KRS Dam: ಉತ್ತಮ ಮಳೆಗೆ ಕೆಆರ್ಎಸ್ ಡ್ಯಾಂ ಒಳಹರಿವು ಹೆಚ್ಚಳ, ಅಪ್ಡೇಟ್ಸ್ ಇಲ್ಲಿದೆ
ಬೆಂಗಳೂರು, ಮೇ 29: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುತ್ತಿದೆ. ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಜೀವನದಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕೃಷ್ಣ ರಾಜ ಸಾಗರ ಅಣೆಕಟ್ಟಿನಲ್ಲಿ (KRS Dam) ಒಳಹರಿವು ಹೆಚ್ಚಾಗಿದೆ. ಹಳೇ ಮೈಸೂರು ಭಾಗದ ವಿವಿಧೆಡೆ ಉತ್ತಮ ಮಳೆ ಆಗುತ್ತಿದೆ. ಕೊಡಗು, ಮಡಿಕೇರಿ, ತಲಕಾವೇರಿ ವ್ಯಾಪ್ತಿಯಲ್ಲಿ ಜೋರು ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ, KRS ಜಲಾಶಯದಲ್ಲಿ ನೀರಿನ ಸಂಗ್ರಹ ಏರಿಕೆ ಆಗಿದೆ.
ಮೈಸೂರಿಗೆ ಹತ್ತಿರವಿರುವ ಮಂಡ್ಯ ಜಿಲ್ಲೆಯ ಕನ್ನಂಬಾಡಿ ಗ್ರಾಮದಲ್ಲಿ 1931ರಲ್ಲಿ ನಿರ್ಮಿಸಿದ ಈ ಅಣೆಕಟ್ಟು ಲಕ್ಷಾಂತರ ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿಗೆ, ನಾಲ್ಕಾರು ಜಿಲ್ಲೆಗಳ ಜನರಿಗೆ ಕುಡಿಯಲು ನೀರೊದಗಿಸುತ್ತಿದೆ. ಕಳೆದ ಬೇಸಿಗೆ ವೇಳೆಯು ಉತ್ತಮ ನೀರಿನ ಸಾಮರ್ಥ್ಯ ಹೊಂದಿದ್ದರಿಂದಲೇ ಈ ಬಾರಿ ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುಡಿಯಲು ನೀರಿಗೆ ಹಾಹಾಕಾರ ಎದುರಾಗಲಿಲ್ಲ.

ಬೇಸಿಗೆ ಕಳೆದು ಮಳೆಗಾಲ ಎದುರಾಗಿದ್ದು, ಮುಂಗಾರು ಉತ್ತಮ ಮಳೆ ಸುರಿಸುತ್ತಿದೆ. KRS ಜಲಾಶಯ ಹಿಂಭಾಗದ ಪ್ರದೇಶಗಳಲ್ಲಿ ಉತ್ತಮ ಮಳೆ ಆಗುತ್ತಿದೆ. ಮೇ 29ರ ಬೆಳಗ್ಗೆ 08 ಗಂಟೆವರೆಗಿನ ಮಾಹಿತಿ ಪ್ರಕಾರ, KRS ಡ್ಯಾಂ ನಲ್ಲಿ 98 ಅಡಿವರೆಗೆ ನೀರಿನ ಸಂಗ್ರಹವಾಗಿದೆ. ಒಟ್ಟು 124.80 ಅಡಿ ಜಲಾಶಯವು ಈ ಮುಂಗಾರು ಋತುವಿನಲ್ಲಿ ಭರ್ತಿಯಾಗಲಿದೆ.
ಒಟ್ಟು 49.452 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಕೆಆರ್ಎಸ್ ಜಲಾಶಯದಲ್ಲಿ ಸದ್ಯ 21. 282 ಟಿಎಂಸಿ ನೀರು ಸಂಗ್ರಹವಾಗಿದೆ. ಇತ್ತ ಕಾಲುವೆಗಳಿಗೂ ನೀರನ್ನು (50 ಕ್ಯೂಸೆಕ್ಸ್) ಹೊರ ಬಿಡಲಾಗುತ್ತದೆ. ಜಲಾಶದ ಒಳಹರಿವು 22,788.ಕ್ಯೂಸೆಕ್ಸ್ ನಷ್ಟು ಹೆಚ್ಚಾಗಿದೆ. ಹೊರ ಹರಿವು 630 ಕ್ಯೂಸೆಕ್ಸ್ ಇದೆ. ಒಟ್ಟು ನೀರು ಸಂಗ್ರಹಣೆಯಲ್ಲಿ ಶೇಕಡಾ 100ರಲ್ಲಿ ಹಾಲಿ ಶೇಕಡಾ 43ರಷ್ಟು ನೀರಿನ ಸಂಗ್ರಹವಿದೆ.
#KRS Dam - Mandya
— ರವಿ ಕೀರ್ತಿ ಗೌಡ (@ravikeerthi22) May 29, 2025
29th May 2025 , 8 AM
FRL - 124.80 ft
PRL - 98 ft
Storage - 21.282 / 49.452 TMC
Inflow - 22,788 cusecs
Outflow - River : 580 cusecs
Canal : 50 cusecs
Total Outflow - 630 cusecs
% Storage - 43 %
Live Capacity - 12.903 TMC
ಮಳೆ ಮುನ್ಸೂಚನೆ, ಜಲಾಶಯ ಸಂಗ್ರಹ ಹೆಚ್ಚಳ
ಹವಾಮಾನ ಇಲಾಖೆ ಪ್ರಕಾರ, ಮುಂಗಾರು ಮಳೆ ಇನ್ನಷ್ಟು ದಿನಗಳ ಕಾಲ ಹೀಗೆ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಹಾಗೂ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುವ ಸಂಭವವಿದೆ. ಮೈಸೂರು, ಕೊಡಗು, ಮಡಿಕೇರಿ, ಸೋಮವಾರಪೇಟೆ, ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ ಇದೆ. ನಾವಿನ್ನು ಮುಂಗಾರು ಮಳೆ ಆರಂಭದಲ್ಲಿದ್ದೇವೆ. ಈ ಋತುವಿನ ಮಧ್ಯಭಾಗದ ಹೊತ್ತಿಗೆ ಕೆಆರ್ಎಸ್ ಡ್ಯಾಂ ಜೊತೆಗೆ ಹಾರಂಗಿ, ಕಬಿನಿ, ಆಲಮಟ್ಟಿ, ತುಂಗಭದ್ರಾ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಉತ್ತಮ ನೀರಿನ ಸಂಗ್ರಹ ಕಾಣಬಹುದಾಗಿದೆ.
ಈ ಮೇಲಿನ ಪ್ರಮುಖ ಡ್ಯಾಂಗಳ ಪೈಕಿ ಜೂನ್ ಎರಡನೇ ವಾರದಲ್ಲೇ ಕೃಷ್ಣ ರಾಜ ಸಾಗರ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ನೈಋತ್ಯ ಮುಂಗಾರು ಮಳೆ ಮುಂದುವರಿದಿದೆ. ಹೀಗೆ ಜೋರು ಮಳೆಯು ಜಲಾನಯಶನ ಪ್ರದೇಶಗಳಲ್ಲಿ ಸುರಿದರೆ ಜಲಾಶಯದ ಒಳಹರಿವು ತೀವ್ರ ಪ್ರಮಾಣದಲ್ಲಿ ಹೆಚ್ಚಾಗುವ ನಿರೀಕ್ಷೆ ಇದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications