಜಾತಿ-ಧರ್ಮಗಳ ಮಧ್ಯೆ ಕಂದಕ ಸೃಷ್ಟಿಸುವ ಪ್ರಯತ್ನ ಹಾಗೂ ಸುಳ್ಳು ಸುದ್ದಿಗಳನ್ನು ಹರಡಿ ಉತ್ತಮವಾಗಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಕಳಂಕ ತರುವ ಷಡ್ಯಂತ್ರ ಕೈಬಿಡಬೇಕು. ರಾಜ್ಯದ ಅಭಿವೃದ್ಧಿಗೆ ಎಲ್ಲ ರಾಜಕೀಯ ಪಕ್ಷಗಳು ಸಿದ್ದರಾಮಯ್ಯ ನಾಯಕತ್ವದ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಎಚ್. ಆಂಜನೇಯ ಕೋರಿದ್ದಾರೆ.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Bagalkote By Election: ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಪ್ರತಿಷ್ಠೆ ಕದನ, ಜಾತಿ ಸಮೀಕರಣ - ಗ್ಯಾರಂಟಿಗಳ ಪರೀಕ್ಷೆ -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications