ಕೆಪಿಎಸ್ಸಿ ಸಂದರ್ಶನದ ಅನುಪಾತ 1:5ಕ್ಕೆ ಹೆಚ್ಚಳ
ಬೆಂಗಳೂರು, ಆಗಸ್ಟ್ 23 : ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆಗಾಗಿ ನಡೆಸುವ ಸಂದರ್ಶನದ ಅನುಪಾತವನ್ನು 1 : 5ಕ್ಕೆ ಹೆಚ್ಚಿಸಲು ಮುಂದಾಗಿದೆ. ಇದರಿಂದಾಗಿ ಗ್ರಾಮೀಣ ಮತ್ತು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಸಹಾಯಕವಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕರ್ನಾಟ ಲೋಕಸೇವಾ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ನಿರ್ದೇಶ ನೀಡಲಾಗಿದೆ. ಈಗಿರುವ 1:3 ಅನುಪಾತವನ್ನು 1:5ಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳು ಸೂಚನೆ ಕೊಟ್ಟಿದ್ದಾರೆ.[KPSC ಅಧ್ಯಕ್ಷರಾಗಿ ಶ್ಯಾಂ ಭಟ್ ನೇಮಕ]
ಲೋಕಸೇವಾ ಆಯೋಗ ನಡೆಸುವ ಮುಖ್ಯಪರೀಕ್ಷೆಉಲ್ಲಿ ಉತ್ತೀರ್ಣರಾದವರನ್ನು ಸಂದರ್ಶನಕ್ಕೆ ಆಹ್ವಾನಿಸುವಾಗ 1:3 ಅನುಪಾತವಿದೆ. ಅಂದರೆ, 1 ಹುದ್ದೆಗೆ ತಲಾ ಮೂವರು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತಿತ್ತು. ಸಂದರ್ಶನದಲ್ಲಿಗಳಿಸುವ ಅಂಕ ಆಧರಿಸಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿತ್ತು.[ಕನ್ನಡದಲ್ಲೇ ಯುಪಿಎಸ್ಸಿ ಬರೆದ ಭೈರಪ್ಪ ಸಂದರ್ಶನ]
ಈ ಅನುಪಾತವನ್ನು 1:5ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಗಳು ಸೂಚನೆ ಕೊಟ್ಟಿದ್ದಾರೆ. ಇದರಿಂದಾಗಿ ಹೆಚ್ಚಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅನುಕೂಲವಾಗುತ್ತದೆ. ಎಲ್ಲ ವರ್ಗಗಳು ಅದರಲ್ಲೂ ವಿಶೇಷವಾಗಿ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಇದರಿಂದ ಸಹಾಯಕವಾಗಲಿದೆ.