ಕೃಷ್ಣಯ್ಯ ಶೆಟ್ಟರಿಗೆ ತೆರೆಯಿತು ಕಾಂಗ್ರೆಸ್ ಬಾಗಿಲು!
ಬೆಂಗಳೂರು, ಮಾ. 24 : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಮತ್ತೊಮ್ಮೆ ಕಾಂಗ್ರೆಸ್ ಬಾಗಿಲು ತೆರೆದಿದೆ. ಕಾಂಗ್ರೆಸ್ ಹೈ ಕಮಾಂಡ್ ನಾಯಕರು ಕೃಷ್ಣಯ್ಯ ಶೆಟ್ಟಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ನೀಡಿದ್ದಾರೆ. ಇದರಿಂದ ಕೋಲಾರ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರ ಬಲ ಹೆಚ್ಚಲಿದೆ.
ಕರ್ನಾಟಕದ ವಿಧಾನಸಭೆ ಚುನಾವಣೆಯ ಕಳೆದ ಬಳಿಕ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಮಧ್ಯಸ್ಥಿಕೆಯಲ್ಲಿ ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ, ಕೆಪಿಸಿಸಿ ಹಾಗೂ ಎಐಸಿಸಿಗೆ ಮಾಹಿತಿ ನೀಡದೆ ಸ್ಥಳೀಯ ಮಟ್ಟದಲ್ಲೆ ಶೆಟ್ಟಿ ಅವರನ್ನು ಬರಮಾಡಿಕೊಳ್ಳಲಾಗಿತ್ತು. [ಶೆಟ್ಟಿಗೆ ಲಡ್ಡು ಕೊಟ್ಟ ಕಾಂಗ್ರೆಸ್]

ಬಿಜೆಪಿ ಸರ್ಕಾರವಿದ್ದಾಗ ಸಚಿವರಾಗಿದ್ದ ಕೃಷ್ಣಯ್ಯ ಶೆಟ್ಟಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ಆದ್ದರಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಹೈ ಕಮಾಂಡ್ ಅಂತಿಮ ಒಪ್ಪಿಗೆ ನೀಡಿರಲಿಲ್ಲ. ಆದ್ದರಿಂದ ಅವರು ಕಾಂಗ್ರೆಸ್ ಪಕ್ಷಕ್ಕೆ ಸ್ಥಳೀಯ ಮಟ್ಟದಲ್ಲಿ ಮಾತ್ರ ಸೇರ್ಪಡೆಗೊಂಡಿದ್ದರು. [ಕಾಂಗ್ರೆಸ್ ಸೇರಿದ ಶೆಟ್ಟರು]
ಸದ್ಯ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷಾಂತರದ ಪರ್ವ ಆರಂಭವಾಗಿರುವಾಗ, ಕೃಷ್ಣಯ್ಯ ಶೆಟ್ಟಿ ಅವರಿಗೆ ಕಾಂಗ್ರೆಸ್ ಬಾಗಿಲು ತೆರೆಯಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೆಟ್ಟಿ ಪಕ್ಷ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಪತ್ರವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕೆಪಿಸಿಸಿಗೆ ರವಾನಿಸಿದ್ದಾರೆ.
ಮನಿಯಪ್ಪ ಬಾಯಿಗೆ ಲಡ್ಡು : ಲಡ್ಡು ಹಂಚಿಕೆ ಖ್ಯಾತಿಯ ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ ಸೇರುವುದರಿಂದ ಕೋಲಾರದಿಂದ ಮರು ಆಯ್ಕೆ ಬಯಸಿರುವ ಮುನಿಯಪ್ಪ ಅವರ ಕೈ ಮತ್ತಷ್ಟು ಬಲವಾಗಲಿದೆ. ಮಾಲೂರು ಕ್ಷೇತ್ರದ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿರುವ ಕೃಷ್ಣಯ್ಯ ಶೆಟ್ಟಿ ಅಪಾರ ಬೆಂಬಲಿಗರನ್ನು ಹೊಂದಿದ್ದಾರೆ.
ಕೃಷ್ಣಯ್ಯ ಶೆಟ್ಟಿ ಕಾಂಗ್ರೆಸ್ ಸೇರುವುದರಿಂದ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲ ಹೆಚ್ಚಲಿದೆ. ರಾಜಕೀಯ ಲಾಭದ ಉದ್ದೇಶವೇ ಕೃಷ್ಣಯ್ಯ ಶೆಟ್ಟಿ ಸೇರ್ಪಡೆ ಹಿಂದಿದೆ ಎಂಬ ಮಾತುಗಳಿವೆ. ಸ್ವತಃ ಮುನಿಯಪ್ಪ ಅವರು ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿ ಕೃಷ್ಣಯ್ಯ ಶೆಟ್ಟಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಶೆಟ್ಟರ ವಿರುದ್ಧ ಹಲವು ಪ್ರಕರಣಗಳು : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಹಲವಾರು ಆರೋಪಗಳಿವೆ. ರಾಚೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಒಳಗಾಗಿ ಜೈಲು ಶಿಕ್ಷೆಯನ್ನು ಶೆಟ್ಟರು ಅನುಭವಿಸಿದ್ದಾರೆ. ತಮ್ಮ ಸಹೋದರನ ಪಾಲುದಾರಿಕೆಯ ಸಂಸ್ಥೆಗೆ ಸಾಲ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗೆ ಸಲ್ಲಿಸಿದ ಆರೋಪವಿದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications