KRS Dam: ಕೆಆರ್ಎಸ್ ಜಲಾಶಯದ ಒಳಹರಿವು 39,276 ಕ್ಯೂಸೆಕ್ಸ್ಗೆ ಹೆಚ್ಚಳ; ಕಬಿನಿ ಒಳಹರಿವು ಭಾರಿ ಏರಿಕೆ
ಕೇರಳ ಮತ್ತು ಕರ್ನಾಟಕದ ಪಶ್ಚಿಮ ಘಟ್ಟಗಳು ಮತ್ತು ಕಾವೇರಿ ಜಲಾಯನಯನ ಪ್ರದೇಶ ಸೇರಿ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಉಕ್ಕಿ ಹರಿಯುವಂತೆ ಮಾಡಿದೆ. ಜಲಾಶಯಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಅಬ್ಬರಿಸುವ ಸೂಚನೆ ಕೊಟ್ಟಿದೆ.
ಕೃಷ್ಣರಾಜ ಸಾಗರ ಜಲಾಶಯದ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು ಈ ಭಾಗದ ರೈತರಲ್ಲಿ ಖುಷಿ ತಂದಿದೆ. ಜುಲೈ ಮಧ್ಯಭಾಗದಲ್ಲೇ ಜಲಾಶಯದ ಶೇಕಡ 60ಕ್ಕೂ ಹೆಚ್ಚು ಭರ್ತಿಯಾಗಿದ್ದು ಇದೇ ರೀತಿ ಮುಂದುವರೆದರೆ ಕೆಲವು ದಿನಗಳಲ್ಲೇ ತುಂಬುವ ಸಾಧ್ಯತೆ ಕೂಡ ಇದೆ.

ಕಳೆದ ಎರಡು ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಕೆಆರ್ ಎಸ್ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ 39,276 ಕ್ಯೂಸೆಕ್ಸ್ಗೆ ಏರಿಕೆಯಾಗಿದೆ. 124.80 ಗರಿಷ್ಠ ಅಡಿ ಸಾಮರ್ಥ್ಯವಿರುವ ಜಲಾಶಯದಲ್ಲಿ ಸದ್ಯ 108.80 ಅಡಿ ನೀರು ಭರ್ತಿಯಾಗಿದೆ. 49.452 ಟಿಎಂಸಿ ಒಟ್ಟು ಸಂಗ್ರಹ ಸಾಮರ್ಥ್ಯವಿದ್ದು, ಈಗ 30.532 ಟಿಎಂಸಿ ನೀರು ಸಂಗ್ರಹದಲ್ಲಿದೆ. ಜಲಾಶಯದದಿಂದ ಕಾಲುವೆಗೆ 2289 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದ್ದು, ನದಿಗೆ 579 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ.
ಕಬಿನಿ ಜಲಾಶಯಕ್ಕೆ ಭಾರಿ ನೀರು
ಕಬಿನಿ ಜಲಾಶಯಕ್ಕೂ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು ಹೆಚ್ಚಿನ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ. ಸದ್ಯ 29,310 ಕ್ಯೂಸೆಕ್ಸ್ ಒಳಹರಿವು ಇದ್ದು 36,000 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ. 19.52 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 18.47 ಟಿಎಂಸಿ ನೀರು ಭರ್ತಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.
#KRS Dam - Mandya
— ರವಿ ಕೀರ್ತಿ ಗೌಡ (@ravikeerthi22) July 16, 2024
16th July 2024 , 4 PM
FRL - 124.80 ft
PRL - 108.80 ft
Storage - 30.532 / 49.452 TMC
Inflow - 39,276 cusecs
Outflow - River : 579 cusecs
Canal : 1710 cusecs
Total Outflow - 2289 cusecs
Storage - 61.74%
ಕಾವೇರಿ ಕೊಳ್ಳದ ವ್ಯಾಪ್ತಿಯಲ್ಲಿ ಬರುವ ಹೇಮಾವತಿ ಜಲಾಶಯಕ್ಕೆ 22,100 ಕ್ಯೂಸೆಕ್ಸ್ ಒಳಹರಿವು ಇದ್ದು, ಹಾರಂಗಿ ಜಲಾಶಯಕ್ಕೆ 13,600 ಕ್ಯೂಸೆಕ್ಸ್ ಒಳಹರಿವು ಇದೆ.
ಭಾರಿ ಮಳೆ ಎಚ್ಚರಿಕೆ
ಜುಲೈ 18ರವರೆಗೂ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೇರಳ ವಯನಾಡು ಪ್ರದೇಶಕ್ಕೂ ಕೂಡ ರೆಡ್ ಅಲರ್ಟ್ ನೀಡಲಾಗಿದೆ. ಮಳೆ ಹೀಗೆ ಮುಂದುವರೆದರೆ ಕೆಆರ್ ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರಲಿದೆ.
ಕಳೆದ ವರ್ಷ ಬರಗಾಲದಿಂದ ಬೆಳೆ ಕೂಡ ಬೆಳೆಯಲಾಗದೆ ನಷ್ಟ ಅನುಭವಿಸಿದ್ದ ಕಾವೇರಿ ಜಲಾನಯನ ಭಾಗದ ರೈತರಿಗೆ ಈ ಬಾರಿ ಮಳೆ ಖುಷಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಹೀಗೆ ವ್ಯಾಪಕ ಮಳೆಯಾದರೆ ತಮಿಳುನಾಡಿನ ಕ್ಯಾತೆ ಕೂಡ ತಪ್ಪಲಿದ್ದು, ರಾಜ್ಯದ ರೈತರು ನೆಮ್ಮದಿಯಾಗಿ ಬೆಳೆ ಬೆಳೆಯಬಹುದಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications