Get Updates
Get notified of breaking news, exclusive insights, and must-see stories!

ಮಾಜಿ ಸ್ಪೀಕರ್ ರಮೇಶ್‌ ಕುಮಾರ್ ವಿಧಾನ ಪರಿಷತ್‌ಗೆ?

ಬೆಂಗಳೂರು, ಮೇ 30: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್‌ 13ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಟಿಕೆಟ್‌ ಪಡೆಯಲು ಭಾರೀ ಪೈಪೋಟಿ ನಡೆದಿದೆ. ಇದರ ನಡುವೆಯೇ ಮಾಜಿ ಸ್ಪೀಕರ್‌ ಅವರನ್ನು ಎಂಎಲ್‌ಸಿ ಮಾಡಬೇಕು ಎಂದು ಬೇಡಿಕೆ ಇಡಲಾಗಿದೆ.

ಮಾಜಿ ಸ್ಪೀಕರ್ ಕೆ. ಆರ್. ರಮೇಶ್ ಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ವಿಧಾನಸಭೆಯಲ್ಲಿ 135 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಪಕ್ಷ ಸುಲಭವಾಗಿ 7 ಸದಸ್ಯರನ್ನು ಪರಿಷತ್‌ಗೆ ಆಯ್ಕೆ ಮಾಡಬಹುದು.

KR Ramesh Kumar May Get Legislative Council Election Ticket

ವಿಧಾನ ಪರಿಷತ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ & ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಆದರೆ ಪಟ್ಟಿಗೆ ಇನ್ನೂ ರಾಹುಲ್ ಗಾಂಧಿ ಒಪ್ಪಿಗೆ ಸಿಕ್ಕಿಲ್ಲ ಎಂಬ ಮಾಹಿತಿ ಇದೆ.

ರಮೇಶ್‌ ಕುಮಾರ್ ಆಯ್ಕೆ ಮಾಡಿ: ಮಾಜಿ ಸ್ಪೀಕರ್ ರಮೇಶ್‌ ಕುಮಾರ್ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿ ಎಂದು ಕೋಲಾರ, ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳ ಕಾಂಗ್ರೆಸ್ ನಾಯಕರು ಬೇಡಿಕೆ ಇಟ್ಟಿದ್ದಾರೆ.

ಮೇ 28ರಂದು ಮಾಜಿ ಸಚಿವ ರಮೇಶ್‌ ಕುಮಾರ್‌ ಸೇರಿದಂತೆ ಕೋಲಾರ ಜಿಲ್ಲೆಯ ಪ್ರಮುಖ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ರನ್ನು ಗೃಹಕಚೇರಿಯಲ್ಲಿ ಭೇಟಿಮಾಡಿ, ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ.

ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, "ರಮೇಶ್ ಕುಮಾರ್ ಅವರನ್ನು ಎಂಎಲ್‌ಸಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದೇವೆ. ಕೋಲಾರ-ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳ ಶಾಸಕರು ಹೋಗಿ ಈ ಕುರಿತು ಬೇಡಿಕೆ ತಿಳಿಸಿದ್ದೇವೆ" ಎಂದು ಹೇಳಿದ್ದಾರೆ.

"ಮಾಜಿ ಸಚಿವ ಶ್ರೀನಿವಾಸ ಗೌಡ ಅವರು ಕೂಡಾ ವಿಧಾನ ಪರಿಷತ್ ಸದಸ್ಯರಾಗಲು ಅರ್ಹರಿದ್ದಾರೆ. ಅವರಿಗೆ ಕೊಟ್ಟರೂ ಸ್ವಾಗತ ಮಾಡುತ್ತೇವೆ. ಆದರೂ ರಮೇಶ್ ಕುಮಾರ್ ಅವರನ್ನು ಎಂಎಲ್‌ಸಿ ಮಾಡಿ ಎಂದು ಹೈಕಮಾಂಡ್ ಬಳಿ ಮನವಿ ಮಾಡಿದ್ದೇವೆ" ಎಂದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಶಾಸಕರಿಗೆ ವಿಧಾನ ಪರಿಷತ್ ಸ್ಥಾನ ನೀಡಬಾರದು ಎಂಬ ಕೂಗು ಕಾಂಗ್ರೆಸ್‌ನಲ್ಲಿದೆ. ಆದರೆ ಹಿರಿತನ ಆಧಾರದ ಮೇಲೆ ರಮೇಶ್‌ ಕುಮಾರ್ ಎಂಎಲ್‌ಸಿ ಆಗಬಹುದು ಎಂಬ ಮಾತಿದೆ. ಆದರೆ ಈ ಕುರಿತು ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೋಲಾರದ ಶ್ರೀನಿವಾಸಪುರ ಕ್ಷೇತ್ರದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದ ಕೆ. ಆರ್. ರಮೇಶ್ ಕುಮಾರ್ 2023ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಟಿಕೆಟ್ ಪಡೆದಿದ್ದರು. ಆದರೆ ಚುನಾವಣೆಯಲ್ಲಿ 85020 ಮತಗಳನ್ನು ಪಡೆದು, 95463 ಮತಗಳನ್ನು ಪಡೆದ ಜೆಡಿಎಸ್‌ನ ಜಿ. ಕೆ. ವೆಂಕಟರೆಡ್ಡಿ ವಿರುದ್ಧ ಸೋಲು ಕಂಡರು.

ಸಚಿವರಾಗಿ, ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ ಮಾಡಿರುವ ರಮೇಶ್ ಕುಮಾರ್ ಅಪಾರ ರಾಜಕೀಯ ಅನುಭವ ಹೊಂದಿದ್ದಾರೆ. ಅವರನ್ನು ಪರಿಷತ್‌ಗೆ ಆಯ್ಕೆ ಮಾಡಿ ಕಳಿಸಿದರೆ ಪರಿಷತ್‌ನಲ್ಲಿ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸರಿಯಾದ ವ್ಯಕ್ತಿ ಸಿಗಲಿದ್ದಾರೆ ಎಂಬ ಲೆಕ್ಕಾಚಾರವಿದೆ.

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಜೂನ್ 3 ಕೊನೆಯ ದಿನವಾಗಿದೆ. ಇಂದು ಮಧ್ಯಾಹ್ನ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ ಅಥವ ಶುಕ್ರವಾರ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+