KPCL Exam: ಕೆಪಿಸಿಎಲ್ ಪರೀಕ್ಷೆ ರದ್ದುಪಡಿಸಿದ ಸುಪ್ರೀಂ ಕೋರ್ಟ್: ಮರು ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದ KEA
ಬೆಂಗಳೂರು, ನವೆಂಬರ್ 20: ಕರ್ನಾಟಕ ವಿದ್ಯುತ್ ನಿಗಮದಲ್ಲಿ (KPCL) ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೊಸದಾಗಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ.
ಕರ್ನಾಟಕ ವಿದ್ಯುತ್ ನಿಗಮದ ಖಾಲಿ ಹುದ್ದೆಗಳ ನೇಮಕಾತಿಗಾಗಿ (KPCL Exam 2025) ಡಿಸೆಂಬರ್ 27 ಮತ್ತು 28ರಂದು ಮರು ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿತ್ತು ಇತ್ಯಾದಿ ಮಾಹಿತಿಯನ್ನು ನಮೂದಿಸಬೇಕು ಎಂದು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕರು ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಅಧಿಸೂಚನೆಯ ಪ್ರಕಾರ, ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತವಾದ KPCL ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್ ಮತ್ತು ಇತರ ತಾಂತ್ರಿಕ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಕೆಇಎ ಅಧಿಕೃತವಾಗಿ ಪ್ರಕಟಿಸಿದೆ. ವೇಳಾಪಟ್ಟಿ ವಿವರ ಮುಂದಿದೆ.
ಮೊದಲ ದಿನ ಪರೀಕ್ಷೆ ಡಿಸೆಂಬರ್ 27 ರಂದು ನಡೆಯಲಿದೆ. ಅಂದು ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ತಲಾ ವಿಷಯಕ್ಕೆ100 ಅಂಕ ಇದ್ದು, ಓಎಂಆರ್ ವಿಧಾನದಲ್ಲಿ ಇರುತ್ತದೆ ಎಂದು ಕೆಇಎ ತಿಳಿಸಿದೆ.
ಡಿಸೆಂಬರ್ 27ರ ಮೊದಲ ದಿನ ಈ ಹುದ್ದೆಗಳಿಗೆ ಪರೀಕ್ಷೆ
* ಕಿರಿಯ ಮೇಲ್ವಿಚಾರಕ ಹುದ್ದೆ
* ಸಹಾಯಕ ಇಂಜಿನಿಯರ್ ಸಿವಿಲ್
* ಸಹಾಯಕ ಇಂಜಿನಿಯರ್ ಎಲೆಕ್ಟ್ರಿಕಲ್
* ಸಹಾಯಕ ಇಂಜಿನಿಯರ್ ಮೆಕ್ಯಾನಿಕಲ್
* ಸಹಾಯಕ ಇಂಜಿನಿಯರ್ ಇನ್ಸ್ಟ್ರುಮೆಂಟೇಷನ್
ಡಿಸೆಂಬರ್ 28ರ ಈ ಹುದ್ದೆಗಳಿಗೆ ಪರೀಕ್ಷೆ-100 ಅಂಕ (ಬೆ 10 ರಿಂದ ಮ. 12ಗಂಟೆವರೆಗೆ)
* ಕೆಮಿಸ್ಟ್
* ಕಿರಿಯ ಇಂಜಿನಿಯರ್ ಸಿವಿಲ್
* ಕಿರಿಯ ಇಂಜಿನಿಯರ್ ಎಲೆಕ್ಟ್ರಿಕಲ್
* ಕಿರಿಯ ಇಂಜಿನಿಯರ್ ಎಲೆಕ್ಟ್ರಾನಿಕ್ಸ್
ಅದೇ ದಿನ ಡಿಸೆಂಬರ್ 28ರಂದು ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ (100 ಅಂಕ) ನಡೆಯಲಿದೆ. ಕನ್ನಡ ಭಾಷಾ ಪರೀಕ್ಷೆಯಲ್ಲಿ 35 ಅಂಕಗಳನ್ನು ಪಡೆಯುವುದು ಕಡ್ಡಾಯ. ಇಲ್ಲದಿದ್ದರೆ ಅಭ್ಯರ್ಥಿಗಳನ್ನು ಅರ್ಹರೆಂದು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು KEA ವೆಬ್ಸೈಟ್ https://cetonline.karnataka.gov.in/kea/kpcl2023 ಗೆ ಭೇಟಿ ನೀಡಬೇಕು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications