ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ: ಆಕ್ರೋಶ ಹೊರಹಾಕಿದ ಕೃಷ್ಣ ಬೈರೇಗೌಡ
ಬೆಂಗಳೂರು, ಮೇ 18: ಮಾಜಿ ಸಚಿವ ಕೃಷ್ಣ ಬೈರೇಗೌಡ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಾಯಕರ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ. ಹೈಕೋರ್ಟ್ ಆದೇಶದ ಪರಿಣಾಮವಾಗಿ ರಾಜ್ಯಕ್ಕೆ ಆಮ್ಲಜನಕ ಪೂರೈಕೆಯಾಗುತ್ತಿದೆ. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸುಪ್ರೀಂ ಕೋರ್ಟ್ ಮೊರೆ ಹೋದರೂ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯಿತು. ಆದರೆ ರಾಜ್ಯ ನಾಯಕರು ಪ್ರಧಾನಿಯೇ ಆಕ್ಸಿಜನ್ ಕೊಟ್ಟಿದ್ದಾರೆ ಎಂದು ಪೋಸ್ ಕೊಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ರಾಜ್ಯಕ್ಕೆ ಅಗತ್ಯವಿರುವ 1200 ಮೆಟ್ರಿಕ್ ಟನ್ ಆಮ್ಲಜನಕದ ಬದಲಿಗೆ ಈಗಲೂ ಕೇಂದ್ರದಿಂದ 730 ಮೆಟ್ರಿಕ್ ಟನ್ ಆಕ್ಸಿಜನ್ ಮಾತ್ರವೇ ಪೂರೈಕೆಯಾಗುತ್ತಿದೆಎಂದಿದ್ದಾರೆ.
ಇನ್ನು ಚಾಮರಾಜನಗರದ ಆಮ್ಲಜನಕ ದುರಂತದ ಬಗ್ಗೆಯೂ ಪ್ರಸ್ತಾಪಿಸಿದ ಕೃಷ್ಣ ಬೈರೇಗೌಡ ಈ ದುರ್ಘಟನೆಯಲ್ಲಿ 3 ಜನ ಮಾತ್ರವೇ ಸಾವನ್ನಪ್ಪಿದ್ದಾರೆ ಎಂದು ಸಚಿವರು ಹೇಳಿದ್ದರು. ಆಗ ನ್ಯಾಯಮೂರ್ತಿಗಳೇ 26 ಸಾವು ಎಂದು ಉಲ್ಲೇಖಿಸಿದ್ದಾರೆ. ಆದರೆ ನಂತರ ಸತ್ಯ ಹೊರಬಂದಿದ್ದಕ್ಕೆ ಅವರು ಸರ್ವಜ್ಞರಲ್ಲ ಎನ್ನುತ್ತಿದ್ದಾರೆ. ಈಗ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಬದಲಾವಣೆಗೆ ಕೆಲವರು ಪ್ರಯತ್ನ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಸತ್ಯ ಬಹಿರಂಗಪಡಿಸಿದ ಕಾರಣಕ್ಕೆ ಅವರ ಮೇಲೆ ಮುಗಿಬಿದ್ದಿದ್ದಾರೆ ಎಂದು ಕೃಷ್ಣ ಬೈರೇಗೌಡ ಆರೋಪವನ್ನು ಮಾಡಿದ್ದಾರೆ.

ಕಾಳಸಂತೆಯಲ್ಲಿ ಮಾರಾಟ
ಇದೇ ಸಂದರ್ಭದಲ್ಲಿ ರೆಮಿಡಿಸಿವಿರ್ ವಿಚಾರವಾಗಿ, ನಮ್ಮವರೇ ಕೇಂದ್ರದಲ್ಲಿ ರಾಸಾಯನಿಕ ಸಚಿವರಾಗಿದ್ದಾರೆ. ಆದರೆ ರಾಜ್ಯಕ್ಕೆ ರೆಮಿಡಿಸಿವಿರ್ ಕೊಡಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ. ಕಾಳಸಂತೆಯಲ್ಲಿ ರೆಮಿಡಿಸಿವಿರ್ಮಾರಾಟವಾಗುತ್ತಿದ್ದು ಬಿಜೆಪಿ ಶಾಸಕರೇ ಬ್ಲಾಕ್ ಮಾರ್ಕೆಟ್ನಲ್ಲಿ ಖರೀದಿಸಿ ಅದನ್ನು ಹಂಚಿದ್ದಾರೆ. ಆದರೆ ಯಾವ ಶಾಸಕರು ಅಂತ ನಾನು ಹೇಳಲ್ಲ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಹಣಕಾಸು ಆಯೋಗದ ಶಿಫಾರಸಿಗೆ ಅಡ್ಡಿ
ಇನ್ನು ರಾಜ್ಯಕ್ಕೆ 5 ಸಾವಿರ ಕೋಟಿ ನೀಡಲು ಹಣಕಾಸು ಆಯೋಗವೇ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅದನ್ನ ತಡೆದು ಶಿಫಾರಸನ್ನು ವಾಪಸ್ ಪಡೆಯಿರಿ ಎಂದು ಕಳುಹಿಸಿದ್ದಾರೆ. ಇವರು ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿ ಹೋದವರು ಎಂದು ಅವರು ಕಿಡಿಕಾರಿದರು.

ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ
ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಡಬಲ್ ಎಂಜಿನ್ ಸರ್ಕಾರಗಳು ವಿಫಲವಾಗಿದೆ. ಬ್ರೋಕನ್ ಎಂಜಿನ್ ಮಧ್ಯೆ ನಾವು ಸಿಲುಕಿದ್ದೇವೆ ಎಂದು ಕೃಷ್ಣ ಬೈರೇಗೌಡ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿಲುವುಗಳ ಬಗ್ಗೆ ಆಕ್ರೋಶವನ್ನು ಹೊರಹಾಕಿದ್ದಾರೆ.
Recommended Video

ದೀಪ ಹಚ್ಚಿ ಎಂದಾಗ ವಿರೋಧಿಸಿದ್ದೆವಾ?
ಲಸಿಕೆ ವಿಚಾರದಲ್ಲಿ ಕೈ ನಾಯಕರ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ಚಪ್ಪಾಳೆ ಹೊಡೆಯಿರಿ ಎಂದಾಗ ಹೊಡೆಯಲಿಲ್ವೇ? ದೀಪ ಹಚ್ಚಿ ಅಂದಾಗ ನಾವು ವಿರೋಧ ಮಾಡಿದೆವಾ? ವ್ಯಾಕ್ಸಿನ್ಗೆ ನಾವು ವಿರೋಧ ಪಡಿಸಲಿಲ್ಲ. ಫೆಬ್ರವರಿ,ಮಾರ್ಚ್ ನಲ್ಲಿ ಎಷ್ಟು ವ್ಯಾಕ್ಸಿನ್ ಬಂತು? ಕೊರೊನಾಗೆ ಸಾವು ಉಣಿಸಿದ್ದೇವೆಂದು ಕುಣಿದಾಡಿದ್ರು. ಆಗ ಮೈಮರೆತು ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದೀರಿ. ಫೆಬ್ರವರಿಯಲ್ಲಿ ವ್ಯಾಕ್ಸಿನ್ ಕಂಪನಿ ಆರ್ಡರ್ ಕೊಡುವಂತೆ ಕೇಳಿಕೊಂಡಿದೆ. ಆಗ ಯಾವುದೇ ಆರ್ಡರ್ ಕೊಡಲಿಲ್ಲ. ಇವತ್ತು ಬಿಜೆಪಿ ಮುಖವಾಡ ಕಳಚಿಬಿದ್ದಿದೆ. ಒಳ್ಳೆಯದಾದರೆ ಮಾತ್ರ ಎಲ್ಲರೂ ಫೋಟೋಗೆ ಫೋಸ್ ಕೊಡ್ತಾರೆ. ಎಡವಟ್ಟಾದರೆ ಬೇರೆಯವರ ಮೇಲೆ ಹಾಕಿ ನುಣುಚಿಕೊಂಡು ಓಡಿಹೋಗ್ತಾರೆ. ಜನರ ಪ್ರಾಣ ಉಳಿಸುವ ಕೆಲಸ ಮಾಡ್ತಿಲ್ಲ ಎಂದು ಕೃಷ್ಣ ಬೈರೇಗೌಡ ಟೀಕಿಸಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications