ಬಿಜೆಪಿ ತಂದಿದ್ದ ಎಪಿಎಂಸಿ, ಮತಾಂತರ ಕಾಯ್ದೆ ವಾಪಸ್ ನಿರ್ಧಾರ ಸ್ವಾಗತಾರ್ಹ: KPRS
ಬೆಂಗಳೂರು, ಜೂನ್ 16: ಕರ್ನಾಟಕದಲ್ಲಿ ಕಳೆದ ಬಿಜೆಪಿ ಸರ್ಕಾರ ತಂದಿದ್ದ ಕಾಯ್ದೆ-ಕಾನೂನುಗಳನ್ನು ಅಧಿಕಾರಕ್ಕೆ ಬಂದು ಒಂದು ತಿಂಗಳಲ್ಲಿಯೇ ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಈ ಕುರಿತು ಬಿಜೆಪಿ ನಾಯಕರು ಮುಗಿಬೀಳುತ್ತಿರುವ ಹೊತ್ತಿನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ(KPRS) ಕರ್ನಾಟಕ ರಾಜ್ಯ ಸಮಿತಿ ಕಾಂಗ್ರೆಸ್ ನೀರ್ಣಯವನ್ನು ಸ್ವಾಗತಿಸಿದೆ.
ಈ ಕುರಿತು ಕರ್ನಾಟಕ ಪ್ರಾಂತ ರೈತ ಸಂಘ(KPRS) ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿಂದೆ ಬಿಜೆಪಿ ಸರ್ಕಾರ ಎಪಿಎಂಸಿ ಮಾರುಕಟ್ಟೆ ಗಳನ್ನು ನಾಶ ಮಾಡುವ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿತ್ತು. ಸಂವಿಧಾನ ಬದ್ಧ ಧಾರ್ಮಿಕ ಸ್ವಾತಂತ್ರ್ಯ ನಿರಾಕರಿಸುವ 'ಮತಾಂತರ ನಿಷೇಧ ಕಾಯ್ದೆ'ಯನ್ನು ವಾಪಸ್ಸು ಪಡೆಯಲು ನಿರ್ಧರಿಸಿರುವ ಸಿದ್ದರಾಮಯ್ಯ ಸಂಪುಟದ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ ಎಂದು ಪ್ರಾಂತ ರೈತ ಸಂಘದ ಅಧ್ಯಕ್ಷ ಜಿಸಿ ಬಯ್ಯಾರೆಡ್ಡಿ ಅವರು ತಿಳಿಸಿದ್ದಾರೆ.

ಇದೇ ರೀತಿ ಉಳಿದ ರೈತ ವಿರೋಧಿ ಕೃಷಿ ಕಾಯ್ದೆಗಳಾದ ಕರ್ನಾಟಕ ರಾಜ್ಯ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020, ಕರ್ನಾಟಕ ಜಾನುವಾರು ಸಂರಕ್ಷಣಾ ಹಾಗೂ ಹತ್ಯೆ ನಿಷೇಧ ಕಾಯ್ದೆ 2020, ಕರ್ನಾಟಕ ರಾಜ್ಯ ಭೂ ಸ್ವಾಧೀನ ಕಾಯ್ದೆ 2019 ಅನ್ನು ಕೂಡ ರದ್ದುಪಡಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಬಿಜೆಪಿ ವಿರುದ್ಧ ಆಕ್ರೋಶ
ರಾಜ್ಯದಲ್ಲಿ ಕೃಷಿಯನ್ನೆ ನಂಬಿಕೊಂಡ ಕಟುಂಬಗಳು ಹೆಚ್ಚಿವೆ. ಅಂತಹ ಕೃಷಿ ನಾಶ ಮಾಡಿ ,ಕಾರ್ಪೊರೇಟ್ ಕೃಷಿ ಉತ್ತೇಜಿಸುವ ಉದ್ದೇಶ ಸಾಧನೆಗೆ ತಂದಿದ್ದ ಕೇಂದ್ರ ಕೃಷಿ ಕಾಯ್ದೆಗಳು ರದ್ದಾದ ನಂತರವೂ ಅದೇ ಉದ್ದೇಶದ ರಾಜ್ಯ ಕೃಷಿ ಕಾಯ್ದೆಗಳು ಮುಂದುವರೆಸಿದ್ದನ್ನು ರಾಜ್ಯದ ರೈತರು ಪ್ರಬಲವಾಗಿ ವಿರೋಧಿಸಿದ್ದರು ಎಂದು ಸಂಘ ಬಿಜೆಪಿ ವಿರುದ್ಧ ಬಯ್ಯಾರೆಡ್ಡಿ ಅವರು ಆಕ್ರೋಶ ಹೊರ ಹಾಕಿದ್ದಾರೆ.

ಕೃಷಿ ಬಿಕ್ಕಟ್ಟುನ್ನು ತೀವ್ರಗೊಳಿಸುವುದು, ರಾಜ್ಯದ ರೈತರಿಗೆ ಬೆಂಬಲ ಬೆಲೆ ನಿರಾಕರಿಸುವ ವ್ಯಾಪಾರಿಗಳ ಮರ್ಜಿಗೆ ರೈತರನ್ನು ದಯನೀಯವಾಗಿ ನೂಕುವ ಎಪಿಎಂಸಿ ತಿದ್ದುಪಡಿ ಕಾಯ್ದೆ 2020 ರದ್ದತಿ ನಿರ್ಧಾರ ರೈತ ಹೋರಾಟಕ್ಕೆ ಸಂದ ಜಯವಾಗಿದೆ. ದುರ್ಬಲ ಗೊಂಡಿರುವ ಎಪಿಎಂಸಿ ಯನ್ನು ಬಲಪಡಿಸಬೇಕಿದೆ. ಅದನ್ನು ರೈತ ಸ್ನೇಹಿಯಾಗಿಸಲು, ಎಪಿಎಂಸಿ ಸೆಸ್ ಮೂಲಕ ಸಂಗ್ರಹವಾಗುವ ಅವರ್ಥ ನಿಧಿ ಯನ್ನು ಸಮರ್ಥವಾಗಿ ರೈತರ ಹಿತ ರಕ್ಷಣೆಗೆ ಬಳಸಬೇಕು. ಈ ಕುರಿತು ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಸಮಿತಿ ಮುಖ್ಯಸ್ಥರು ಕಾಂಗ್ರೆಸ್ ಸರ್ಕಾರ ಬಳಿ ಮನವಿ ಮಾಡಿದೆ.
ಪೂರ್ಣ ವ್ಯಾಪ್ತಿಗೆ ಎಪಿಎಂಸಿ ಸಮಿತಿಗಳ ಅಧಿಕಾರವನ್ನು ಪುನರ್ ಸ್ಥಾಪಿಸುವ ಈ ರದ್ದತಿ ಒಂದೇ ಎಪಿಎಂಸಿ ಬಲಪಡಿಸಲು ಸಾಕಾಗುವುದಿಲ್ಲ. ಉದಾರೀಕರಣ ನೀತಿಗಳ ಒತ್ತಡಕ್ಕೆ ತಂದಿರುವ ಖಾಸಗೀ ಕಂಪನಿಗಳ ಪರವಾದ ಈ ಹಿಂದಿನ ತಿದ್ದಪಡಿಗಳಾದ ಆನ್ ಲೈನ್ ಮಾರಾಟ ,ಕೋಲ್ಡ್ ಸ್ಟೋರೇಜ್ ,ಹಣ್ಣು-ತರಕಾರಿ ಮಾರುಕಟ್ಟೆ ಯಲ್ಲಿ ಎಪಿಎಂಸಿ ಯನ್ನು ಬೈ ಪಾಸ್ ಮಾಡುವ ರೈತ ವಿರೋಧಿ ತಿದ್ದುಪಡಿ ಗಳು ಕೂಡ ರದ್ದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಒತ್ತಾಯಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications