ಕೆಪಿಎಲ್ ಮ್ಯಾಚ್ ಫಿಕ್ಸಿಂಗ್; ಬೆಳಗಾವಿ ಫ್ಯಾಂಥರ್ಸ್ ಕೋಚ್ ಬಂಧನ
ಬೆಂಗಳೂರು, ಡಿಸೆಂಬರ್ 04 : ಕೆಪಿಎಲ್ ಫೈನಲ್ ಪಂದ್ಯದಲ್ಲಿ ನಡೆದ ಮ್ಯಾಚ್ ಫಿಕ್ಸಿಂಗ್ ಹಗರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದಾರೆ. ಬೆಳಗಾವಿ ಫ್ಯಾಂಥರ್ಸ್ ತಂಡದ ಕೋಚ್ ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.
ಬೆಳಗಾವಿ ಫ್ಯಾಂಥರ್ಸ್ ತಂಡದ ಕೋಚ್ ಸುಧೀಂದ್ರ ಶಿಂಧೆಯನ್ನು ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಸೋಮವಾರ ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಶಿಂಧೆ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ. ಬಂಧಿತರು ವಿಚಾರಣೆ ವೇಳೆ ಬೆಳಗಾವಿ ಫ್ಯಾಂಥರ್ಸ್ ತಂಡದ ಕೋಚ್ ಸುಧೀಂದ್ರ ಶಿಂಧೆ ಹೆಸರು ಹೇಳಿದ್ದರು. ಆದ್ದರಿಂದ, ಅವರ ನಿವಾಸದ ಮೇಲೆ ಸಿಸಿಬಿ ದಾಳಿ ಮಾಡಿತ್ತು.
ಬೆಳಗಾವಿ ಫ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಶ್ಫಕ್ ತಾರ್ರನ್ನು ಹಿಂದೆಯೇ ಸಿಸಿಬಿ ಬಂಧಿಸಿತ್ತು. ಮ್ಯಾಚ್ ಫಿಕ್ಸಿಂಗ್ ಮಾಡಲು ಸುಧೀಂದ್ರ ಶಿಂಧೆ ಸಹಾಯ ಮಾಡಿದ್ದಾರೆ ಎಂಬ ಮಾಹಿತಿಯನ್ನು ಅವರು ನೀಡಿದ್ದರು. ಸುಧೀಂದ್ರ ಶಿಂಧೆಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗುತ್ತದೆ.
ಸುಧೀಂದ್ರ ಶಿಂಧೆ ಕೆಎಸ್ಸಿಎ ಆಡಳಿತ ಮಂಡಳಿ ಸದಸ್ಯರು ಹೌದು. ಆಟಗಾರರ ಜೊತೆ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪ್ರಕರಣದಲ್ಲಿ ಶಿಂಧೆ ಪಾತ್ರವೇನು ಎಂಬುದನ್ನು ತಿಳಿದುಕೊಳ್ಳಲು ಸಿಸಿಬಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications