Get Updates
Get notified of breaking news, exclusive insights, and must-see stories!

ಭಾರತ-ಪಾಕ್ ನಡುವೆ ಉದ್ವಿಗ್ನತೆ: ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

ಬೆಂಗಳೂರು, ಮೇ 8: ದೇಶದಲ್ಲಿನ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಬರುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ ಮುಖ್ಯವಾಗಿದ್ದು, ಎಲ್ಲಾ ಜಲಾಶಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ರಾಜ್ಯ ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಸಂಪೂರ್ಣ ಭದ್ರತೆ ಒದಗಿಸಬೇಕು. ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಲೋಪವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದೆ.

KPCL Steps up Security at State s Power Plants and Reservoirs

ಕೆಪಿಸಿಎಲ್ ವತಿಯಿಂದ ಜಲ, ಉಷ್ಣ, ಪವನ, ಸೌರ, ಅನಿಲ ಮತ್ತು ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ನಿರ್ಮಿಸಲಾಗಿದೆ. ಜಲ ವಿದ್ಯುತ್ ಉತ್ಪಾದನೆಗಾಗಿ ಹಲವು ಜಲಾಶಯಗಳನ್ನು ನಿರ್ಮಿಸಲಾಗಿದೆ. ಈ ಎಲ್ಲಾ ವಿದ್ಯುತ್ ಸ್ಥಾವರಗಳು ಮತ್ತು ಜಲಾಶಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಇದರ ಬೆನ್ನಲ್ಲೇ, ಪ್ರಮುಖ ಜಲಾಶಯಗಳು ಮತ್ತು ಸ್ಥಾವರಗಳ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಭೆ ನಡೆಸಿ ಭದ್ರತಾ ವ್ಯವಸ್ಥೆ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ. ಜತೆಗೆ ಹೆಚ್ಚಿನ ಸಹಕಾರ ನೀಡುವಂತೆ ಕೆಪಿಸಿಎಲ್ ಅಧಿಕಾರಿಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮತ್ತೊಂದೆಡೆ, ಕೆಪಿಸಿಎಲ್ ವ್ಯಾಪ್ತಿಯ ಜಲಾಶಯಗಳು ಮತ್ತು ಪವರ್ ಹೌಸ್ ಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಗಣ್ಯರು ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಅದರಲ್ಲೂ ಮುಖ್ಯವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಧ್ಯಯನ ದೃಷ್ಟಿಯಿಂದ ಜಲಾಶಯಗಳು ಮತ್ತು ಪವರ್ ಹೌಸ್ ಗಳಿಗೆ ಭೇಟಿ ನೀಡುತ್ತಾರೆ. ಪ್ರಸ್ತುತ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಮತ್ತು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯಂತೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ದೈಹಿಕ ಕ್ಷಮತೆ/ ಸಹನ ಶಕ್ತಿ ಪರೀಕ್ಷೆಯನ್ನು ರಾಜ್ಯದ ನಾಲ್ಕು ವಲಯಗಳಲ್ಲಿ ಯಶಸ್ವಿಯಾಗಿ ನಡೆಸಿದೆ.

ಕವಿಪ್ರನಿನಿಯಲ್ಲಿ ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ 533 ಹುದ್ದೆಗಳಿಗೆ 1:5 ಅನುಪಾತದಲ್ಲಿ ಸಹನ ಶಕ್ತಿ ಪರೀಕ್ಷೆಯನ್ನು ಮೇ 5 ರಿಂದ 8 ರವರೆಗೆ ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಆಯೋಜಿಸಿತ್ತು. ಈ ಪರೀಕ್ಷೆಗೆ ಕರೆಯಲಾದ 2615 ಅಭ್ಯರ್ಥಿಗಳ ಪೈಕಿ, 1800 ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಕೆಪಿಟಿಸಿಎಲ್‌ನ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ವಲಯವಾರು ಪ್ರಥಮ ಹಂತದಲ್ಲಿ, 1:5 ಅನುಪಾತದಲ್ಲಿ ಕರೆಯಲಾದ ಅಭ್ಯರ್ಥಿಗಳಿಗೆ ಕಂಬ ಹತ್ತುವುದು, ಓಟ ಓಡುವುದು ಒಳಗೊಂಡಂತೆ ಐದು ವಿಧದ ಪರೀಕ್ಷೆಯನ್ನು ನಡೆಸಿದೆ. ವಿಶೇಷವಾಗಿ ಬೆಳಗಾವಿಯಲ್ಲೇ ಅತೀ ಹೆಚ್ಚು ಅಭ್ಯರ್ಥಿಗಳು ಸಹನ ಶಕ್ತಿ ಪರೀಕ್ಷೆಗೆ ಅರ್ಹತೆಗಳಿಸಿದ್ದರಿಂದ ಜಿಲ್ಲೆಯ ಅಭ್ಯರ್ಥಿಗಳಿಗಾಗಿಯೇ ಪರೀಕ್ಷಾ ಕೇಂದ್ರವನ್ನು ನಿಗದಿಗೊಳಿಸಲಾಗಿತ್ತು.

ನಾಲ್ಕೂ ವಲಯಗಳಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಂಡಿರುವ ಅಭ್ಯರ್ಥಿಗಳು, ಐದರ ಪೈಕಿ ಮೂರರಲ್ಲಿ ಅರ್ಹತೆ ಗಳಿಸಿಬೇಕಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂಕಗಳ ಮೆರಿಟ್ ಆಧಾರದಲ್ಲಿ 1:1 ಅನುಪಾತದ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿ ಹಾಗೂ ಮಾಹಿತಿ ಪಡೆಯಲು ನಿಗಮದ ಅಧಿಕೃತ ವೆಬ್‌ಸೈಟ್ ಪರಿಶೀಲಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+