ಕೇಂದ್ರದಿಂದ 'ಕೆಪಿಸಿಎಲ್'ಗೆ ಹರಿದು ಬರಲಿದೆ 39,000 ಕೋಟಿ
ಕರ್ನಾಟಕ ವಿದ್ಯುತ್ ಶಕ್ತಿ ನಿಗಮ ಮತ್ತು ಬೆಸ್ಕಾಂಗೆ ಮುಂದಿನ 5 ವರ್ಷಗಳಲ್ಲಿ 39,121 ಕೋಟಿ ರೂಪಾಯಿ ಹರಿದು ಬರಲಿದೆ. ಕೇಂದ್ರ ಸರಕಾರದ ಗ್ರಾಮೀಣ ವಿದ್ಯುದ್ಧೀಕರಣ ನಿಗಮ ರಾಜ್ಯದ ಸಂಸ್ಥೆಗಳ ಜತೆ ಈ ಕುರಿತು ಒಪ್ಪಂದ ಮಾಡಿಕೊಂಡಿದೆ.
ಬೆಂಗಳೂರು, ಫೆಬ್ರವರಿ 6: ಕರ್ನಾಟಕ ವಿದ್ಯುತ್ ಶಕ್ತಿ ನಿಗಮ (ಕೆಪಿಸಿಎಲ್) ಮತ್ತು ಬೆಸ್ಕಾಂಗೆ (ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿ.) ಮುಂದಿನ 5 ವರ್ಷಗಳಲ್ಲಿ 39,121 ಕೋಟಿ ರೂಪಾಯಿ ಹರಿದು ಬರಲಿದೆ. ಕೇಂದ್ರ ಸರಕಾರದ ಗ್ರಾಮೀಣ ವಿದ್ಯುದ್ಧೀಕರಣ ನಿಗಮ (ಆರ್.ಇ.ಸಿ) ರಾಜ್ಯದ ಸಂಸ್ಥೆಗಳ ಜತೆ ಈ ಕುರಿತು ಒಪ್ಪಂದ ಮಾಡಿಕೊಂಡಿದ್ದು ದೊಡ್ಡ ಮೊತ್ತದ ಹಣದ ನೆರವು ನೀಡಲಿದೆ.
ಫೆಬ್ರವರಿ 3ರಂದು ಕೆಪಿಸಿಎಲ್ ಮತ್ತು ಬೆಸ್ಕಾಂ ಜತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಇಂಧನ ಮಂತ್ರಿ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಆರ್.ಇ.ಸಿ ಒಪ್ಪಂದ ಮಾಡಿಕೊಂಡಿದೆ.[ಮಂಗಳೂರಿನ ಕಚ್ಚಾ ತೈಲ ಸಂಗ್ರಹಾಗಾರಕ್ಕೆ ಯುಎಇ ಇಂಧನ]

ಕೆಪಿಸಿಎಲ್ ಒಟ್ಟು 27,121 ಕೋಟಿ ರೂಪಾಯಿ ನೆರವು ಪಡೆದುಕೊಳ್ಳಲಿದ್ದು ನಿಗಮದ ಸಾಲ ಸಂದಾಯ, ಭವಿಷ್ಯದ ಯೋಜನೆಗಳಿಗೆ ಬಳಸಿಕೊಳ್ಳಬಹುದಾಗಿದೆ. ಇದೇ ರೀತಿ ಬೆಸ್ಕಾಂ 12,000 ಕೋಟಿ ರೂಪಾಯಿ ಪಡೆದುಕೊಳ್ಳಲಿದೆ. ಈ ಹಣವನ್ನು ಹೊಸ ವಿದ್ಯುತ್ ಉತ್ಪಾದನೆ ಯೋಜನೆಗಳು, ಸರಬರಾಜು ವ್ಯವಸ್ಥೆಯ ವಿಸ್ತರಣೆ ಮತ್ತು ನವೀಕರಣ, ವಿದ್ಯುತ್ ವರ್ಗಾವಣೆ ವ್ಯವಸ್ಥೆಗಳ ಸುಧಾರಣೆ, ವಿದ್ಯುತ್ ಮೇಲಿನ ಸಂಶೋಧನೆ ಮತ್ತು ಅಭಿವೃದ್ದಿಗೆ ಬಳಸಿಕೊಳ್ಳಬಹುದಾಗಿದೆ.[ತಮಿಳುನಾಡು ಅಣು ಸ್ಥಾವರರಿಂದ ಕರ್ನಾಟಕಕ್ಕೆ 221 ಮೆ. ವ್ಯಾ ವಿದ್ಯುತ್!]
ಧನ ಸಹಾಯವೂ ಅಲ್ಲದೇ ಆರ್.ಇ.ಸಿ ರಾಜ್ಯ ಸಂಸ್ಥೆಗಳ ಯೋಜನೆಗಳಿಗೆ ಸಲಹೆ ಸೂಚನೆಗಳನ್ನೂ ನೀಡಲಿದೆ. ಈ ದೊಡ್ಡ ಮೊತ್ತದ ಸಹಾಯ ಕರ್ನಾಟಕ ಇಂಧನ ಕೊರತೆ ನೀಗಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications