ಕೆಪಿಟಿಸಿಎಲ್ ನೌಕರರಿಗೆ ಸಂಬಳ ಹೆಚ್ಚಳದ ಸಿಹಿ ನೀಡಿದ ಡಿಕೆಶಿ
ಬೆಂಗಳೂರು, ಮಾರ್ಚ್ 03: ಸರ್ಕಾರದ ಅವಧಿ ಮುಗಿಯುತ್ತಾ ಬಂದಂತೆ ಸರ್ವರನ್ನೂ ಸಂತುಷ್ಠಗೊಳಿಸುವ ಸೂತ್ರವನ್ನು ರಾಜ್ಯ ಸರ್ಕಾರ ಬಳಸುತ್ತಿದೆ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಹೆಚ್ಚಿಸಿ ಆದೇಶ ಹೊರಡಿಸಿದ್ದ ಬೆನ್ನಲ್ಲೆ ಈಗ ಕೆಪಿಟಿಸಿಎಲ್ ನೌಕರರಿಗೆ ಸಂಬಳ ಹೆಚ್ಚಳದ ಸಿಹಿ ಘೋಷಣೆಯಾಗಿದೆ.
ಕೆಪಿಟಿಸಿಎಲ್ ನೌಕರರಿಗೆ ಶೇ26 ರಷ್ಟು ವೇತನವನ್ನು ಹೆಚ್ಚಿಸುವುದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಇದರ ಜೊತೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಇನ್ನು ಮುಂದೆ ಸರ್ಕಾರವೇ ನೇರವಾಗಿ ಸಂಬಳ ಪಾವತಿ ಮಾಡುವ ವ್ಯವಸ್ಥೆಗೆ ಅಸ್ತು ಎನ್ನಲಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಆಯೋಜಿಸಿದ್ದ ಶಿವಮೊಗ್ಗ ವಲಯ ಕಚೇರಿ ಉದ್ಘಾಟನೆ ಮತ್ತು ಇತರ ಕಟ್ಟಡಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೆಪಿಟಿಸಿಎಲ್ ನೌಕರರಿಗೆ ಸಂಬಳ ಹೆಚ್ಚಳ ಆದೇಶವನ್ನು ಮಾರ್ಚ್ 3ರಂದು ಅಧಿಕೃತವಾಗಿ ಹೊರಡಿಸಲಾಗುವುದು ಎಂದಿದ್ದಾರೆ.

ಕೆಪಿಟಿಸಿಎಲ್ ನಲ್ಲಿ 50 ಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ ಶನಿವಾರದಿಂದಲೇ ಸಂಬಳ ಹೆಚ್ಚಳದ ಆದೇಶ ಜಾರಿಯಾಗಿರುವ ಬಗ್ಗೆ ಸಂತಸವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಈಗಾಗಲೇ ಲಕ್ಷಾಂತರ ಮಂದಿ ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ಹೆಚ್ಚಿಸಿ ಚುನಾವಣೆಗೆ ಮತ ಭದ್ರ ಪಡಿಸಿಕೊಂಡಿದೆ. ಈಗ ಕೆಪಿಟಿಸಿಎಲ್ ಸಿಬ್ಬಂದಿಗೂ ಸಂಬಳ ಹೆಚ್ಚಿಸಿರುವುದು ಚುನಾವಣೆಯಲ್ಲಿ ಕಾಂಗ್ರೆಸ್ಗೆ ಇನ್ನಷ್ಟು ಲಾಭ ತರಲಿದೆ.
ಕೆಎಸ್ಆರ್ಟಿಸಿ ಮಾತ್ರ ಬಾಕಿ ಉಳಿದಿದ್ದು, ಅವರಿಗೂ ವೇತನ ಹೆಚ್ಚು ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಗ್ರಾಮೀಣ ಭಾಗದ ಜೊತೆಗೆ ಮಧ್ಯಮ ವರ್ಗವನ್ನೂ ತುಷ್ಠೀಕರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುಂಚೆ ಮತಗಳನ್ನು ಭದ್ರ ಪಡಿಸಿಕೊಳ್ಳುತ್ತಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications