ಕಾನೂನು ಮೀರಿ ಕೇಸ್ ತೆಗೆದುಕೊಳ್ಳುವಂತಿಲ್ಲ; ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಕೃಷ್ಣ ಬೈರೇಗೌಡ
ಬೆಂಗಳೂರು ಆಗಸ್ಟ್ 16: ಜನರ ನ್ಯಾಯಬದ್ಧ ಹಕ್ಕುಗಳನ್ನು ಅಧಿಕಾರಿಗಳು ಮೊಟಕುಗೊಳಿಸಲು ಸಾಧ್ಯವಿಲ್ಲ. ಹಾಗೆಂದು ಎಲ್ಲಾ ಪ್ರಕರಣಗಳನ್ನೂ ಮನಸ್ಸೋ ಇಚ್ಚೆ ಸ್ವೀಕರಿಸುವುದೂ ಸರಿಯಲ್ಲ ಎಂದು ಉಪ ವಿಭಾಗಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದರು.
ಶನಿವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, "ಕೆಲ ಅಧಿಕಾರಿಗಳು ಕಾನೂನು ಮೀರಿ ತಮ್ಮ ವ್ಯಾಪ್ತಿಗೆ ಬರದ ಸಿವಿಲ್ ಮೊಕದ್ದಮೆಗಳನ್ನೂ ದಾಖಲಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇದು ಸರಿಯಲ್ಲ. ಸಾರ್ವಜನಿಕರಿಗೆ ತಮ್ಮ ಸಿವಿಲ್ ಮೊಕದ್ದಮೆಗಳು ಎಸಿ ನ್ಯಾಯಾಲಯದಲ್ಲೇ ಮುಕ್ತಾಯವಾಗಲಿ ಎಂಬ ಅಭಿಲಾಷೆ ಇರುತ್ತದೆ. ನಾಗರೀಕರಿಗೆ ಕಾನೂನು ರೀತಿ ನೀಡಲಾದ ಹಕ್ಕನ್ನು ಯಾರೂ ಮೊಟಕುಗೊಳಿಸುವುದು ಸಾಧ್ಯವಿಲ್ಲ. ಆದರೆ ಸಿವಿಲ್ ನ್ಯಾಯಾಲಯಗಳಲ್ಲಿ ವಿಚಾರಣೆಗೊಳಪಡಬೇಕಾದ ಪ್ರಕರಣಗಳನ್ನು ನಿಯಮ ಮೀರಿ ದಾಖಲಿಸಿಕೊಳ್ಳಲು ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ಕಿಡಿಕಾರಿದರು.

ಬಹುತೇಕ ಎಲ್ಲಾ ಅಧಿಕಾರಿಗಳೂ ತುಂಬಾ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಗೇ ಹೋದ್ರೂ ಜನ ಇಲಾಖೆಯಲ್ಲಿ ಆಗುತ್ತಿರುವ ಒಳ್ಳೆಯ ಜನಸ್ನೇಹಿ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಆದರೆ, ಯಾರೋ ಕೆಲ ಅಧಿಕಾರಿಗಳಿಂದ ಉತ್ತಮ ಕೆಲಸ ಮಾಡುತ್ತಿರುವವರಿಗೂ ಕೆಟ್ಟ ಹೆಸರು ಬರುತ್ತಿದೆ. ಅಂತಹ ಬೇಜವಾಬ್ದಾರಿ ಅಧಿಕಾರಿಗಳನ್ನು ಸರಿ ದಾರಿಗೆ ತರುವುದು ಹೇಗೆ ಎಂತಲೂ ನಮಗೆ ಗೊತ್ತಿದೆ" ಎಂದೂ ಸಭೆಯಲ್ಲಿ ಪುನರುಚ್ಚರಿಸಿದರು.
ಕೆಲವು ಉಪ ವಿಭಾಗಾಧಿಕಾರಿಗಳು ತಮ್ಮ ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿ ಕಾನೂನು ಮೀರಿ ಆದೇಶ ಹೊರಡಿಸಿರುವುದು ಕಂಡುಬಂದಿದೆ ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು. ಎಸಿ ಗಳು ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶಗಳು ನ್ಯಾಯ ಸಮ್ಮತವಾಗಿಲ್ಲ. ರಾಜ್ಯದ ಐದು ಜಿಲ್ಲೆಗಳ ಎಸಿಗಳು ಅಧಿಕಾರ ಮೀರಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವಿಚಾರಣೆಗೆ ಸೂಚಿಸಲಾಗಿದ್ದು, ವರದಿ ಕೈಸೇರಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಕಾನೂನು ಮೀರಿ ವರ್ತಿಸಿದರೆ ನಾವೂ ಸಹ ಏನೂ ಮಾಡಲಾಗುವುದಿಲ್ಲ. ನಾಳೆ ನೀವುಗಳು ಕೋರ್ಟ್ ಮೊರೆ ಹೋದರೆ ನಾವೂ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಲೂ ಸಿದ್ದರಿದ್ದೇವೆ ಎಂದರು.
ಮುಂದಿನ ದಿನಗಳಲ್ಲಿ ಉಪ ವಿಭಾಗಾಧಿಕಾರಿಗಳು ತಮ್ಮ ಆದೇಶ ಪ್ರತಿಯಲ್ಲಿ ಎಲ್ಲಾ ಪ್ರಕರಣಗಳನ್ನೂ ಯಾವ ಕಾಯ್ದೆ ಮತ್ತು ಸೆಕ್ಷನ್ ಅಡಿಯಲ್ಲಿ ಆರ್ಡರ್ ಮಾಡಲಾಗಿದೆ? ಅದನ್ನು ಮಾಡೋಕೆ ಕಾನೂನಲ್ಲಿ ತಮಗೆ ಅಧಿಕಾರ ಇದೆಯಾ? ಎಂಬ ಮಾಹಿತಿಯನ್ನೂ ಸ್ಪಷ್ಟವಾಗಿ ನಮೂದಿಸಬೇಕು ಎಂದು ಸೂಚಿಸಿದರು. ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಎರಡು ತಿಂಗಳಲ್ಲಿ ಮುಗಿಸೇಕು ಎಂದು ಗುರಿ ನಿಗದಿಪಡಿಸಿದರೆ, ಆರು ತಿಂಗಳಾದರೂ ಗುರಿ ಮುಟ್ಟಲು ಸಾಧ್ಯವಾಗದೆ ಇರುವುದು ಸರಿಯಲ್ಲ. ಹೀಗಾಗಿ ಶೀಘ್ರ ಎಲ್ಲಾ ಬಾಕಿ ಪ್ರಕರಣಗಳನ್ನೂ ಇತ್ಯರ್ಥಗೊಳಿಸಬೇಕು" ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಗ್ರಹಿಸಿದರು.
ಎಸಿ ನ್ಯಾಯಾಲಯಗಳಲ್ಲಿ ಆರು ತಿಂಗಳ ಅವಧಿ ಮೀರಿದ 18,000 ಪ್ರಕರಣಗಳು ಬಾಕಿ ಇವೆ. ಒಂದು ವರ್ಷ ಮೀರಿದ 14,000 ಹಾಗೂ ಐದು ವರ್ಷಕ್ಕೂ ಮೇಲ್ಪಟ್ಟ 4,000 ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳನ್ನು ಏನಾದರೂ ಮಾಡಿ ನ್ಯಾಯಬದ್ಧ ಇತ್ಯರ್ಥಕ್ಕೆ ಒಳಪಡಿಸಲೇಬೇಕು. ಅಲ್ಲದೆ, ನಾಲ್ಕು ತಿಂಗಳಿಗಿಂತ ಅಧಿಕ ಅವಧಿಗೆ ಎಸಿ ನ್ಯಾಯಾಲಯದಲ್ಲಿ ಯಾವ ಪ್ರಕರಣಗಳನ್ನೂ ಉಳಿಸಿಕೊಳ್ಳಬಾರದು" ಎಂದು ಅವರು ತಾಕೀತು ಮಾಡಿದರು.
ಸಭೆ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ಎಸಿ ಸುದರ್ಶನ ಅವರನ್ನು ಸಚಿವ ಕೃಷ್ಣ ಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಆರಂಭಿಸುತ್ತಿದ್ದಂತೆ ಉಪ ವಿಭಾಗಾಧಿಕಾರಿಗಳಾದ ಸುದರ್ಶನ್ ಮೊಬೈಲ್ನಲ್ಲಿ ಮಾತನಾಡುತ್ತಾ ತಲ್ಲೀನರಾಗಿದ್ದರು. ಈ ವೇಳೆ ಅಧಿಕಾರಿ ವರ್ತನೆ ವಿರುದ್ಧ ಬೇಸರ ಹೊರಹಾಕಿದ ಸಚಿವರು, "ಸ್ವಾಮಿ ನೀವು ನನಗೆ ಗೌರವ ನೀಡುವ ಅವಶ್ಯಕತೆ ಇಲ್ಲ. ಕನಿಷ್ಟ ನನ್ನ ಕುರ್ಚಿಗಾದರೂ ಗೌರವ ನೀಡಿ. ನಾನು ನನ್ನ ಸ್ವಂತ ಕೆಲಸಕ್ಕಾಗಿ ಸಭೆ ನಡೆಸುತ್ತಿಲ್ಲ. ಇಲಾಖೆಯನ್ನು ಜನಸ್ನೇಹಿಗೊಳಿಸುವ ಸಂಬಂಧ ಈ ಸಭೆ ನಡೆಸಲಾಗುತ್ತಿದ್ದು ಅದಕ್ಕಾದರೂ ಚೂರು ಗೌರವ ಇರಲಿ ಎಂದು ಮನವಿ ಮಾಡಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications