KRS Dam: ಉತ್ತಮ ಮಳೆಗೆ ಕೆಆರ್ಎಸ್ ಡ್ಯಾಂ ಒಳಹರಿವು ಹೆಚ್ಚಳ, ಅಪ್ಡೇಟ್ಸ್ ಇಲ್ಲಿದೆ
ಬೆಂಗಳೂರು, ಮೇ 29: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುತ್ತಿದೆ. ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಜೀವನದಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕೃಷ್ಣ ರಾಜ ಸಾಗರ ಅಣೆಕಟ್ಟಿನಲ್ಲಿ (KRS Dam) ಒಳಹರಿವು ಹೆಚ್ಚಾಗಿದೆ. ಹಳೇ ಮೈಸೂರು ಭಾಗದ ವಿವಿಧೆಡೆ ಉತ್ತಮ ಮಳೆ ಆಗುತ್ತಿದೆ. ಕೊಡಗು, ಮಡಿಕೇರಿ, ತಲಕಾವೇರಿ ವ್ಯಾಪ್ತಿಯಲ್ಲಿ ಜೋರು ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ, KRS ಜಲಾಶಯದಲ್ಲಿ ನೀರಿನ ಸಂಗ್ರಹ ಏರಿಕೆ ಆಗಿದೆ.
ಮೈಸೂರಿಗೆ ಹತ್ತಿರವಿರುವ ಮಂಡ್ಯ ಜಿಲ್ಲೆಯ ಕನ್ನಂಬಾಡಿ ಗ್ರಾಮದಲ್ಲಿ 1931ರಲ್ಲಿ ನಿರ್ಮಿಸಿದ ಈ ಅಣೆಕಟ್ಟು ಲಕ್ಷಾಂತರ ಹೆಕ್ಟೇರ್ ಪ್ರದೇಶಗಳಿಗೆ ನೀರಾವರಿಗೆ, ನಾಲ್ಕಾರು ಜಿಲ್ಲೆಗಳ ಜನರಿಗೆ ಕುಡಿಯಲು ನೀರೊದಗಿಸುತ್ತಿದೆ. ಕಳೆದ ಬೇಸಿಗೆ ವೇಳೆಯು ಉತ್ತಮ ನೀರಿನ ಸಾಮರ್ಥ್ಯ ಹೊಂದಿದ್ದರಿಂದಲೇ ಈ ಬಾರಿ ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುಡಿಯಲು ನೀರಿಗೆ ಹಾಹಾಕಾರ ಎದುರಾಗಲಿಲ್ಲ.

ಬೇಸಿಗೆ ಕಳೆದು ಮಳೆಗಾಲ ಎದುರಾಗಿದ್ದು, ಮುಂಗಾರು ಉತ್ತಮ ಮಳೆ ಸುರಿಸುತ್ತಿದೆ. KRS ಜಲಾಶಯ ಹಿಂಭಾಗದ ಪ್ರದೇಶಗಳಲ್ಲಿ ಉತ್ತಮ ಮಳೆ ಆಗುತ್ತಿದೆ. ಮೇ 29ರ ಬೆಳಗ್ಗೆ 08 ಗಂಟೆವರೆಗಿನ ಮಾಹಿತಿ ಪ್ರಕಾರ, KRS ಡ್ಯಾಂ ನಲ್ಲಿ 98 ಅಡಿವರೆಗೆ ನೀರಿನ ಸಂಗ್ರಹವಾಗಿದೆ. ಒಟ್ಟು 124.80 ಅಡಿ ಜಲಾಶಯವು ಈ ಮುಂಗಾರು ಋತುವಿನಲ್ಲಿ ಭರ್ತಿಯಾಗಲಿದೆ.
ಒಟ್ಟು 49.452 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಕೆಆರ್ಎಸ್ ಜಲಾಶಯದಲ್ಲಿ ಸದ್ಯ 21. 282 ಟಿಎಂಸಿ ನೀರು ಸಂಗ್ರಹವಾಗಿದೆ. ಇತ್ತ ಕಾಲುವೆಗಳಿಗೂ ನೀರನ್ನು (50 ಕ್ಯೂಸೆಕ್ಸ್) ಹೊರ ಬಿಡಲಾಗುತ್ತದೆ. ಜಲಾಶದ ಒಳಹರಿವು 22,788.ಕ್ಯೂಸೆಕ್ಸ್ ನಷ್ಟು ಹೆಚ್ಚಾಗಿದೆ. ಹೊರ ಹರಿವು 630 ಕ್ಯೂಸೆಕ್ಸ್ ಇದೆ. ಒಟ್ಟು ನೀರು ಸಂಗ್ರಹಣೆಯಲ್ಲಿ ಶೇಕಡಾ 100ರಲ್ಲಿ ಹಾಲಿ ಶೇಕಡಾ 43ರಷ್ಟು ನೀರಿನ ಸಂಗ್ರಹವಿದೆ.
#KRS Dam - Mandya
— ರವಿ ಕೀರ್ತಿ ಗೌಡ (@ravikeerthi22) May 29, 2025
29th May 2025 , 8 AM
FRL - 124.80 ft
PRL - 98 ft
Storage - 21.282 / 49.452 TMC
Inflow - 22,788 cusecs
Outflow - River : 580 cusecs
Canal : 50 cusecs
Total Outflow - 630 cusecs
% Storage - 43 %
Live Capacity - 12.903 TMC
ಮಳೆ ಮುನ್ಸೂಚನೆ, ಜಲಾಶಯ ಸಂಗ್ರಹ ಹೆಚ್ಚಳ
ಹವಾಮಾನ ಇಲಾಖೆ ಪ್ರಕಾರ, ಮುಂಗಾರು ಮಳೆ ಇನ್ನಷ್ಟು ದಿನಗಳ ಕಾಲ ಹೀಗೆ ಮುಂದುವರಿಯಲಿದೆ. ಕರ್ನಾಟಕದ ಕರಾವಳಿ ಹಾಗೂ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುವ ಸಂಭವವಿದೆ. ಮೈಸೂರು, ಕೊಡಗು, ಮಡಿಕೇರಿ, ಸೋಮವಾರಪೇಟೆ, ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ ಇದೆ. ನಾವಿನ್ನು ಮುಂಗಾರು ಮಳೆ ಆರಂಭದಲ್ಲಿದ್ದೇವೆ. ಈ ಋತುವಿನ ಮಧ್ಯಭಾಗದ ಹೊತ್ತಿಗೆ ಕೆಆರ್ಎಸ್ ಡ್ಯಾಂ ಜೊತೆಗೆ ಹಾರಂಗಿ, ಕಬಿನಿ, ಆಲಮಟ್ಟಿ, ತುಂಗಭದ್ರಾ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಉತ್ತಮ ನೀರಿನ ಸಂಗ್ರಹ ಕಾಣಬಹುದಾಗಿದೆ.
ಈ ಮೇಲಿನ ಪ್ರಮುಖ ಡ್ಯಾಂಗಳ ಪೈಕಿ ಜೂನ್ ಎರಡನೇ ವಾರದಲ್ಲೇ ಕೃಷ್ಣ ರಾಜ ಸಾಗರ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ನೈಋತ್ಯ ಮುಂಗಾರು ಮಳೆ ಮುಂದುವರಿದಿದೆ. ಹೀಗೆ ಜೋರು ಮಳೆಯು ಜಲಾನಯಶನ ಪ್ರದೇಶಗಳಲ್ಲಿ ಸುರಿದರೆ ಜಲಾಶಯದ ಒಳಹರಿವು ತೀವ್ರ ಪ್ರಮಾಣದಲ್ಲಿ ಹೆಚ್ಚಾಗುವ ನಿರೀಕ್ಷೆ ಇದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications