ಕೃಷ್ಣಯ್ಯ ಶೆಟ್ಟರಿಗೆ ತೆರೆಯಿತು ಕಾಂಗ್ರೆಸ್ ಬಾಗಿಲು!
ಬೆಂಗಳೂರು, ಮಾ. 24 : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಮತ್ತೊಮ್ಮೆ ಕಾಂಗ್ರೆಸ್ ಬಾಗಿಲು ತೆರೆದಿದೆ. ಕಾಂಗ್ರೆಸ್ ಹೈ ಕಮಾಂಡ್ ನಾಯಕರು ಕೃಷ್ಣಯ್ಯ ಶೆಟ್ಟಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ನೀಡಿದ್ದಾರೆ. ಇದರಿಂದ ಕೋಲಾರ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರ ಬಲ ಹೆಚ್ಚಲಿದೆ.
ಕರ್ನಾಟಕದ ವಿಧಾನಸಭೆ ಚುನಾವಣೆಯ ಕಳೆದ ಬಳಿಕ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಮಧ್ಯಸ್ಥಿಕೆಯಲ್ಲಿ ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ, ಕೆಪಿಸಿಸಿ ಹಾಗೂ ಎಐಸಿಸಿಗೆ ಮಾಹಿತಿ ನೀಡದೆ ಸ್ಥಳೀಯ ಮಟ್ಟದಲ್ಲೆ ಶೆಟ್ಟಿ ಅವರನ್ನು ಬರಮಾಡಿಕೊಳ್ಳಲಾಗಿತ್ತು. [ಶೆಟ್ಟಿಗೆ ಲಡ್ಡು ಕೊಟ್ಟ ಕಾಂಗ್ರೆಸ್]

ಬಿಜೆಪಿ ಸರ್ಕಾರವಿದ್ದಾಗ ಸಚಿವರಾಗಿದ್ದ ಕೃಷ್ಣಯ್ಯ ಶೆಟ್ಟಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಆದ್ದರಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಹೈ ಕಮಾಂಡ್ ಅಂತಿಮ ಒಪ್ಪಿಗೆ ನೀಡಿರಲಿಲ್ಲ. ಆದ್ದರಿಂದ ಅವರು ಕಾಂಗ್ರೆಸ್ ಪಕ್ಷಕ್ಕೆ ಸ್ಥಳೀಯ ಮಟ್ಟದಲ್ಲಿ ಮಾತ್ರ ಸೇರ್ಪಡೆಗೊಂಡಿದ್ದರು. [ಕಾಂಗ್ರೆಸ್ ಸೇರಿದ ಶೆಟ್ಟರು]
ಸದ್ಯ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷಾಂತರದ ಪರ್ವ ಆರಂಭವಾಗಿರುವಾಗ, ಕೃಷ್ಣಯ್ಯ ಶೆಟ್ಟಿ ಅವರಿಗೆ ಕಾಂಗ್ರೆಸ್ ಬಾಗಿಲು ತೆರೆಯಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೆಟ್ಟಿ ಪಕ್ಷ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಪತ್ರವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕೆಪಿಸಿಸಿಗೆ ರವಾನಿಸಿದ್ದಾರೆ.
ಮನಿಯಪ್ಪ ಬಾಯಿಗೆ ಲಡ್ಡು : ಲಡ್ಡು ಹಂಚಿಕೆ ಖ್ಯಾತಿಯ ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ ಸೇರುವುದರಿಂದ ಕೋಲಾರದಿಂದ ಮರು ಆಯ್ಕೆ ಬಯಸಿರುವ ಮುನಿಯಪ್ಪ ಅವರ ಕೈ ಮತ್ತಷ್ಟು ಬಲವಾಗಲಿದೆ. ಮಾಲೂರು ಕ್ಷೇತ್ರದ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿರುವ ಕೃಷ್ಣಯ್ಯ ಶೆಟ್ಟಿ ಅಪಾರ ಬೆಂಬಲಿಗರನ್ನು ಹೊಂದಿದ್ದಾರೆ.
ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ ಸೇರುವುದರಿಂದ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲ ಹೆಚ್ಚಲಿದೆ. ರಾಜಕೀಯ ಲಾಭದ ಉದ್ದೇಶವೇ ಕೃಷ್ಣಯ್ಯ ಶೆಟ್ಟಿ ಸೇರ್ಪಡೆ ಹಿಂದಿದೆ ಎಂಬ ಮಾತುಗಳಿವೆ. ಸ್ವತಃ ಮುನಿಯಪ್ಪ ಅವರು ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿ ಕೃಷ್ಣಯ್ಯ ಶೆಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಶೆಟ್ಟರ ವಿರುದ್ಧ ಹಲವು ಪ್ರಕರಣಗಳು : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಹಲವಾರು ಆರೋಪಗಳಿವೆ. ರಾಚೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಒಳಗಾಗಿ ಜೈಲು ಶಿಕ್ಷೆಯನ್ನು ಶೆಟ್ಟರು ಅನುಭವಿಸಿದ್ದಾರೆ. ತಮ್ಮ ಸಹೋದರನ ಪಾಲುದಾರಿಕೆಯ ಸಂಸ್ಥೆಗೆ ಸಾಲ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗೆ ಸಲ್ಲಿಸಿದ ಆರೋಪವಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications