ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣಾ ನದಿಗೆ ನೀರು : ಶೀಘ್ರದಲ್ಲೇ ಕುಮಾರಸ್ವಾಮಿ, ಫಡ್ನವೀಸ್ ಸಭೆ

|
Google Oneindia Kannada News

ಬೆಂಗಳೂರು, ಮೇ 31 : ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿಸುವ ಕುರಿತು ಶೀಘ್ರದಲ್ಲಿಯೇ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ತೆರಳಿದ್ದ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ.

ಬರ ಪೀಡಿತ ಕೋಲಾರಕ್ಕೆ ಕೆ.ಸಿ.ವ್ಯಾಲಿ ನೀರು ವರದಾನಬರ ಪೀಡಿತ ಕೋಲಾರಕ್ಕೆ ಕೆ.ಸಿ.ವ್ಯಾಲಿ ನೀರು ವರದಾನ

ಉಭಯ ರಾಜ್ಯಗಳ ನಡುವೆ ಶಾಶ್ವತ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಪ್ರಾಥಮಿಕ ಹಂತದ ಸಮಾಲೋಚನೆ ನಡೆಸಿದರು.

ಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳುಬರ ಪರಿಸ್ಥಿತಿ ನಿರ್ವಹಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳು

 Kumaraswamy

ಕರ್ನಾಟಕದ ಪ್ರಸ್ತಾವನೆಗೆ ಮಹಾರಾಷ್ಟ್ರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕೃಷ್ಣಾ ನದಿ ನೀರು ಹಂಚಿಕೆ ಕುರಿತು ವಿವರವಾಗಿ ಮಾತುಕತೆ ನಡೆಸಲು ಸಮಯ ನಿಗದಿಪಡಿಸುವುದಾಗಿ ದೇವೇಂದ್ರ ಫಡ್ನವೀಸ್ ಅವರು ಭರವಸೆ ನೀಡಿದ್ದಾರೆ.

ರಾಜ್ಯದ ಬರ ಜಿಲ್ಲೆಗಳಲ್ಲಿ ಮೋಡ ಬಿತ್ತನೆಗೆ ಸರ್ಕಾರ ಸಿದ್ಧತೆರಾಜ್ಯದ ಬರ ಜಿಲ್ಲೆಗಳಲ್ಲಿ ಮೋಡ ಬಿತ್ತನೆಗೆ ಸರ್ಕಾರ ಸಿದ್ಧತೆ

ಭೀಮಾ ನದಿಗೆ ನೀರು : ಪ್ರಸ್ತುತ ಕರ್ನಾಟಕದಲ್ಲಿನ ತೀವ್ರ ಬರಗಾಲದ ಹಿನ್ನಲೆಯಲ್ಲಿ ಮಹಾರಾಷ್ಟ್ರದಿಂದ ಭೀಮಾ ನದಿಗೆ 1 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದ ಉಜನಿಯಿಂದ ಗುರುವಾರ 1 ಟಿಎಂಸಿ ನೀರು ಬಿಡಲಾಗಿದ್ದು, ಅದು ಲಚ್ಯಾಣ ಸಮೀಪದ ಭೀಮಾ ನದಿಯ ಹಿಂಗಣಿ ಬಾಂದಾರಕ್ಕೆ ಬಂದು ತಲುಪಿದೆ.

English summary
Karnataka Chief Minister H.D.Kumaraswamy held a brief talk with Maharashtra CM Devendra Fadnavis in the issue of Krishna waters to the state. Devendra Fadnavis agreed to fix meeting to discuss the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X