IAS transfer; KPSC ಕಾರ್ಯದರ್ಶಿ ಲತಾ ಕುಮಾರಿ ವರ್ಗಾವಣೆ
ಬೆಂಗಳೂರು, ಮಾರ್ಚ್ 05: ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಸರ್ಕಾರ ಕೆಪಿಎಸ್ಸಿ ಕಾರ್ಯದರ್ಶಿ, ಐಎಎಸ್ ಅಧಿಕಾರಿ ಕೆ. ಎಸ್. ಲತಾ ಕುಮಾರಿ ವರ್ಗಾವಣೆ ಮಾಡಿದೆ. ಈ ಹಿಂದೆ ಅವರಿಗೆ 10 ದಿನಗಳ ಗಳಿಕೆ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
ಮಂಗಳವಾರ ಕರ್ನಾಟಕ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ಯ ಕಾರ್ಯದರ್ಶಿ, ಕೆ. ಎಸ್. ಲತಾ ಕುಮಾರಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆಗೊಳಿಸಿ ಆದೇಶಿಸಿದೆ.

ಡಾ. ರಾಕೇಶ್ ಕುಮಾರ್ ಕೆ. (ಕೆಎನ್; 2012) ಆಯುಕ್ತರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಇವರನ್ನು ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಕೆ. ಎಸ್. ಲತಾ ಕುಮಾರಿ ಅವರನ್ನು ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
10 ದಿನಗಳ ಕಾಲ ಕೆ. ಎಸ್. ಲತಾ ಕುಮಾರಿ ಅವರಿಗೆ ಗಳಿಕೆ ರಜೆ ನೀಡಿದ್ದಾಗಲೇ ಭಾರೀ ವಿರೋಧ ವ್ಯಕ್ತವಾಗಿತ್ತು. ಕೆಪಿಎಸ್ಸಿಯಲ್ಲಿ ಎಲ್ಲವೂ ಸರಿ ಇಲ್ಲವೇ? ಎಂಬ ಪ್ರಶ್ನೆ ಮೂಡಿತ್ತು. ಅಧ್ಯಕ್ಷರು ಸದಸ್ಯರ ಜಟಾಪಟಿ ಕಾರಣಕ್ಕೆ ಕಾರ್ಯದರ್ಶಿಗೆ ರಜೆ ನೀಡಲಾಗಿದೆ ಎಂಬ ಮಾತು ಕೇಳಿ ಬಂದಿತ್ತು.
ಫೆಬ್ರವರಿ 8ರಂದು ಕೆ. ಎಸ್. ಲತಾ ಕುಮಾರಿ ಅವರಿಗೆ ರಜೆ ನೀಡಿದ್ದ ಸರ್ಕಾರ ಕೆಪಿಎಸ್ಸಿ ಕಾರ್ಯದರ್ಶಿಯಾಗಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಕೆ. ಪ್ರಭಾರಿಯಾಗಿ ಇರಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಿತ್ತು. ಈಗ ರಾಕೇಶ್ ಕುಮಾರ್ ಕೆ. ಅವರಿಗೆ ಕೆಪಿಎಸ್ಸಿ ಕಾರ್ಯದರ್ಶಿಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಕರ್ನಾಟಕ ಸರ್ಕಾರ 2023ರ ಸೆಪ್ಟೆಂಬರ್ನಲ್ಲಿ ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿತ್ತು. ಬಳಿಕ ಕೆಪಿಎಸ್ಸಿ ಕಾರ್ಯದರ್ಶಿಯಾಗಿ ಕೆ. ಎಸ್. ಲತಾ ಕುಮಾರಿ ನೇಮಕ ಮಾಡಿತ್ತು. ಕೆಪಿಎಸ್ಸಿ ಅಭ್ಯರ್ಥಿಗಳ ಪರವಾಗಿ ಹಲವಾರು ನಿರ್ಧಾರಗಳನ್ನು ಕೈಗೊಂಡಿದ್ದ ಲತಾ ಕುಮಾರಿ ಅಧ್ಯಕ್ಷರ ಜೊತೆ ವಿವಿಧ ವಿಚಾರಕ್ಕೆ ಜಟಾಪಟಿ ನಡೆಸಿದ್ದರು.
ಜಟಾಪಟಿ ಜೋರಾದ ಬಳಿಕ ಕಾನೂನು ನಿಯಮಗಳಡಿ ಕೆಪಿಎಸ್ಸಿ ಮತ್ತು ಕಾರ್ಯದರ್ಶಿಗೆ ಇರುವ ಅಧಿಕಾರಗಳ ಬಗ್ಗೆ ಕಾನೂನು ಸಲಹೆ ನೀಡುವಂತೆ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಕಾನೂನು ಆಯೋಗಕ್ಕೆ ಪತ್ರವನ್ನು ಸಹ ಬರೆದಿದ್ದರು. ಈ ಪತ್ರ ಬಹಿರಂಗಗೊಂಡ ಕೆಲವು ದಿನಗಳ ಬಳಿಕ ಲತಾ ಕುಮಾರಿ ಅವರನ್ನು ರಜೆಯ ಮೇಲೆ ಕಳಿಸಲಾಗಿತ್ತು.
ಕೆಪಿಎಸ್ಸಿ ಅಭ್ಯರ್ಥಿಗಳು ಲತಾ ಕುಮಾರಿ ಅವರನ್ನು ರಜೆಯ ಮೇಲೆ ಕಳಿಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು. ಆದರೆ ಈಗ ಅವರನ್ನು ಸರ್ಕಾರ ವರ್ಗಾವಣೆ ಮಾಡುವ ಮೂಲಕ ಕೆಪಿಎಸ್ಸಿಯ ಜಟಾಪಟಿಯನ್ನು ಬಯಲು ಮಾಡಿದೆ.
ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಮತ್ತು ಲತಾ ಕುಮಾರಿ ನಡುವೆ ಕೆಪಿಎಸ್ಸಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯ ನೇಮಕಾತಿ ಪ್ರಕ್ರಿಯೆ ವಿಚಾರದಲ್ಲಿ ಜಟಾಪಟಿ ಆರಂಭವಾಗಿತ್ತು. ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಸಹ ಹೊಸ ಅಧಿಸೂಚನೆಯನ್ನು ಅನುಮತಿ ಇಲ್ಲದೇ ಆಯೋಗದ ಹೆಸರಿನಲ್ಲಿ ಜಾರಿಗೊಳಿಸಲಾಗಿದೆ ಎಂಬುದು ಆರೋಪಿಸಲಾಗಿತ್ತು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications